ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವೇಕಾನಂದರು ಯುವ ಶಕ್ತಿಯ ಪ್ರತೀಕ

Last Updated 12 ಜನವರಿ 2021, 16:24 IST
ಅಕ್ಷರ ಗಾತ್ರ

ಕೋಲಾರ: ‘ಸದಾ ಚಿಂತನಾಶೀಲತೆಯ ವ್ಯಕ್ತಿಯಾಗಿದ್ದಸ್ವಾಮಿ ವಿವೇಕಾನಂದರು ಯುವಕ ಯುವತಿಯರಿಗೆ ಆದರ್ಶಪ್ರಾಯರು’ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜು ಅಭಿಪ್ರಾಯಪಟ್ಟರು.

ಇಲ್ಲಿನ ಬೆಂಗಳೂರು ಉತ್ತರ ವಿ.ವಿ ಆಡಳಿತ ಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಮಾತನಾಡಿ, ‘ರಾಮಕೃಷ್ಣ ಪರಮಹಂಸರ ಶಿಷ್ಯರಾದ ಸ್ವಾಮಿ ವಿವೇಕಾನಂದರು ಚಿಕ್ಕ ವಯಸ್ಸಿನಲ್ಲೇ ಭಾರತೀಯ ತತ್ವಶಾಸ್ತ್ರದಲ್ಲಿ ಅಪಾರ ಪಾಂಡಿತ್ಯ ಪಡೆದರು. ಅವರು ಭಾರತೀಯ ಧರ್ಮ ಮತ್ತು ಅಧ್ಯಾತ್ಮದ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು’ ಎಂದರು.

‘ಯುವ ಶಕ್ತಿಯ ಪ್ರತೀಕವಾದ ವಿವೇಕಾನಂದರು ಭಾರತೀಯತೆ ಮತ್ತು ಸಹಬಾಳ್ವೆ ಬಗ್ಗೆ ಸಮಾಜಕ್ಕೆ ಅರ್ಥಪೂರ್ಣ ಸಂದೇಶ ನೀಡಿದರು. ಧರ್ಮ ಸಮನ್ವಯ ಹಾಗೂ ಸರ್ವ ಧರ್ಮ ಗೌರವದ ಬಗ್ಗೆ ಪ್ರಪಂಚವೇ ಒಪ್ಪುವ ಸಂದೇಶ ನೀಡಿದ ಮಹಾನ್ ವ್ಯಕ್ತಿ’ ಎಂದು ಸ್ಮರಿಸಿದರು.

‘ವಿವೇಕಾನಂದರು ಕನ್ಯಾಕುಮಾರಿಯ ಬಂಡೆಯ ಮೇಲೆ ಯೋಗಾಭ್ಯಾಸ ನಡೆಸಿದರು. ತಪ್ಪು ದಾರಿಯತ್ತ ಸಾಗುತ್ತಿದ್ದ ಸಮಾಜವನ್ನು ಸರಿದಾರಿಗೆ ತರಲು ಪ್ರಯತ್ನಿಸಿದರು. ಯುವರ ಶಕ್ತಿಯಾಗಿದ್ದಾರೆ. ಆದರೆ ಮಾರ್ಗದರ್ಶನದ ಕೊರತೆ ಯುವ ಮನಸ್ಸುಗಳು ಬೇಡವಾದ ವಿಷಯದ ಕಡೆ ಗಮನ ಹರಿಸುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ವಿವೇಕಾನಂದರು ತಮ್ಮ 30ನೇ ವಯಸ್ಸಿನಲ್ಲೇ ವಿಶ್ವಧರ್ಮ ಸಮ್ಮೇಳನದಲ್ಲಿ ಮಾಡಿದ ಭಾಷಣ ಅವಿಸ್ಮರಣೀಯ. ಯುವಕರು ಜೀವನದಲ್ಲಿ ಅವರ ವಿಚಾರಧಾರೆ ಅಳವಡಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಬೆಂಗಳೂರು ಉತ್ತರ ವಿ.ವಿ ಕುಲಸಚಿವ ವೆಂಕಟೇಶ್‌ಮೂರ್ತಿ, ಅಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT