<p><strong>ಕೋಲಾರ: </strong>‘ಜಿಲ್ಲೆಯಲ್ಲಿ ಭೌತಿಕವಾಗಿ ಕಾಮಗಾರಿ ಪೂರ್ಣಗೊಂಡಿದ್ದರೂ ಅದರ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಿಲ್ಲ. ಇದರಿಂದ ಗುತ್ತಿಗೆದಾರರಿಗೆ ಠೇವಣಿ ಹಣ ನೀಡದೆ ಆರ್ಥಿಕ ಪ್ರಗತಿಗೆ ಹಿನ್ನಡೆಯಾಗಿದೆ’ ಎಂದು ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಅಭಿವೃದ್ಧಿ ಕಾಮಗಾರಿಗಳ ಕುರಿತ ಇಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ,‘ಕಾಮಗಾರಿ ಪೂರ್ಣಗೊಂಡಿರುವ ವಿವರವನ್ನು ಒಂದು ವಾರದೊಳಗೆ ತಂತ್ರಾಂಶದಲ್ಲಿ ಅಳವಡಿಸಬೇಕು. ಜತೆಗೆ ಆ ಕಾಮಗಾರಿಗಳ ಗುತ್ತಿಗೆದಾರರಿಗೆ ಠೇವಣಿ ಹಣ ಹಿಂದಿರುಗಿಸಬೇಕು’ ಎಂದು ಸೂಚಿಸಿದರು.</p>.<p>‘ಕಾಮಗಾರಿಗಳು ಪೂರ್ಣಗೊಂಡ ತಕ್ಷಣ ಆ ಬಗ್ಗೆ ವರದಿ ನೀಡಬೇಕು. ಇಲ್ಲದಿದ್ದರೆ ಶೇ 30ರಷ್ಟು ಠೇವಣಿ ಹಣ ಹಾಗೆಯೇ ಉಳಿಯುತ್ತದೆ. ಈ ರೀತಿ ಗುತ್ತಿಗೆದಾರರ ಠೇವಣಿ ಹಣ ಉಳಿಸಿಕೊಂಡರೆ ಆರ್ಥಿಕ ಪ್ರಗತಿಗೆ ಅಡ್ಡಿಯಾಗುತ್ತದೆ’ ಎಂದು ಹೇಳಿದರು.</p>.<p>‘ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ತಲಾ ₹ 50 ಲಕ್ಷ ಅನುದಾನದಂತೆ ಒಟ್ಟರೆ ಜಿಲ್ಲೆಗೆ ₹ 4.50 ಕೋಟಿ ನೀಡಲಾಗಿದೆ. ಶಾಸಕರಿಂದ ಉಳಿದ ಕಾಮಗಾರಿಗಳಿಗೆ ಪತ್ರ ಪಡೆದು ತಕ್ಷಣವೇ ಆಡಳಿತಾತ್ಮಕ ಅನುಮೋದನೆ ನೀಡಿ ಕೆಲಸ ಆರಂಭಿಸಬೇಕು. ಒಂದು ತಿಂಗಳೊಳಗೆ ಕಾರ್ಯಾದೇಶ ನೀಡಿ ಕಾಮಗಾರಿ ಪೂರ್ಣಗೊಳಿಸಿ’ ಎಂದು ಆದೇಶಿಸಿದರು.</p>.<p>ಮಣ್ಣು ಕೇಂದ್ರ ಸ್ಥಾಪಿಸಿ: ‘ಕಾಮಗಾರಿ ಆರಂಭಕ್ಕೆ ಮಣ್ಣನ್ನು ಪರೀಕ್ಷೆಗಾಗಿ ಎಂಜಿನಿಯರಿಂಗ್ ಕಾಲೇಜಿಗೆ ಕಳುಹಿಸುವುದರಿಂದ ಕೆಲಸ ವಿಳಂಬವಾಗುತ್ತಿದೆ. ಇದರ ಬದಲು ₹ 1.25 ಲಕ್ಷ ವೆಚ್ಚದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ಮಣ್ಣು ಪರೀಕ್ಷೆ ಕೇಂದ್ರ ಸ್ಥಾಪಿಸಿ’ ಎಂದು ಎಂಜಿನಿಯರ್ಗಳಿಗೆ ಸಲಹೆ ನೀಡಿದರು.</p>.<p>‘ಬಯಲುಸೀಮೆ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀರು ಸಂರಕ್ಷಣಾ ಕಾಮಗಾರಿಗಳು, ಚೆಕ್ಡ್ಯಾಂ ನಿರ್ಮಾಣ, ಅಂತರ್ಜಲ ಅಭಿವೃದ್ಧಿ ಕಾಮಗಾರಿಗಳು, ಶಾಲೆ, ಅಂಗನವಾಡಿ ಹಾಗೂ ಆಸ್ಪತ್ರೆ ಕಟ್ಟಡ ಕಾಮಗಾರಿ ಆರಂಭಿಸಿ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ, ಉಪ ವಿಭಾಗಾಧಿಕಾರಿ ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಜಿಲ್ಲೆಯಲ್ಲಿ ಭೌತಿಕವಾಗಿ ಕಾಮಗಾರಿ ಪೂರ್ಣಗೊಂಡಿದ್ದರೂ ಅದರ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಿಲ್ಲ. ಇದರಿಂದ ಗುತ್ತಿಗೆದಾರರಿಗೆ ಠೇವಣಿ ಹಣ ನೀಡದೆ ಆರ್ಥಿಕ ಪ್ರಗತಿಗೆ ಹಿನ್ನಡೆಯಾಗಿದೆ’ ಎಂದು ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಅಭಿವೃದ್ಧಿ ಕಾಮಗಾರಿಗಳ ಕುರಿತ ಇಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ,‘ಕಾಮಗಾರಿ ಪೂರ್ಣಗೊಂಡಿರುವ ವಿವರವನ್ನು ಒಂದು ವಾರದೊಳಗೆ ತಂತ್ರಾಂಶದಲ್ಲಿ ಅಳವಡಿಸಬೇಕು. ಜತೆಗೆ ಆ ಕಾಮಗಾರಿಗಳ ಗುತ್ತಿಗೆದಾರರಿಗೆ ಠೇವಣಿ ಹಣ ಹಿಂದಿರುಗಿಸಬೇಕು’ ಎಂದು ಸೂಚಿಸಿದರು.</p>.<p>‘ಕಾಮಗಾರಿಗಳು ಪೂರ್ಣಗೊಂಡ ತಕ್ಷಣ ಆ ಬಗ್ಗೆ ವರದಿ ನೀಡಬೇಕು. ಇಲ್ಲದಿದ್ದರೆ ಶೇ 30ರಷ್ಟು ಠೇವಣಿ ಹಣ ಹಾಗೆಯೇ ಉಳಿಯುತ್ತದೆ. ಈ ರೀತಿ ಗುತ್ತಿಗೆದಾರರ ಠೇವಣಿ ಹಣ ಉಳಿಸಿಕೊಂಡರೆ ಆರ್ಥಿಕ ಪ್ರಗತಿಗೆ ಅಡ್ಡಿಯಾಗುತ್ತದೆ’ ಎಂದು ಹೇಳಿದರು.</p>.<p>‘ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ತಲಾ ₹ 50 ಲಕ್ಷ ಅನುದಾನದಂತೆ ಒಟ್ಟರೆ ಜಿಲ್ಲೆಗೆ ₹ 4.50 ಕೋಟಿ ನೀಡಲಾಗಿದೆ. ಶಾಸಕರಿಂದ ಉಳಿದ ಕಾಮಗಾರಿಗಳಿಗೆ ಪತ್ರ ಪಡೆದು ತಕ್ಷಣವೇ ಆಡಳಿತಾತ್ಮಕ ಅನುಮೋದನೆ ನೀಡಿ ಕೆಲಸ ಆರಂಭಿಸಬೇಕು. ಒಂದು ತಿಂಗಳೊಳಗೆ ಕಾರ್ಯಾದೇಶ ನೀಡಿ ಕಾಮಗಾರಿ ಪೂರ್ಣಗೊಳಿಸಿ’ ಎಂದು ಆದೇಶಿಸಿದರು.</p>.<p>ಮಣ್ಣು ಕೇಂದ್ರ ಸ್ಥಾಪಿಸಿ: ‘ಕಾಮಗಾರಿ ಆರಂಭಕ್ಕೆ ಮಣ್ಣನ್ನು ಪರೀಕ್ಷೆಗಾಗಿ ಎಂಜಿನಿಯರಿಂಗ್ ಕಾಲೇಜಿಗೆ ಕಳುಹಿಸುವುದರಿಂದ ಕೆಲಸ ವಿಳಂಬವಾಗುತ್ತಿದೆ. ಇದರ ಬದಲು ₹ 1.25 ಲಕ್ಷ ವೆಚ್ಚದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ಮಣ್ಣು ಪರೀಕ್ಷೆ ಕೇಂದ್ರ ಸ್ಥಾಪಿಸಿ’ ಎಂದು ಎಂಜಿನಿಯರ್ಗಳಿಗೆ ಸಲಹೆ ನೀಡಿದರು.</p>.<p>‘ಬಯಲುಸೀಮೆ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀರು ಸಂರಕ್ಷಣಾ ಕಾಮಗಾರಿಗಳು, ಚೆಕ್ಡ್ಯಾಂ ನಿರ್ಮಾಣ, ಅಂತರ್ಜಲ ಅಭಿವೃದ್ಧಿ ಕಾಮಗಾರಿಗಳು, ಶಾಲೆ, ಅಂಗನವಾಡಿ ಹಾಗೂ ಆಸ್ಪತ್ರೆ ಕಟ್ಟಡ ಕಾಮಗಾರಿ ಆರಂಭಿಸಿ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ, ಉಪ ವಿಭಾಗಾಧಿಕಾರಿ ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>