<p><strong>ಬಂಗಾರಪೇಟೆ:</strong> ತಾಲ್ಲೂಕಿನ ಗಡಿ ಗ್ರಾಮಗಳಲ್ಲಿ ಮತ್ತೆ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದ್ದು, ಈ ಭಾಗದ ರೈತರಲ್ಲಿ ಆತಂಕ ಶುರುವಾಗಿದೆ.</p>.<p>ತಮಿಳುನಾಡಿನಿಂದ ಬಂದು ತಾಲ್ಲೂಕಿನ ಕನಮನಹಳ್ಳಿ ಸುತ್ತಮುತ್ತ ಬೀಡು ಬಿಟ್ಟಿರುವ ಕಾಡಾನೆ ಹಿಂಡು ಈ ಭಾಗದ ಜನರಲ್ಲಿ ನಿದ್ದೆಗೆಡಿಸಿದೆ. ಕನುಮನಹಳ್ಳಿ ಗ್ರಾಮದ ಪುನ್ನೋಜಿ ರಾವ್ ಎಂಬುವರ ಟೊಮೆಟೊ ಹಾಗೂ ಭತ್ತದ ಬೆಳೆಯನ್ನ ತುಳಿದು ನಾಶ ಮಾಡಿವೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ವಿವಿಧ ಬೆಳೆ ನಾಶವಾಗಿವೆ.</p>.<p>ಕಾಡಾನೆಗಳನ್ನು ನಿಯಂತ್ರಣ ಮಾಡುವಂತೆ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಆನೆಗಳನ್ನ ಹಿಮ್ಮೆಟ್ಟಿಸುವಂತೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ತಾಲ್ಲೂಕಿನ ಗಡಿ ಗ್ರಾಮಗಳಲ್ಲಿ ಮತ್ತೆ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದ್ದು, ಈ ಭಾಗದ ರೈತರಲ್ಲಿ ಆತಂಕ ಶುರುವಾಗಿದೆ.</p>.<p>ತಮಿಳುನಾಡಿನಿಂದ ಬಂದು ತಾಲ್ಲೂಕಿನ ಕನಮನಹಳ್ಳಿ ಸುತ್ತಮುತ್ತ ಬೀಡು ಬಿಟ್ಟಿರುವ ಕಾಡಾನೆ ಹಿಂಡು ಈ ಭಾಗದ ಜನರಲ್ಲಿ ನಿದ್ದೆಗೆಡಿಸಿದೆ. ಕನುಮನಹಳ್ಳಿ ಗ್ರಾಮದ ಪುನ್ನೋಜಿ ರಾವ್ ಎಂಬುವರ ಟೊಮೆಟೊ ಹಾಗೂ ಭತ್ತದ ಬೆಳೆಯನ್ನ ತುಳಿದು ನಾಶ ಮಾಡಿವೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ವಿವಿಧ ಬೆಳೆ ನಾಶವಾಗಿವೆ.</p>.<p>ಕಾಡಾನೆಗಳನ್ನು ನಿಯಂತ್ರಣ ಮಾಡುವಂತೆ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಆನೆಗಳನ್ನ ಹಿಮ್ಮೆಟ್ಟಿಸುವಂತೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>