‘ಕೆ.ಸಿ ವ್ಯಾಲಿ ಯೋಜನೆಗೆ ನಮ್ಮ ವಿರೋಧವಿಲ್ಲ. ಪಕ್ಷ ಬೇರೆಯಾಗಿರಬಹುದು. ಆದರೆ, ಯೋಜನೆ ವಿಚಾರದಲ್ಲಿ ಒಂದೇ ಆಗಿರುತ್ತೇವೆ. ಈಗ ತಂತ್ರಜ್ಞಾನ ಸಾಕಷ್ಟು ಮುಂದುವರೆದಿದ್ದು, 3ನೇ ಹಂತದಲ್ಲಿ ನೀರು ಸಂಸ್ಕರಿಸಿ ಜಿಲ್ಲೆಯ ಕೆರೆಗಳಿಗೆ ಹರಿಸಬೇಕು. ಸರ್ಕಾರ ರಾಜಕೀಯ ಮಾಡುವುದು ಬಿಟ್ಟು ನೀರಿನ 3ನೇ ಹಂತದ ಸಂಸ್ಕರಣೆಗೆ ನಿರ್ಧಾರ ಕೈಗೊಳ್ಳಬೇಕು’ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.