<p><strong>ಕೋಲಾರ:</strong> ‘ವಿಧಾನ ಪರಿಷತ್ ಸದಸ್ಯರ ಕ್ಷೇತ್ರಾಭಿವೃದ್ಧಿ ನಿಧಿ ಮತ್ತು ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನೆರವು ಬಳಸಿಕೊಂಡು ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ 5 ಜಿಲ್ಲೆಗಳ 1 ಸಾವಿರ ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲಾಗುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಶುದ್ಧ ನೀರು ರೋಗದ ಮೂಲ. ಉತ್ತಮ ಆರೋಗ್ಯಕ್ಕಾಗಿ ಶುದ್ಧ ನೀರು ಅತಿ ಮುಖ್ಯ. ಈಗಾಗಲೇ ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಶಾಲೆಗಳಲ್ಲಿ 200 ಲೀಟರ್ ಸಾಮರ್ಥ್ಯದ 100 ಶುದ್ಧ ನೀರಿನ ಘಟಕ ಸ್ಥಾಪಿಸಲಾಗಿದೆ’ ಎಂದು ವಿವರಿಸಿದರು.</p>.<p>‘ರಾಜ್ಯ ಸರ್ಕಾರವು ಶಿಕ್ಷಣ ಸಚಿವರ ನೇತೃತ್ವದಲ್ಲಿ ತಜ್ಞರೊಂದಿಗೆ ಸಮಾಲೋಚಿಸಿ ಶಿಕ್ಷಕಸ್ನೇಹಿ ಸರಳ ಮತ್ತು ವೈಜ್ಞಾನಿಕ ವರ್ಗಾವಣೆ ನೀತಿ ಜಾರಿ ಮಾಡಿತ್ತು. ಆದರೆ, ಕೆಲವರು ಈ ಸಂಬಂಧ ನ್ಯಾಯಾಲಯದ ಮೆಟ್ಟಿಲೇರಿ ತಡೆ ತಂದಿರುವುದರಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ನೋವಾಗಿದೆ’ ಎಂದು ವಿಷಾದಿಸಿದರು.</p>.<p>‘ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗೆ, ಪ್ರೌಢ ಶಾಲೆಯಿಂದ ಪದವಿ ಪೂರ್ವ ಕಾಲೇಜಿಗೆ ಬಡ್ತಿ ಹೊಂದಿದ ಶಿಕ್ಷಕರಿಗೆ 15, 20 ಹಾಗೂ 25 ವರ್ಷದ ಟೈಬಾಂಡ್ ನೀಡಿಕೆ ಜತೆಗೆ ಪದೋನ್ನತಿ ಹೊಂದಿದ ಈ ಶಿಕ್ಷಕರಿಗೆ ಇತರೆ ಬೇರೆ ಶಿಕ್ಷಕರಿಗಿಂತ ₹ 4 ಸಾವಿರದಿಂದ ₹ 8 ಸಾವಿರ ವೇತನ ತಾರತಮ್ಯವಿದೆ. ಇದನ್ನು ಸರಿಪಡಿಸಲು ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p><strong>ಶಿಕ್ಷಕರಿಗೂ ಲಸಿಕೆ:</strong> ‘ಕೋವಿಡ್ ಸಂಕಷ್ಟದಲ್ಲಿ ಕೆಲಸ ಮಾಡಿದ ಶಿಕ್ಷಕರೂ ಸಹ ಕೊರೊನಾ ವಾರಿಯರ್ಸ್ ಆಗಿದ್ದಾರೆ. ಹೀಗಾಗಿ ಅವರಿಗೂ ಆದ್ಯತೆಯಡಿ ಮೊದಲು ಕೋವಿಡ್ ಲಸಿಕೆ ನೀಡಬೇಕು. ಕೋವಿಡ್ನಿಂದ ಮೃತಪಟ್ಟ ಶಿಕ್ಷಕರಿಗೂ ಕೊರೊನಾ ವಾರಿಯರ್ಸ್ಗೆ ನೀಡುವಷ್ಟೇ ಪರಿಹಾರ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ಜಿಲ್ಲೆಯ ಅಂತರ್ಜಲ ವೃದ್ಧಿಗೆ ಜೀವಾಳವಾಗಿರುವ ಕೆ.ಸಿ ವ್ಯಾಲಿ ಯೋಜನೆ 2ನೇ ಹಂತದಲ್ಲಿ 174 ಕೆರೆ ನೀರು ತುಂಬಿಸುವ ₹ 400 ಕೋಟಿ ಅಂದಾಜು ವೆಚ್ಚದ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದ್ದು, ಟೆಂಡರ್ ಕರೆಯಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಕೆ.ಸಿ ವ್ಯಾಲಿ ಮೊದಲ ಹಂತದ ಯೋಜನೆಯ ನೀರಿನಿಂದ ಈಗಾಗಲೇ ಕೆರೆಗಳು ಭರ್ತಿಯಾಗಿರುವ ಕಡೆ ಕೊಳವೆ ಬಾವಿಗಳು ಜಲ ಮರುಪೂರಣಗೊಂಡಿರುವ. 2ನೇ ಹಂತದ ಯೋಜನೆ ಕಾಮಗಾರಿ ಬೇಗನೆ ಮುಗಿದರೆ ಜಿಲ್ಲೆಯ ಪರಿಸ್ಥಿತಿ ಮತ್ತಷ್ಟು ಸುಧಾರಣೆಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ವಿಧಾನ ಪರಿಷತ್ ಸದಸ್ಯರ ಕ್ಷೇತ್ರಾಭಿವೃದ್ಧಿ ನಿಧಿ ಮತ್ತು ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನೆರವು ಬಳಸಿಕೊಂಡು ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ 5 ಜಿಲ್ಲೆಗಳ 1 ಸಾವಿರ ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲಾಗುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಶುದ್ಧ ನೀರು ರೋಗದ ಮೂಲ. ಉತ್ತಮ ಆರೋಗ್ಯಕ್ಕಾಗಿ ಶುದ್ಧ ನೀರು ಅತಿ ಮುಖ್ಯ. ಈಗಾಗಲೇ ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಶಾಲೆಗಳಲ್ಲಿ 200 ಲೀಟರ್ ಸಾಮರ್ಥ್ಯದ 100 ಶುದ್ಧ ನೀರಿನ ಘಟಕ ಸ್ಥಾಪಿಸಲಾಗಿದೆ’ ಎಂದು ವಿವರಿಸಿದರು.</p>.<p>‘ರಾಜ್ಯ ಸರ್ಕಾರವು ಶಿಕ್ಷಣ ಸಚಿವರ ನೇತೃತ್ವದಲ್ಲಿ ತಜ್ಞರೊಂದಿಗೆ ಸಮಾಲೋಚಿಸಿ ಶಿಕ್ಷಕಸ್ನೇಹಿ ಸರಳ ಮತ್ತು ವೈಜ್ಞಾನಿಕ ವರ್ಗಾವಣೆ ನೀತಿ ಜಾರಿ ಮಾಡಿತ್ತು. ಆದರೆ, ಕೆಲವರು ಈ ಸಂಬಂಧ ನ್ಯಾಯಾಲಯದ ಮೆಟ್ಟಿಲೇರಿ ತಡೆ ತಂದಿರುವುದರಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ನೋವಾಗಿದೆ’ ಎಂದು ವಿಷಾದಿಸಿದರು.</p>.<p>‘ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗೆ, ಪ್ರೌಢ ಶಾಲೆಯಿಂದ ಪದವಿ ಪೂರ್ವ ಕಾಲೇಜಿಗೆ ಬಡ್ತಿ ಹೊಂದಿದ ಶಿಕ್ಷಕರಿಗೆ 15, 20 ಹಾಗೂ 25 ವರ್ಷದ ಟೈಬಾಂಡ್ ನೀಡಿಕೆ ಜತೆಗೆ ಪದೋನ್ನತಿ ಹೊಂದಿದ ಈ ಶಿಕ್ಷಕರಿಗೆ ಇತರೆ ಬೇರೆ ಶಿಕ್ಷಕರಿಗಿಂತ ₹ 4 ಸಾವಿರದಿಂದ ₹ 8 ಸಾವಿರ ವೇತನ ತಾರತಮ್ಯವಿದೆ. ಇದನ್ನು ಸರಿಪಡಿಸಲು ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p><strong>ಶಿಕ್ಷಕರಿಗೂ ಲಸಿಕೆ:</strong> ‘ಕೋವಿಡ್ ಸಂಕಷ್ಟದಲ್ಲಿ ಕೆಲಸ ಮಾಡಿದ ಶಿಕ್ಷಕರೂ ಸಹ ಕೊರೊನಾ ವಾರಿಯರ್ಸ್ ಆಗಿದ್ದಾರೆ. ಹೀಗಾಗಿ ಅವರಿಗೂ ಆದ್ಯತೆಯಡಿ ಮೊದಲು ಕೋವಿಡ್ ಲಸಿಕೆ ನೀಡಬೇಕು. ಕೋವಿಡ್ನಿಂದ ಮೃತಪಟ್ಟ ಶಿಕ್ಷಕರಿಗೂ ಕೊರೊನಾ ವಾರಿಯರ್ಸ್ಗೆ ನೀಡುವಷ್ಟೇ ಪರಿಹಾರ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ಜಿಲ್ಲೆಯ ಅಂತರ್ಜಲ ವೃದ್ಧಿಗೆ ಜೀವಾಳವಾಗಿರುವ ಕೆ.ಸಿ ವ್ಯಾಲಿ ಯೋಜನೆ 2ನೇ ಹಂತದಲ್ಲಿ 174 ಕೆರೆ ನೀರು ತುಂಬಿಸುವ ₹ 400 ಕೋಟಿ ಅಂದಾಜು ವೆಚ್ಚದ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದ್ದು, ಟೆಂಡರ್ ಕರೆಯಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಕೆ.ಸಿ ವ್ಯಾಲಿ ಮೊದಲ ಹಂತದ ಯೋಜನೆಯ ನೀರಿನಿಂದ ಈಗಾಗಲೇ ಕೆರೆಗಳು ಭರ್ತಿಯಾಗಿರುವ ಕಡೆ ಕೊಳವೆ ಬಾವಿಗಳು ಜಲ ಮರುಪೂರಣಗೊಂಡಿರುವ. 2ನೇ ಹಂತದ ಯೋಜನೆ ಕಾಮಗಾರಿ ಬೇಗನೆ ಮುಗಿದರೆ ಜಿಲ್ಲೆಯ ಪರಿಸ್ಥಿತಿ ಮತ್ತಷ್ಟು ಸುಧಾರಣೆಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>