<p><strong>ಮುಳಬಾಗಿಲು:</strong> ‘ಆರೋಗ್ಯವಂತ ಶಿಶುವಿನಿಂದ ಆರೋಗ್ಯಕರ ಸಮಾಜ ಕಟ್ಟಬಹುದು. ಹಾಗಾಗಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಹೇಳಿದರು.</p>.<p>ನಗರದಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ಮುಳಬಾಗಿಲು ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿಶ್ವ ಪೌಷ್ಟಿಕ ಆಹಾರ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ನೆರವು ಶಿಬಿರ ಉದ್ಪಾಟಿಸಿ ಅವರು<br />ಮಾತನಾಡಿದರು.</p>.<p>ಪೃಕೃತಿದತ್ತವಾಗಿ ಬೆಳೆದ ಆಹಾರದಲ್ಲಿ ಹೆಚ್ಚಿನ ಪೌಷ್ಟಿಕಾಂಶ ಇರುತ್ತದೆ. ಪೌಷ್ಟಿಕ ಆಹಾರದಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸರ್ಕಾರ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶ ನೀಡಲು ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನ್ ಯಾದವಾಡ ಮಾತನಾಡಿ, ಮಕ್ಕಳ ಆರೋಗ್ಯದ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಶ್ಲಾಘನೀಯವಾಗಿ ದುಡಿಯುತ್ತಿದ್ದಾರೆ. ಇದು ಸಾಮಾಜಿಕ ಜವಾಬ್ದಾರಿಯುತವಾದ ಕೆಲಸವಾಗಿದೆ ಎಂದರು.</p>.<p>ಸೆ. 30ರಂದು ದೇಶದಾದ್ಯಂತ ಲೋಕ ಆದಾಲತ್ ಹಮ್ಮಿಕೊಳ್ಳಲಾಗುತ್ತಿದೆ. ಮುಳಬಾಗಿಲು ನ್ಯಾಯಾಲಯ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು<br />ಕೋರಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಂ.ಜಿ. ಪಾಲಿ ಮಾತನಾಡಿ, ಮಕ್ಕಳಲ್ಲಿ ಪೌಷ್ಟಿಕಾಂಶ ಅಂಶವನ್ನು ತಾಯಿ ಗರ್ಭದಲ್ಲಿ ಇರುವಾಗಿನಿಂದಲೂ ಮಗು ಹುಟ್ಟುವವರೆವಿಗೂ ನೀಡಲು ಇಲಾಖೆಯು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಶ್ರಮಿಸುತ್ತಿದೆ ಎಂದರು.</p>.<p>ವಕೀಲ ಎನ್. ಶೇಖರ್ ಮಾತನಾಡಿ, ಪೂರ್ವಿಕರ ಜೀವನ ಪದ್ಧತಿಯಿಂದ ಯಾವುದೇ ಕಾಯಿಲೆ ಬರುತ್ತಿರಲಿಲ್ಲ. ಅವರ ಜೀವನಶೈಲಿ ಇಂದಿಗೂ ದಾರಿದೀಪವಾಗಿದೆ ಎಂದು<br />ಹೇಳಿದರು.</p>.<p>ತಾಲ್ಲೂಕುವಕೀಲರಸಂಘದಅಧ್ಯಕ್ಷಎಂ.ಎಸ್.ಶ್ರೀನಿವಾಸರೆಡ್ಡಿ,ಗೌರವಾಧ್ಯಕ್ಷಪಿ.ಎಂ.ಸದಾಶಿವಂಯ್ಯಮಾತನಾಡಿದರು.ಕಾರ್ಯದರ್ಶಿ ಸಿ. ಸುಬ್ರಮಣಿ, ಖಜಾಂಚಿ ಸಂತೋಷ್ ಕುಮಾರ್, ವಕೀಲರಾದ ರಾಜ್ಕುಮಾರ್, ಆನಂದ್, ಬಿ.ಜೆ. ಮುನಿರತ್ನಂ, ಮುನಿರಾಜು, ಆನಂದ್, ಬಾಲಾಜಿ, ದಯಾನಂದ್, ಜಯಪ್ಪ, ಸಿ.