ಈ ಸಂಬಂಧವಾಗಿ ಇನ್ಸ್ಪೆಕ್ಟರ್ ವೆಂಕಟರಮಣಪ್ಪ, ವರುಣ್ಕುಮಾರ್ ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿತ್ತು. ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಓಲ್ಡ್ ಸ್ವರ್ಣಕುಪ್ಪಂ ನಿವಾಸಿಗಳಾದ ಮಣಿಗಂಡ, ಮೆಕಾನಿಕ್ ರವಿಕಿರಣ್, ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆಕಾಶ್ ಮತ್ತು ಸಂಜಯ್ ಅವರನ್ನು ವಿಶೇಷ ತಂಡ ಬಂಧಿಸುವಲ್ಲಿ ಸಫಲವಾಗಿದೆ. ಆರೋಪಿಗಳಿಂದ ಕಳವು ಮಾಲು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ.