<p><strong>ಕೋಲಾರ:</strong> ಮುಳಬಾಗಿಲು ತಾಲ್ಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಯನ್ನು ಥಳಿಸಿದ ಪ್ರಕರಣದಲ್ಲಿ ವಾರ್ಡನ್ ಮಹೇಶ್ ಗಿರಡ್ಡಿ ಎಂಬುವರನ್ನು ಅಮಾನತುಗೊಳಿಸಲಾಗಿದೆ.</p><p>‘ಪ್ರಜಾವಾಣಿ’ಯಲ್ಲಿ ಮಂಗಳವಾರ ಪ್ರಕಟವಾಗಿದ್ದ ‘ಬಾಸುಂಡೆ ಬರುವಂತೆ ವಿದ್ಯಾರ್ಥಿಗೆ ಥಳಿತ’ ವರದಿ ಆಧರಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎಸ್.ಕಾಂತರಾಜು ಆದೇಶ ಹೊರಡಿಸಿದ್ದಾರೆ. </p><p>ಅಮಾನತು ಆದೇಶದಲ್ಲಿ ‘ಪ್ರಜಾವಾಣಿ’ ವರದಿ ಉಲ್ಲೇಖಿಸಿದ್ದು, ಪ್ರಭಾರ ಪ್ರಾಂಶುಪಾಲ ಕುಮಾರ್ ರಾಜ್ ಅವರಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ. ದೈಹಿಕವಾಗಿ ಥಳಿಸಿ ಕರ್ತವ್ಯ ಲೋಪವೆಸಗಿರುವುದು ಕಂಡುಬಂದಿರುವುದರಿಂದ ಈ ಕ್ರಮ ವಹಿಸಲಾಗಿದೆ ಎಂದಿದ್ದಾರೆ. </p><p>ವಸತಿ ಶಾಲೆಯಲ್ಲಿ ಮಹೇಶ್ ಗಿರಡ್ಡಿ ಕಂಪ್ಯೂಟರ್ ಆಪರೇಟರ್ ಹಾಗೂ ಪ್ರಭಾರ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 6ನೇ ತರಗತಿ ವಿದ್ಯಾರ್ಥಿ ಅಂಜನ್ ಕುಮಾರ್ ಮೇಲೆ ಬೆಲ್ಟ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ತಾಯಿ ದೂರಿದ್ದರು. </p><p>ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಶ್ರೀನಿವಾಸನ್ ವಸತಿ ನಿಲಯ ಹಾಗೂ ವಿದ್ಯಾರ್ಥಿಯ ಊರಿಗೆ ಭೇಟಿ ನೀಡಿ ಪರಿಶೀಲಿಸಿದರು. </p><p>‘ಪ್ರಾಂಶುಪಾಲರಿಗೆ ಷೋಕಾಸ್ ನೋಟಿಸ್ ನೀಡಿದ್ದು, ವರ್ಗಾವಣೆ ಮಾಡಲಾಗುವುದು’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು. </p><p>ಇದೇ ವಸತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಕಳೆದ ವರ್ಷ ಮುರುಡೇಶ್ವರ ಪ್ರವಾಸದ ವೇಳೆ ಸಿಬ್ಬಂದಿ ನಿರ್ಲಕ್ಷ್ಯದ ಕಾರಣ ಸಮುದ್ರ ಪಾಲಾಗಿದ್ದರು. ಆಗ ಪ್ರಾಂಶುಪಾಲ ಹಾಗೂ ಇತರ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಮುಳಬಾಗಿಲು ತಾಲ್ಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಯನ್ನು ಥಳಿಸಿದ ಪ್ರಕರಣದಲ್ಲಿ ವಾರ್ಡನ್ ಮಹೇಶ್ ಗಿರಡ್ಡಿ ಎಂಬುವರನ್ನು ಅಮಾನತುಗೊಳಿಸಲಾಗಿದೆ.</p><p>‘ಪ್ರಜಾವಾಣಿ’ಯಲ್ಲಿ ಮಂಗಳವಾರ ಪ್ರಕಟವಾಗಿದ್ದ ‘ಬಾಸುಂಡೆ ಬರುವಂತೆ ವಿದ್ಯಾರ್ಥಿಗೆ ಥಳಿತ’ ವರದಿ ಆಧರಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎಸ್.ಕಾಂತರಾಜು ಆದೇಶ ಹೊರಡಿಸಿದ್ದಾರೆ. </p><p>ಅಮಾನತು ಆದೇಶದಲ್ಲಿ ‘ಪ್ರಜಾವಾಣಿ’ ವರದಿ ಉಲ್ಲೇಖಿಸಿದ್ದು, ಪ್ರಭಾರ ಪ್ರಾಂಶುಪಾಲ ಕುಮಾರ್ ರಾಜ್ ಅವರಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ. ದೈಹಿಕವಾಗಿ ಥಳಿಸಿ ಕರ್ತವ್ಯ ಲೋಪವೆಸಗಿರುವುದು ಕಂಡುಬಂದಿರುವುದರಿಂದ ಈ ಕ್ರಮ ವಹಿಸಲಾಗಿದೆ ಎಂದಿದ್ದಾರೆ. </p><p>ವಸತಿ ಶಾಲೆಯಲ್ಲಿ ಮಹೇಶ್ ಗಿರಡ್ಡಿ ಕಂಪ್ಯೂಟರ್ ಆಪರೇಟರ್ ಹಾಗೂ ಪ್ರಭಾರ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 6ನೇ ತರಗತಿ ವಿದ್ಯಾರ್ಥಿ ಅಂಜನ್ ಕುಮಾರ್ ಮೇಲೆ ಬೆಲ್ಟ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ತಾಯಿ ದೂರಿದ್ದರು. </p><p>ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಶ್ರೀನಿವಾಸನ್ ವಸತಿ ನಿಲಯ ಹಾಗೂ ವಿದ್ಯಾರ್ಥಿಯ ಊರಿಗೆ ಭೇಟಿ ನೀಡಿ ಪರಿಶೀಲಿಸಿದರು. </p><p>‘ಪ್ರಾಂಶುಪಾಲರಿಗೆ ಷೋಕಾಸ್ ನೋಟಿಸ್ ನೀಡಿದ್ದು, ವರ್ಗಾವಣೆ ಮಾಡಲಾಗುವುದು’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು. </p><p>ಇದೇ ವಸತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಕಳೆದ ವರ್ಷ ಮುರುಡೇಶ್ವರ ಪ್ರವಾಸದ ವೇಳೆ ಸಿಬ್ಬಂದಿ ನಿರ್ಲಕ್ಷ್ಯದ ಕಾರಣ ಸಮುದ್ರ ಪಾಲಾಗಿದ್ದರು. ಆಗ ಪ್ರಾಂಶುಪಾಲ ಹಾಗೂ ಇತರ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>