<p><strong>ಕೋಲಾರ: </strong>‘ಪ್ರತಿನಿತ್ಯ ಎರಡು ವಾರ್ಡ್ಗಳಂತೆ ನಗರದ 35 ವಾರ್ಡ್ಗಳಿಗೂ ಭೇಟಿ ಕೊಟ್ಟು ಜನರ ಕುಂದು ಕೊರತೆ ಆಲಿಸಿ ಮೂಲಸೌಕರ್ಯ ಕಲ್ಪಿಸುತ್ತೇವೆ’ ಎಂದು ನಗರಸಭೆ ಅಧ್ಯಕ್ಷೆ ಶ್ವೇತಾ ಭರವಸೆ ನೀಡಿದರು.</p>.<p>ನಗರದ ಒಂದು ಮತ್ತು ಎರಡನೇ ವಾರ್ಡ್ಗೆ ಗುರುವಾರ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ ಮಾತನಾಡಿ, ‘ಟಮಕದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಜನರಿಗೆ ತೀವ್ರ ಸಮಸ್ಯೆಯಾಗಿದೆ. ಈ ಘಟಕವನ್ನು ಶೀಘ್ರವೇ ದುರಸ್ತಿ ಮಾಡಿಸಿ. ವಾರ್ಡ್ನಲ್ಲಿ 2 ದಿನಕೊಮ್ಮೆ ಕಸ ಸಂಗ್ರಹಣೆ ಮತ್ತು ವಿಲೇವಾರಿ ಪ್ರಕ್ರಿಯೆ ನಡೆಯಬೇಕು’ ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಕುಡಾ ಲೇಔಟ್ನಲ್ಲಿ ಅಮೃತ್ ಯೋಜನೆಯಡಿ ನಿರ್ಮಿಸಿರುವ ಉದ್ಯಾನವು ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ. ಉದ್ಯಾನದಲ್ಲಿ ಕಸ ರಾಶಿಯಾಗಿ ಬಿದ್ದಿದ್ದು, ಸಾರ್ವಜನಿಕರು ಒಳಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ನಗರಸಭೆ ಸಿಬ್ಬಂದಿಯಿಂದ ತಿಂಗಳಿಗೆ 2 ಬಾರಿ ಉದ್ಯಾನ ಸ್ವಚ್ಛ ಮಾಡಿಸಿ’ ಎಂದು ತಿಳಿಸಿದರು.</p>.<p>‘ಗಾಂಧಿನಗರ ವಾರ್ಡ್ನಲ್ಲಿ ಕಸ, ಕುಡಿಯುವ ನೀರು ಮತ್ತು ಒಳಚರಂಡಿ ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುತ್ತೇವೆ. ಸ್ಮಶಾನಕ್ಕೆ ನೀರಿನ ಸೌಲಭ್ಯ ಕಲ್ಪಿಸುತ್ತೇವೆ ಹಾಗೂ ವಿದ್ಯುತ್ ದೀಪ ಅಳವಡಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಮಂಜುನಾಥ್, ಉಪಾಧ್ಯಕ್ಷ ಪ್ರವೀಣ್ಗೌಡ, ಆಯುಕ್ತ ಎಸ್.ಪ್ರಸಾದ್, ಕಿರಿಯ ಎಂಜಿನಿಯರ್ ಪೂರ್ಣಿಮಾ, ಪರಿಸರ ಎಂಜಿನಿಯರ್ ಪುನೀತ್, ಎಪಿಎಂಸಿ ಸದಸ್ಯ ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಪ್ರತಿನಿತ್ಯ ಎರಡು ವಾರ್ಡ್ಗಳಂತೆ ನಗರದ 35 ವಾರ್ಡ್ಗಳಿಗೂ ಭೇಟಿ ಕೊಟ್ಟು ಜನರ ಕುಂದು ಕೊರತೆ ಆಲಿಸಿ ಮೂಲಸೌಕರ್ಯ ಕಲ್ಪಿಸುತ್ತೇವೆ’ ಎಂದು ನಗರಸಭೆ ಅಧ್ಯಕ್ಷೆ ಶ್ವೇತಾ ಭರವಸೆ ನೀಡಿದರು.</p>.<p>ನಗರದ ಒಂದು ಮತ್ತು ಎರಡನೇ ವಾರ್ಡ್ಗೆ ಗುರುವಾರ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ ಮಾತನಾಡಿ, ‘ಟಮಕದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಜನರಿಗೆ ತೀವ್ರ ಸಮಸ್ಯೆಯಾಗಿದೆ. ಈ ಘಟಕವನ್ನು ಶೀಘ್ರವೇ ದುರಸ್ತಿ ಮಾಡಿಸಿ. ವಾರ್ಡ್ನಲ್ಲಿ 2 ದಿನಕೊಮ್ಮೆ ಕಸ ಸಂಗ್ರಹಣೆ ಮತ್ತು ವಿಲೇವಾರಿ ಪ್ರಕ್ರಿಯೆ ನಡೆಯಬೇಕು’ ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಕುಡಾ ಲೇಔಟ್ನಲ್ಲಿ ಅಮೃತ್ ಯೋಜನೆಯಡಿ ನಿರ್ಮಿಸಿರುವ ಉದ್ಯಾನವು ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ. ಉದ್ಯಾನದಲ್ಲಿ ಕಸ ರಾಶಿಯಾಗಿ ಬಿದ್ದಿದ್ದು, ಸಾರ್ವಜನಿಕರು ಒಳಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ನಗರಸಭೆ ಸಿಬ್ಬಂದಿಯಿಂದ ತಿಂಗಳಿಗೆ 2 ಬಾರಿ ಉದ್ಯಾನ ಸ್ವಚ್ಛ ಮಾಡಿಸಿ’ ಎಂದು ತಿಳಿಸಿದರು.</p>.<p>‘ಗಾಂಧಿನಗರ ವಾರ್ಡ್ನಲ್ಲಿ ಕಸ, ಕುಡಿಯುವ ನೀರು ಮತ್ತು ಒಳಚರಂಡಿ ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುತ್ತೇವೆ. ಸ್ಮಶಾನಕ್ಕೆ ನೀರಿನ ಸೌಲಭ್ಯ ಕಲ್ಪಿಸುತ್ತೇವೆ ಹಾಗೂ ವಿದ್ಯುತ್ ದೀಪ ಅಳವಡಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಮಂಜುನಾಥ್, ಉಪಾಧ್ಯಕ್ಷ ಪ್ರವೀಣ್ಗೌಡ, ಆಯುಕ್ತ ಎಸ್.ಪ್ರಸಾದ್, ಕಿರಿಯ ಎಂಜಿನಿಯರ್ ಪೂರ್ಣಿಮಾ, ಪರಿಸರ ಎಂಜಿನಿಯರ್ ಪುನೀತ್, ಎಪಿಎಂಸಿ ಸದಸ್ಯ ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>