ಈ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಸುಮಾರು 300 ಕೈಗಡಿಯಾರ ಜಪ್ತಿ ಮಾಡಿದ್ದಾರೆ. ರಮೇಶ್ರ ಬೆಂಬಲಿಗರಿಗೆ ಕೈಗಡಿಯಾರ ಸರಬರಾಜು ಮಾಡುತ್ತಿದ್ದ ಈರಜ್ ಚಂದನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಚಂದನ್ ಬೈಕ್ನಲ್ಲಿ ಕೈಗಡಿಯಾರ ತಂದು ಕೊಡುತ್ತಿದ್ದ. ಪ್ರಕರಣ ಸಂಬಂಧ ಅಧಿಕಾರಿಗಳು ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ರಮೇಶ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.