<p><strong>ಮಾಲೂರು:</strong> ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಜನಸಾಮಾನ್ಯರು ಸಂಪೂರ್ಣವಾಗಿ ತೊಡಗಿಸಿಕೊಂಡರೆ ಮಾತ್ರ ಯೋಜನೆಗಳು ಯಶಸ್ವಿ ಆಗಲು ಸಾಧ್ಯ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.</p>.<p>ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆ ಮಾಡಿದ ಬನಹಳ್ಳಿ ಗ್ರಾಮದಲ್ಲಿ ಯೋಜನೆಯ ಅನುಷ್ಠಾನದ ಬಗ್ಗೆ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಹಾಗೂ ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿದರು.</p>.<p>ಜನಪ್ರತಿನಿಧಿಗಳು ಸರ್ಕಾರದ ಅಧಿಕಾರಿಗಳಿಗಿಂತ, ಜನಸಾಮಾನ್ಯರ ಸಹಭಾಗಿತ್ವ ಅತೀ ಮುಖ್ಯ. ಆ ನಿಟ್ಟಿನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆ ಜನರ ಯೋಜನೆಯಾಗಿ ರೂಪುಗೊಂಡಿದೆ ಎಂದರು.</p>.<p>ಗ್ರಾಮಗಳಲ್ಲಿ ಕೇಂದ್ರ ಪುರಸ್ಕೃತ ಪೂರ್ಣಗೊಂಡ ಹಾಗೂ ಪ್ರಗತಿಯಲ್ಲಿರುವ, ಮುಂದೆ ಆಗಬೇಕಾದ ಕಾಮಗಾರಿ ಮತ್ತು ಯೋಜನೆಗಳ ಬಗ್ಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಂಡು ಎಲ್ಲ ಯೋಜನೆಗಳು ಜನರಿಗೆ ತಲುಪುವಂತೆ ಅಧಿಕಾರಿಗಳು ಮಾಡಬೇಕು ಎಂದು ಸೂಚಿಸಿದರು.</p>.<p>3 ತಿಂಗಳಲ್ಲಿ ಕೇಂದ್ರದಿಂದ ಅಧಿಕಾರಿಗಳ ತಂಡ ಜಿಲ್ಲೆಗೆ ಭೇಟಿ ನೀಡಲಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಮುತುವರ್ಜಿವಹಿಸಿ ಆದರ್ಶ ಗ್ರಾಮ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಹೇಳಿದರು.</p>.<p>ಜಿ.ಪಂ.ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷೆ ಯಶೋದಮ್ಮ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಸ್ವಾಮಿ, ತಾ.ಪಂ ಸದಸ್ಯ ರಮೇಶ್ ಗೌಡ, ರಾಮಕೃಷ್ಣಪ್ಪ, ನೋಡಲ್ ಅಧಿಕಾರಿ ಮುನಿಕೃಷ್ಣಪ್ಪ , ಜಿ.ಪಂ.ಉಪಕಾರ್ಯದರ್ಶಿ ಸಂಜೀವಪ್ಪ, ಇ.ಒ.ಕೃಷ್ಣಪ್ಪ, ತಹಶೀಲ್ದಾರ್ ಮಂಜುನಾಥ್, ಬನಹಳ್ಳಿ ಗ್ರಾ.ಪಂ. ಪಿಡಿಒ ಅಮರೇಶ್ ಬಾಬು, ಸರ್ಕಾರಿ ನೌಕರಿ ಸಂಘದ ಅಧ್ಯಕ್ಷ ಮುನೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಜನಸಾಮಾನ್ಯರು ಸಂಪೂರ್ಣವಾಗಿ ತೊಡಗಿಸಿಕೊಂಡರೆ ಮಾತ್ರ ಯೋಜನೆಗಳು ಯಶಸ್ವಿ ಆಗಲು ಸಾಧ್ಯ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.</p>.<p>ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆ ಮಾಡಿದ ಬನಹಳ್ಳಿ ಗ್ರಾಮದಲ್ಲಿ ಯೋಜನೆಯ ಅನುಷ್ಠಾನದ ಬಗ್ಗೆ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಹಾಗೂ ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿದರು.</p>.<p>ಜನಪ್ರತಿನಿಧಿಗಳು ಸರ್ಕಾರದ ಅಧಿಕಾರಿಗಳಿಗಿಂತ, ಜನಸಾಮಾನ್ಯರ ಸಹಭಾಗಿತ್ವ ಅತೀ ಮುಖ್ಯ. ಆ ನಿಟ್ಟಿನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆ ಜನರ ಯೋಜನೆಯಾಗಿ ರೂಪುಗೊಂಡಿದೆ ಎಂದರು.</p>.<p>ಗ್ರಾಮಗಳಲ್ಲಿ ಕೇಂದ್ರ ಪುರಸ್ಕೃತ ಪೂರ್ಣಗೊಂಡ ಹಾಗೂ ಪ್ರಗತಿಯಲ್ಲಿರುವ, ಮುಂದೆ ಆಗಬೇಕಾದ ಕಾಮಗಾರಿ ಮತ್ತು ಯೋಜನೆಗಳ ಬಗ್ಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಂಡು ಎಲ್ಲ ಯೋಜನೆಗಳು ಜನರಿಗೆ ತಲುಪುವಂತೆ ಅಧಿಕಾರಿಗಳು ಮಾಡಬೇಕು ಎಂದು ಸೂಚಿಸಿದರು.</p>.<p>3 ತಿಂಗಳಲ್ಲಿ ಕೇಂದ್ರದಿಂದ ಅಧಿಕಾರಿಗಳ ತಂಡ ಜಿಲ್ಲೆಗೆ ಭೇಟಿ ನೀಡಲಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಮುತುವರ್ಜಿವಹಿಸಿ ಆದರ್ಶ ಗ್ರಾಮ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಹೇಳಿದರು.</p>.<p>ಜಿ.ಪಂ.ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷೆ ಯಶೋದಮ್ಮ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಸ್ವಾಮಿ, ತಾ.ಪಂ ಸದಸ್ಯ ರಮೇಶ್ ಗೌಡ, ರಾಮಕೃಷ್ಣಪ್ಪ, ನೋಡಲ್ ಅಧಿಕಾರಿ ಮುನಿಕೃಷ್ಣಪ್ಪ , ಜಿ.ಪಂ.ಉಪಕಾರ್ಯದರ್ಶಿ ಸಂಜೀವಪ್ಪ, ಇ.ಒ.ಕೃಷ್ಣಪ್ಪ, ತಹಶೀಲ್ದಾರ್ ಮಂಜುನಾಥ್, ಬನಹಳ್ಳಿ ಗ್ರಾ.ಪಂ. ಪಿಡಿಒ ಅಮರೇಶ್ ಬಾಬು, ಸರ್ಕಾರಿ ನೌಕರಿ ಸಂಘದ ಅಧ್ಯಕ್ಷ ಮುನೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>