ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಕೊಲೆ: ನಾಲ್ವರ ಬಂಧನ

Last Updated 31 ಜುಲೈ 2022, 5:56 IST
ಅಕ್ಷರ ಗಾತ್ರ

ಕೆಜಿಎಫ್‌: ಹೂವು ವ್ಯಾಪಾರ ಮಾಡುತ್ತಿದ್ದ ಮಹಿಳೆಯನ್ನು ಆಕೆಯ ಮನೆಯಲ್ಲಿಯೇ ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸ್ ವಿಶೇಷ ತಂಡ ಬಂಧಿಸಿದೆ.

ಆಂಡರ್‌ಸನ್‌ಪೇಟೆಯ ಪಚ್ಚಪ್ಪ ರಸ್ತೆಯ ನಿವಾಸಿ ಸುಲೋಚನ (57) ಎಂಬುವರನ್ನು ಜುಲೈ 15ರ ರಾತ್ರಿ ಉಸಿರುಗಟ್ಟಿಸಿ ಸಾಯಿಸಿ, ಅವರ ಬಳಿ ಇದ್ದ ಚಿನ್ನದ ಸರ ಮತ್ತು ಮೊಬೈಲ್ ಕಿತ್ತು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಅವರ ಗಂಡ ಶೇಖರ್ ಆಂಡರ್‌ಸನ್‌ಪೇಟೆ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಈ ಸಂಬಂಧವಾಗಿ ಇನ್‌ಸ್ಪೆಕ್ಟರ್ ವೆಂಕಟರಮಣಪ್ಪ, ವರುಣ್‌ಕುಮಾರ್ ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿತ್ತು. ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಓಲ್ಡ್ ಸ್ವರ್ಣಕುಪ್ಪಂ ನಿವಾಸಿಗಳಾದ ಮಣಿಗಂಡ, ಮೆಕಾನಿಕ್‌ ರವಿಕಿರಣ್‌, ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆಕಾಶ್ ಮತ್ತು ಸಂಜಯ್‌ ಅವರನ್ನು ವಿಶೇಷ ತಂಡ ಬಂಧಿಸುವಲ್ಲಿ ಸಫಲವಾಗಿದೆ. ಆರೋಪಿಗಳಿಂದ ಕಳವು ಮಾಲು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT