<p><strong>ಕೋಲಾರ</strong>: ‘ಮೈಸೂರಿನ ಮುಡಾದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣವನ್ನು ಸಿಬಿಐಗೆ ವಹಿಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ವಿಧಾನ ಪರಿಷತ್ ಮಾಜಿ ಸಚೇತಕ, ಬಿಜೆಪಿ ಮುಖಂಡ ವೈ.ಎ.ನಾರಾಯಣಸ್ವಾಮಿ ಆಗ್ರಹಿಸಿದರು.</p>.<p>ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಡಿಎ ಮೀರಿಸುವ ಹಗರಣ ಮುಡಾದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ನಿವೇಶನ ಬಿಟ್ಟುಕೊಡಲು ₹ 63 ಕೋಟಿ ಪರಿಹಾರ ಕೇಳುತ್ತಿದ್ದಾರೆ. ತಮ್ಮದೇ ಸರ್ಕಾರದಲ್ಲಿ ಇಷ್ಟೊಂದು ಹಣ ಕೇಳುತ್ತಿದ್ದಾರೆ. ಇನ್ನು ತಂಗಿಗೆ ಅಣ್ಣ ದಾನವಾಗಿ ಜಮೀನು ನೀಡಿದ್ದಾರಂತೆ’ ಎಂದು ಲೇವಡಿ ಮಾಡಿದರು.</p>.<p>‘ಮುಡಾ ವ್ಯಾಪ್ತಿಯ ಶಾಸಕರು ಮುಡಾ ಆಡಳಿತ ಮಂಡಳಿಯ ಸದಸ್ಯರಾಗಿರುತ್ತಾರೆ. ಸಿದ್ದರಾಮಯ್ಯ ಕೂಡ ಒಬ್ಬ ಸದಸ್ಯ. ಅವರಿಗೆ ಗೊತ್ತಿಲ್ಲದೇ ಇಷ್ಟೆಲ್ಲಾ ಹಗರಣ ನಡೆದಿದೆಯೇ? ಈ ಹಗರಣದಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರೆ’ ಎಂದು ಆಪಾದಿಸಿದರು.</p>.<p>‘ನಗರಾಭಿವೃದ್ಧಿ ಸಚಿವರೂ ಆಗಿರುವ ಬೈರತಿ ಸುರೇಶ್ ಹಗರಣವೇ ನಡೆದಿಲ್ಲ ಎನ್ನುತ್ತಾರೆ. ಅವರೇಕೆ ಹೆಲಿಕಾಪ್ಟರ್ನಲ್ಲಿ ಕಡತ ತೆಗೆದುಕೊಂಡು ಹೋದರು, ಏಕೆ ಮೈಸೂರು ಜಿಲ್ಲಾಧಿಕಾರಿಯನ್ನು ಬದಲಾಯಿಸಿದರು’ ಎಂದು ಪ್ರಶ್ನಿಸಿದರು.</p>.<p>‘ವಾಲ್ಮೀಕಿ ನಿಗಮದ ₹ 187 ಕೋಟಿ ದುರುಪಯೋಗವಾಗಿದ್ದು, ಪರಿಶಿಷ್ಟ ಪಂಗಡದವರಿಗೆ ಅನ್ಯಾಯವಾಗಿದೆ. ಇಷ್ಟ ಬಂದ ರೀತಿ ಹಣ ಡ್ರಾ ಮಾಡಲಾಗಿದೆ. ತೆಲಂಗಾಣ ಚುನಾವಣೆಗೆ ಈ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಇಲಾಖೆ ಗಮನಕ್ಕೆ ಬಂದಿಲ್ಲವೇ’ ಎಂದು ಕೇಳಿದರು.</p>.<p>‘ಕಣ್ಣೊರೆಸಲು ಎಸ್ಐಟಿ ತನಿಖೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಗಮನಕ್ಕೆ ಬಾರದೆ ಹಗರಣ ನಡೆದಿಲ್ಲ. ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಮಿಕ್ಕಿದ ಹಣ ವಸೂಲಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 14 ತಿಂಗಳಾಗಿದ್ದು, ಕಮಿಷನ್ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಎಸ್ಟಿ ಸಮುದಾಯಕ್ಕೆ ಒಂದು ಕೊಳವೆ ಬಾವಿ ಕೊರೆಸಿ ಕೊಟ್ಟಿಲ್ಲ. ಆ ಸಮುದಾಯದ ನಾಯಕರು ಏಕೆ ಸುಮ್ಮನಿದ್ದಾರೆಯೋ ಗೊತ್ತಿಲ್ಲ’ ಎಂದರು.</p>.<p>ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್, ಮಾಧ್ಯಮ ಪ್ರಮುಖ್ ಪ್ರವೀಣ್ ಗೌಡ, ಸಹ ಪ್ರಮುಖ್ ಕೆಂಬೋಡಿ, ಮಾಗೇರಿ ನಾರಾಯಣಸ್ವಾಮಿ, ತಿಮ್ಮರಾಯಪ್ಪ, ಮಾಲೂರು ವೇಮಣ್ಣ, ಶಿಳ್ಳಂಗೆರೆ ಮಹೇಶ್, ರಾಜೇಶ್ ಸಿಂಗ್, ಓಹಿಲೇಶ್ ಇದ್ದರು.</p>.<p>Highlights - ಮೈಸೂರು ಜಿಲ್ಲಾಧಿಕಾರಿ ವರ್ಗಾಯಿಸಿದ್ದು ಏಕೆ? ಬೈರತಿ ಸುರೇಶ್ ಹೆಲಿಕಾಪ್ಟರ್ನಲ್ಲಿ ಕಡತ ತೆಗೆದುಕೊಂಡು ಹೋಗಿದ್ಯಾಕೆ? ಸಿದ್ದರಾಮಯ್ಯ ಗಮನಕ್ಕೆ ಬಾರದೆ ಹಗರಣ ನಡೆದಿಲ್ಲ–ಮಾಜಿ ಎಂಎಲ್ಸಿ</p>.<p>Quote - ವಾಲ್ಮೀಕಿ ನಿಗಮ ಹಗರಣದಲ್ಲಿ ದುಡ್ಡು ತಿಂದವರು ಕುಷ್ಠ ರೋಗದಿಂದ ಸಾಯಲಿ ಎಂದಿರುವ ಶಾಸಕ ಕೊತ್ತೂರು ಮಂಜುನಾಥ್ ಅವರನ್ನು ಅಭಿನಂದಿಸುತ್ತಾನೆ. ಸಿ.ಎಂ ರಾಜೀನಾಮೆಗೂ ಅವರು ಆಗ್ರಹಿಸಲಿ ವೈ.ಎ.ನಾರಾಯಣಸ್ವಾಮಿ ವಿಧಾನ ಪರಿಷತ್ ಮಾಜಿ ಸಚೇತಕ </p>.<p>Cut-off box - ‘ಮೋಜು ಮಸ್ತಿಗೆ ಹಾಲಿನ ಹಣ’ ‘ಕೋಲಾರ ಹಾಲು ಒಕ್ಕೂಟದವರು ಹಾಲಿನ ಖರೀದಿ ದರ ಕಡಿಮೆ ಮಾಡಿ ರೈತರ ಮೇಲೆ ಚಪ್ಪಡಿ ಕಲ್ಲು ಎಳೆದಿದ್ದಾರೆ. ಹಾಲು ಕುಡಿಯುವವರಿಗೆ ₹ 2 ಹೆಚ್ಚು ಹಾಲು ಕರೆಯುವರಿಗೆ ₹ 2 ಕಡಿಮೆ. ಇದ್ಯಾವ ನ್ಯಾಯ? ಇದರಿಂದ ಒಕ್ಕೂಟಕ್ಕೆ ₹ 48 ಲಕ್ಷ ಲಾಭ ಬರುತ್ತದೆ. ಮೋಜು ಮಸ್ತಿ ಮಾಡಲು ಈ ಹಣ ಬಳಸುತ್ತಿದ್ದಾರೆಯೇ’ ಎಂದು ವೈ.ಎ.