ಕೆಲ ವ್ಯಕ್ತಿಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೆ.ಸಿ ವ್ಯಾಲಿ ಕಾಲುವೆಯಿಂದ ಸುಮಾರು 8 ಕಿಲೋ ಮೀಟರ್ ದೂರದ ತಿಪ್ಪೇನಹಳ್ಳಿವರೆಗೂ ಪೈಪ್ಲೈನ್ ಹಾಕಿ ನೀರು ಹರಿಸಿಕೊಳ್ಳುತ್ತಿರುವುದು ತಹಶೀಲ್ದಾರ್ ಪರಿಶೀಲನೆ ವೇಳೆ ಪತ್ತೆಯಾಯಿತು. ಅಲ್ಲದೇ, ಕಾಲುವೆ ಅಕ್ಕಪಕ್ಕದ ಜಮೀನುಗಳ ರೈತರಿಗೆ ಹಣದ ಆಮಿಷವೊಡ್ಡಿ ಅವರ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆದು ದೂರದ ಗ್ರಾಮಗಳಿಗೆ ನೀರು ಪೂರೈಕೆ ಮಾಡುತ್ತಿರುವ ಸಂಗತಿ ಬಯಲಾಯಿತು.