ಎಂ. ನಯಾಜ್ಅಹಮದ್, ಶಿಶು ಅಭಿವೃದ್ಧಿ ಅಧಿಕಾರಿ ಮಹೇಶ್ ಬಾಬು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ‘ಆರೋಗ್ಯವಂತ ಶಿಶುವಿನಿಂದ ಆರೋಗ್ಯಕರ ಸಮಾಜ ಕಟ್ಟಬಹುದು. ಹಾಗಾಗಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಹೇಳಿದರು.</p>.<p>ನಗರದಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ಮುಳಬಾಗಿಲು ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿಶ್ವ ಪೌಷ್ಟಿಕ ಆಹಾರ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ನೆರವು ಶಿಬಿರ ಉದ್ಪಾಟಿಸಿ ಅವರು<br />ಮಾತನಾಡಿದರು.</p>.<p>ಪೃಕೃತಿದತ್ತವಾಗಿ ಬೆಳೆದ ಆಹಾರದಲ್ಲಿ ಹೆಚ್ಚಿನ ಪೌಷ್ಟಿಕಾಂಶ ಇರುತ್ತದೆ. ಪೌಷ್ಟಿಕ ಆಹಾರದಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸರ್ಕಾರ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶ ನೀಡಲು ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನ್ ಯಾದವಾಡ ಮಾತನಾಡಿ, ಮಕ್ಕಳ ಆರೋಗ್ಯದ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಶ್ಲಾಘನೀಯವಾಗಿ ದುಡಿಯುತ್ತಿದ್ದಾರೆ. ಇದು ಸಾಮಾಜಿಕ ಜವಾಬ್ದಾರಿಯುತವಾದ ಕೆಲಸವಾಗಿದೆ ಎಂದರು.</p>.<p>ಸೆ. 30ರಂದು ದೇಶದಾದ್ಯಂತ ಲೋಕ ಆದಾಲತ್ ಹಮ್ಮಿಕೊಳ್ಳಲಾಗುತ್ತಿದೆ. ಮುಳಬಾಗಿಲು ನ್ಯಾಯಾಲಯ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು<br />ಕೋರಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಂ.ಜಿ. ಪಾಲಿ ಮಾತನಾಡಿ, ಮಕ್ಕಳಲ್ಲಿ ಪೌಷ್ಟಿಕಾಂಶ ಅಂಶವನ್ನು ತಾಯಿ ಗರ್ಭದಲ್ಲಿ ಇರುವಾಗಿನಿಂದಲೂ ಮಗು ಹುಟ್ಟುವವರೆವಿಗೂ ನೀಡಲು ಇಲಾಖೆಯು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಶ್ರಮಿಸುತ್ತಿದೆ ಎಂದರು.</p>.<p>ವಕೀಲ ಎನ್. ಶೇಖರ್ ಮಾತನಾಡಿ, ಪೂರ್ವಿಕರ ಜೀವನ ಪದ್ಧತಿಯಿಂದ ಯಾವುದೇ ಕಾಯಿಲೆ ಬರುತ್ತಿರಲಿಲ್ಲ. ಅವರ ಜೀವನಶೈಲಿ ಇಂದಿಗೂ ದಾರಿದೀಪವಾಗಿದೆ ಎಂದು<br />ಹೇಳಿದರು.</p>.<p>ತಾಲ್ಲೂಕುವಕೀಲರಸಂಘದಅಧ್ಯಕ್ಷಎಂ.ಎಸ್.ಶ್ರೀನಿವಾಸರೆಡ್ಡಿ,ಗೌರವಾಧ್ಯಕ್ಷಪಿ.ಎಂ.ಸದಾಶಿವಂಯ್ಯಮಾತನಾಡಿದರು.ಕಾರ್ಯದರ್ಶಿ ಸಿ. ಸುಬ್ರಮಣಿ, ಖಜಾಂಚಿ ಸಂತೋಷ್ ಕುಮಾರ್, ವಕೀಲರಾದ ರಾಜ್ಕುಮಾರ್, ಆನಂದ್, ಬಿ.ಜೆ. ಮುನಿರತ್ನಂ, ಮುನಿರಾಜು, ಆನಂದ್, ಬಾಲಾಜಿ, ದಯಾನಂದ್, ಜಯಪ್ಪ, ಸಿ.ಎಂ. ನಯಾಜ್ಅಹಮದ್, ಶಿಶು ಅಭಿವೃದ್ಧಿ ಅಧಿಕಾರಿ ಮಹೇಶ್ ಬಾಬು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>