ಬಾಳೆಲೆ– ಕೊಟ್ಟಗೇರಿ ನಡುವೆಯ ರಸ್ತೆ ಕುಸಿದಿದ್ದು ಸಂಪರ್ಕ ಬಂದ್ ಆಗಿದೆ. ಇನ್ನು ಮಡಿಕೇರಿ, ಗಾಳಿಬೀಡು, ಸೋಮವಾರಪೇಟೆ, ಕುಶಾಲನಗರದಲ್ಲಿ ಬಿಡುವು ನೀಡುತ್ತಾ ಮಳೆ ಬೀಳುತ್ತಿದೆ. ದಕ್ಷಿಣ ಕೊಡಗಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಲಕ್ಷ್ಮಣ ತೀರ್ಥ ನದಿಯಲ್ಲಿ ನೀರಿನ ಮಟ್ಟ ಏರಿಕೆ ಆಗುತ್ತಿದೆ. ಇರ್ಪು ಜಲಾಶಯದಲ್ಲಿ ನೀರು ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.