<p><strong>ಕೋಲಾರ:</strong> ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಆ್ಯಪಲ್ ಐ–ಫೋನ್ ಉತ್ಪಾದಿಸುವ ವಿಸ್ಟ್ರಾನ್ ಇನ್ಫೋಕಾಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ವಾರದ ಹಿಂದೆ ಪುನರಾರಂಭವಾಗಿದ್ದು, ಹೆಚ್ಚಿನ ಭದ್ರತೆಯೊಂದಿಗೆ ಉತ್ಪಾದನಾ ಚಟುವಟಿಕೆ ನಡೆಸಲಾಗುತ್ತಿದೆ.</p>.<p>ವಿಸ್ಟ್ರಾನ್ ಕಂಪನಿ ಕಾರ್ಮಿಕರು 2020ರ ಡಿ.12ರಂದು ಕಂಪನಿ ಮೇಲೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದರು. ಕಂಪನಿಯು ಸಂಬಳ ನೀಡದ ಕಾರಣಕ್ಕೆ ಕಾರ್ಮಿಕರು ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದರು. ಬಳಿಕ ಕಂಪನಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.</p>.<p>ಕಾರ್ಮಿಕರ ದಾಳಿಯಲ್ಲಿ ಹಾನಿಗೊಂಡಿದ್ದ ಕಂಪನಿಯ ಉತ್ಪಾದನಾ ವಿಭಾಗದ ಯಂತ್ರೋಪಕರಣಗಳನ್ನು ಮರು ಜೋಡಣೆ ಮಾಡಲಾಗಿದ್ದು, ಮೊಬೈಲ್ ಮತ್ತು ಮೊಬೈಲ್ ಬಿಡಿ ಭಾಗಗಳ ಉತ್ಪಾದನೆ ಆರಂಭವಾಗಿದೆ. ಪ್ರತಿನಿತ್ಯ 3 ಪಾಳಿಯಲ್ಲಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<p>ಕಂಪನಿಗೆ ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನಿಯೋಜಿಸಿದ್ದ ಕ್ರಿಯೇಟಿವ್ ಎಂಜಿನಿಯರ್ಸ್, ಕ್ಯೂಸ್ ಕಾರ್ಪ್, ಇನ್ನೋವಾ ಸೋರ್ಸ್, ಅಡೆಕ್ಕೊ ಗ್ರೂಪ್, ನೀಡ್ಸ್ ಮ್ಯಾನ್ ಪವರ್ ಸಪೋರ್ಟ್ ಸರ್ವಿಸಸ್, ರ್್ಯಾಂಡ್ಸ್ಯಾಂಡ್ ಏಜೆನ್ಸಿಗಳಿಂದಲೇ ಸಿಬ್ಬಂದಿಯನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 6 ಸಾವಿರ ಮಂದಿಯನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗಿದೆ. ಸ್ಥಳೀಯ ಪೊಲೀಸರು ಕಾರ್ಮಿಕರ ಪೂರ್ವಾಪರ ಪರಿಶೀಲಿಸಿ ನಡತೆ ಪ್ರಮಾಣಪತ್ರ ನೀಡಿದ ನಂತರ ನೇಮಕಾತಿ ಮಾಡಿಕೊಳ್ಳಲಾಗಿದೆ.</p>.<p><strong>ಹೆಚ್ಚಿನ ಭದ್ರತೆ: </strong>43 ಎಕರೆ ವಿಸ್ತಾರವಾಗಿರುವ ಕಂಪನಿಯಲ್ಲಿ ಹೆಜ್ಜೆ ಹೆಜ್ಜೆಗೂ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರ್ಮಿಕರನ್ನು ಕರೆದೊಯ್ಯುವ ಕಂಪನಿಯ ಪ್ರತಿ ವಾಹನಕ್ಕೂ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಅಲ್ಲದೇ, ಕಂಪನಿ ಆವರಣದಲ್ಲಿ ಭದ್ರತಾ ಸಿಬ್ಬಂದಿಯ ಸಂಖ್ಯೆ ಹೆಚ್ಚಿಸಲಾಗಿದೆ.