<p><strong>ಕೋಲಾರ:</strong> ತಾಲ್ಲೂಕಿನ ವಿಟ್ಟಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕೋಲಾರ ಈಶಾನ್ಯ ಕ್ಷೇತ್ರ ಮಟ್ಟದ ಅತ್ಯುತ್ತಮ ಬಿಎಂಸಿ ಕೇಂದ್ರ ಪ್ರಶಸ್ತಿ ಲಭಿಸಿದೆ.</p>.<p>ಕೋಮುಲ್ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಕೆ.ವೈ.ನಂಜೇಗೌಡ, ಸಂಘದ ಅಧ್ಯಕ್ಷ ಮಂಜುನಾಥ್ ಹಾಗೂ ಕಾರ್ಯದರ್ಶಿ ಡೇರಿ ವೆಂಕಟೇಶ್ ಅವರಿಗೆ ಪ್ರದಾನ ಮಾಡಿದರು.</p>.<p>ಮಂಜುನಾಥ್ ಹಾಗೂ ವೆಂಕಟೇಶ್ ಮಾತನಾಡಿ, ‘ಈ ಗೌರವವು ಸಂಘದ ಹಾಲು ಉತ್ಪಾದಕರಿಗೆ ಸಲ್ಲುತ್ತದೆ. ಡೇರಿಯಲ್ಲಿ ಪಶು ಆಹಾರದಲ್ಲಿ ಮೂಟೆಗೆ ₹ 100 ಕಡಿಮೆ, ಮಿನರಲ್ ಮಿಚೆಲ್ ಮತ್ತು ಜೋಳ ಉಚಿತವಾಗಿ ಉತ್ಪಾದಕರಿಗೆ ನೀಡಲಾಗುತ್ತಿದೆ. ಪ್ರತಿ ವರ್ಷ ದೀಪಾವಳಿಗೆ ಬೋನಸ್ ಮತ್ತು ತುಪ್ಪ, ಸರ್ವ ಸದಸ್ಯರ ಸಭೆಯಲ್ಲಿ ಉಡುಗೊರೆ ನೀಡಲಾಗುತ್ತಿದೆ. ಈ ಸಾಲಿನಲ್ಲಿ ₹ 9.76 ಲಕ್ಷ ನಿವ್ವಳ ಲಾಭ ಗಳಿಸಿದೆ’ ಎಂದರು.</p>.<p>ನಿರ್ದೇಶಕರಾದ ವಡಗೂರು ಹರೀಶ್, ಜಯಸಿಂಹ ಕೃಷ್ಣಪ್ಪ, ಕಾಡೇನಹಳ್ಳಿ ನಾಗರಾಜ್, ಹನುಮೇಶ್, ಚಂಜಿಮಲೆ ರಮೇಶ್, ಚೆಲುವನಹಳ್ಳಿ ನಾಗರಾಜಪ್ಪ, ಕೆ.ಕೆ.ಮಂಜು, ಶ್ರೀನಿವಾಸ್, ಕೋಮುಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಗೋಪಾಲಮೂರ್ತಿ, ಅಡ್ಮಿನ್ ನಾಗೇಶ್, ಉಪವ್ಯವಸ್ಥಾಪಕ ಡಾ.ಮಹೇಶ್, ವಿಸ್ತರಣಾಧಿಕಾರಿ ನಾಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ತಾಲ್ಲೂಕಿನ ವಿಟ್ಟಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕೋಲಾರ ಈಶಾನ್ಯ ಕ್ಷೇತ್ರ ಮಟ್ಟದ ಅತ್ಯುತ್ತಮ ಬಿಎಂಸಿ ಕೇಂದ್ರ ಪ್ರಶಸ್ತಿ ಲಭಿಸಿದೆ.</p>.<p>ಕೋಮುಲ್ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಕೆ.ವೈ.ನಂಜೇಗೌಡ, ಸಂಘದ ಅಧ್ಯಕ್ಷ ಮಂಜುನಾಥ್ ಹಾಗೂ ಕಾರ್ಯದರ್ಶಿ ಡೇರಿ ವೆಂಕಟೇಶ್ ಅವರಿಗೆ ಪ್ರದಾನ ಮಾಡಿದರು.</p>.<p>ಮಂಜುನಾಥ್ ಹಾಗೂ ವೆಂಕಟೇಶ್ ಮಾತನಾಡಿ, ‘ಈ ಗೌರವವು ಸಂಘದ ಹಾಲು ಉತ್ಪಾದಕರಿಗೆ ಸಲ್ಲುತ್ತದೆ. ಡೇರಿಯಲ್ಲಿ ಪಶು ಆಹಾರದಲ್ಲಿ ಮೂಟೆಗೆ ₹ 100 ಕಡಿಮೆ, ಮಿನರಲ್ ಮಿಚೆಲ್ ಮತ್ತು ಜೋಳ ಉಚಿತವಾಗಿ ಉತ್ಪಾದಕರಿಗೆ ನೀಡಲಾಗುತ್ತಿದೆ. ಪ್ರತಿ ವರ್ಷ ದೀಪಾವಳಿಗೆ ಬೋನಸ್ ಮತ್ತು ತುಪ್ಪ, ಸರ್ವ ಸದಸ್ಯರ ಸಭೆಯಲ್ಲಿ ಉಡುಗೊರೆ ನೀಡಲಾಗುತ್ತಿದೆ. ಈ ಸಾಲಿನಲ್ಲಿ ₹ 9.76 ಲಕ್ಷ ನಿವ್ವಳ ಲಾಭ ಗಳಿಸಿದೆ’ ಎಂದರು.</p>.<p>ನಿರ್ದೇಶಕರಾದ ವಡಗೂರು ಹರೀಶ್, ಜಯಸಿಂಹ ಕೃಷ್ಣಪ್ಪ, ಕಾಡೇನಹಳ್ಳಿ ನಾಗರಾಜ್, ಹನುಮೇಶ್, ಚಂಜಿಮಲೆ ರಮೇಶ್, ಚೆಲುವನಹಳ್ಳಿ ನಾಗರಾಜಪ್ಪ, ಕೆ.ಕೆ.ಮಂಜು, ಶ್ರೀನಿವಾಸ್, ಕೋಮುಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಗೋಪಾಲಮೂರ್ತಿ, ಅಡ್ಮಿನ್ ನಾಗೇಶ್, ಉಪವ್ಯವಸ್ಥಾಪಕ ಡಾ.ಮಹೇಶ್, ವಿಸ್ತರಣಾಧಿಕಾರಿ ನಾಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>