</p>.<p>ಕಾರ್ಮಿಕರ ವೇತನದಲ್ಲಿ ಸ್ವಲ್ಪ ಹೆಚ್ಚಳ ಮಾಡಿರುವ ಕಂಪನಿಯು ಕೆಲಸದ ಅವಧಿಯನ್ನು 12 ತಾಸಿನಿಂದ 8 ತಾಸಿಗೆ ಇಳಿಸಿದೆ. ಈ ಹಿಂದೆ ಕಂಪನಿಯಲ್ಲಿ ಗುತ್ತಿಗೆ ಮತ್ತು ಕಾಯಂ ಕಾರ್ಮಿಕರಿಗೆ ಒಂದೇ ಕ್ಯಾಂಟೀನ್ ಇತ್ತು. ಇದೀಗ ಗುತ್ತಿಗೆ ಮತ್ತು ಕಾಯಂ ಕಾರ್ಮಿಕರಿಗೆ ಪ್ರತ್ಯೇಕ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗಿದೆ. ಜತೆಗೆ ವಾರದ ರಜೆ ಸೌಲಭ್ಯ ಕಲ್ಪಿಸಲಾಗಿದೆ.</p>.<p>‘ಕಂಪನಿ ಪುನರಾರಂಭದ ಬಳಿಕ ಕಾರ್ಯ ಸ್ಥಳದಲ್ಲಿ ಸಾಕಷ್ಟು ಸುಧಾರಣೆ ಆಗಿವೆ. ಸಂಬಳ ಹೆಚ್ಚಿಸಲಾಗಿದೆ. ಕೆಲಸದ ಅವಧಿ ಕಡಿಮೆ ಮಾಡಿರುವುದರಿಂದ ಕಾರ್ಯ ಒತ್ತಡವಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿರುವ ಭದ್ರತಾ ಸಿಬ್ಬಂದಿಯು ಹೆಜ್ಜೆ ಹೆಜ್ಜೆಗೂ ಹಿಂಬಾಲಿಸಿ ಬರುತ್ತಾರೆ’ ಎಂದು ಕಾರ್ಮಿಕರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಆ್ಯಪಲ್ ಐ–ಫೋನ್ ಉತ್ಪಾದಿಸುವ ವಿಸ್ಟ್ರಾನ್ ಇನ್ಫೋಕಾಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ವಾರದ ಹಿಂದೆ ಪುನರಾರಂಭವಾಗಿದ್ದು, ಹೆಚ್ಚಿನ ಭದ್ರತೆಯೊಂದಿಗೆ ಉತ್ಪಾದನಾ ಚಟುವಟಿಕೆ ನಡೆಸಲಾಗುತ್ತಿದೆ.</p>.<p>ವಿಸ್ಟ್ರಾನ್ ಕಂಪನಿ ಕಾರ್ಮಿಕರು 2020ರ ಡಿ.12ರಂದು ಕಂಪನಿ ಮೇಲೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದರು. ಕಂಪನಿಯು ಸಂಬಳ ನೀಡದ ಕಾರಣಕ್ಕೆ ಕಾರ್ಮಿಕರು ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದರು. ಬಳಿಕ ಕಂಪನಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.</p>.<p>ಕಾರ್ಮಿಕರ ದಾಳಿಯಲ್ಲಿ ಹಾನಿಗೊಂಡಿದ್ದ ಕಂಪನಿಯ ಉತ್ಪಾದನಾ ವಿಭಾಗದ ಯಂತ್ರೋಪಕರಣಗಳನ್ನು ಮರು ಜೋಡಣೆ ಮಾಡಲಾಗಿದ್ದು, ಮೊಬೈಲ್ ಮತ್ತು ಮೊಬೈಲ್ ಬಿಡಿ ಭಾಗಗಳ ಉತ್ಪಾದನೆ ಆರಂಭವಾಗಿದೆ. ಪ್ರತಿನಿತ್ಯ 3 ಪಾಳಿಯಲ್ಲಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<p>ಕಂಪನಿಗೆ ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನಿಯೋಜಿಸಿದ್ದ ಕ್ರಿಯೇಟಿವ್ ಎಂಜಿನಿಯರ್ಸ್, ಕ್ಯೂಸ್ ಕಾರ್ಪ್, ಇನ್ನೋವಾ ಸೋರ್ಸ್, ಅಡೆಕ್ಕೊ ಗ್ರೂಪ್, ನೀಡ್ಸ್ ಮ್ಯಾನ್ ಪವರ್ ಸಪೋರ್ಟ್ ಸರ್ವಿಸಸ್, ರ್್ಯಾಂಡ್ಸ್ಯಾಂಡ್ ಏಜೆನ್ಸಿಗಳಿಂದಲೇ ಸಿಬ್ಬಂದಿಯನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 6 ಸಾವಿರ ಮಂದಿಯನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗಿದೆ. ಸ್ಥಳೀಯ ಪೊಲೀಸರು ಕಾರ್ಮಿಕರ ಪೂರ್ವಾಪರ ಪರಿಶೀಲಿಸಿ ನಡತೆ ಪ್ರಮಾಣಪತ್ರ ನೀಡಿದ ನಂತರ ನೇಮಕಾತಿ ಮಾಡಿಕೊಳ್ಳಲಾಗಿದೆ.</p>.<p><strong>ಹೆಚ್ಚಿನ ಭದ್ರತೆ: </strong>43 ಎಕರೆ ವಿಸ್ತಾರವಾಗಿರುವ ಕಂಪನಿಯಲ್ಲಿ ಹೆಜ್ಜೆ ಹೆಜ್ಜೆಗೂ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರ್ಮಿಕರನ್ನು ಕರೆದೊಯ್ಯುವ ಕಂಪನಿಯ ಪ್ರತಿ ವಾಹನಕ್ಕೂ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಅಲ್ಲದೇ, ಕಂಪನಿ ಆವರಣದಲ್ಲಿ ಭದ್ರತಾ ಸಿಬ್ಬಂದಿಯ ಸಂಖ್ಯೆ ಹೆಚ್ಚಿಸಲಾಗಿದೆ.</p>.<p>ಕಾರ್ಮಿಕರ ವೇತನದಲ್ಲಿ ಸ್ವಲ್ಪ ಹೆಚ್ಚಳ ಮಾಡಿರುವ ಕಂಪನಿಯು ಕೆಲಸದ ಅವಧಿಯನ್ನು 12 ತಾಸಿನಿಂದ 8 ತಾಸಿಗೆ ಇಳಿಸಿದೆ. ಈ ಹಿಂದೆ ಕಂಪನಿಯಲ್ಲಿ ಗುತ್ತಿಗೆ ಮತ್ತು ಕಾಯಂ ಕಾರ್ಮಿಕರಿಗೆ ಒಂದೇ ಕ್ಯಾಂಟೀನ್ ಇತ್ತು. ಇದೀಗ ಗುತ್ತಿಗೆ ಮತ್ತು ಕಾಯಂ ಕಾರ್ಮಿಕರಿಗೆ ಪ್ರತ್ಯೇಕ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗಿದೆ. ಜತೆಗೆ ವಾರದ ರಜೆ ಸೌಲಭ್ಯ ಕಲ್ಪಿಸಲಾಗಿದೆ.</p>.<p>‘ಕಂಪನಿ ಪುನರಾರಂಭದ ಬಳಿಕ ಕಾರ್ಯ ಸ್ಥಳದಲ್ಲಿ ಸಾಕಷ್ಟು ಸುಧಾರಣೆ ಆಗಿವೆ. ಸಂಬಳ ಹೆಚ್ಚಿಸಲಾಗಿದೆ. ಕೆಲಸದ ಅವಧಿ ಕಡಿಮೆ ಮಾಡಿರುವುದರಿಂದ ಕಾರ್ಯ ಒತ್ತಡವಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿರುವ ಭದ್ರತಾ ಸಿಬ್ಬಂದಿಯು ಹೆಜ್ಜೆ ಹೆಜ್ಜೆಗೂ ಹಿಂಬಾಲಿಸಿ ಬರುತ್ತಾರೆ’ ಎಂದು ಕಾರ್ಮಿಕರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>