ನಾರಾಯಣಸ್ವಾಮಿ ಪ್ರಶ್ನಿಸಿದರು. ‘ತಕ್ಷಣ ದರ ಕಡಿತ ಹಿಂಪಡೆಯಬೇಕು. ಇಲ್ಲದಿದ್ದರೆ ದೊಡ್ಡ ಹೋರಾಟ ನಡೆಸುತ್ತೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಮೈಸೂರಿನ ಮುಡಾದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣವನ್ನು ಸಿಬಿಐಗೆ ವಹಿಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ವಿಧಾನ ಪರಿಷತ್ ಮಾಜಿ ಸಚೇತಕ, ಬಿಜೆಪಿ ಮುಖಂಡ ವೈ.ಎ.ನಾರಾಯಣಸ್ವಾಮಿ ಆಗ್ರಹಿಸಿದರು.</p>.<p>ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಡಿಎ ಮೀರಿಸುವ ಹಗರಣ ಮುಡಾದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ನಿವೇಶನ ಬಿಟ್ಟುಕೊಡಲು ₹ 63 ಕೋಟಿ ಪರಿಹಾರ ಕೇಳುತ್ತಿದ್ದಾರೆ. ತಮ್ಮದೇ ಸರ್ಕಾರದಲ್ಲಿ ಇಷ್ಟೊಂದು ಹಣ ಕೇಳುತ್ತಿದ್ದಾರೆ. ಇನ್ನು ತಂಗಿಗೆ ಅಣ್ಣ ದಾನವಾಗಿ ಜಮೀನು ನೀಡಿದ್ದಾರಂತೆ’ ಎಂದು ಲೇವಡಿ ಮಾಡಿದರು.</p>.<p>‘ಮುಡಾ ವ್ಯಾಪ್ತಿಯ ಶಾಸಕರು ಮುಡಾ ಆಡಳಿತ ಮಂಡಳಿಯ ಸದಸ್ಯರಾಗಿರುತ್ತಾರೆ. ಸಿದ್ದರಾಮಯ್ಯ ಕೂಡ ಒಬ್ಬ ಸದಸ್ಯ. ಅವರಿಗೆ ಗೊತ್ತಿಲ್ಲದೇ ಇಷ್ಟೆಲ್ಲಾ ಹಗರಣ ನಡೆದಿದೆಯೇ? ಈ ಹಗರಣದಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರೆ’ ಎಂದು ಆಪಾದಿಸಿದರು.</p>.<p>‘ನಗರಾಭಿವೃದ್ಧಿ ಸಚಿವರೂ ಆಗಿರುವ ಬೈರತಿ ಸುರೇಶ್ ಹಗರಣವೇ ನಡೆದಿಲ್ಲ ಎನ್ನುತ್ತಾರೆ. ಅವರೇಕೆ ಹೆಲಿಕಾಪ್ಟರ್ನಲ್ಲಿ ಕಡತ ತೆಗೆದುಕೊಂಡು ಹೋದರು, ಏಕೆ ಮೈಸೂರು ಜಿಲ್ಲಾಧಿಕಾರಿಯನ್ನು ಬದಲಾಯಿಸಿದರು’ ಎಂದು ಪ್ರಶ್ನಿಸಿದರು.</p>.<p>‘ವಾಲ್ಮೀಕಿ ನಿಗಮದ ₹ 187 ಕೋಟಿ ದುರುಪಯೋಗವಾಗಿದ್ದು, ಪರಿಶಿಷ್ಟ ಪಂಗಡದವರಿಗೆ ಅನ್ಯಾಯವಾಗಿದೆ. ಇಷ್ಟ ಬಂದ ರೀತಿ ಹಣ ಡ್ರಾ ಮಾಡಲಾಗಿದೆ. ತೆಲಂಗಾಣ ಚುನಾವಣೆಗೆ ಈ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಇಲಾಖೆ ಗಮನಕ್ಕೆ ಬಂದಿಲ್ಲವೇ’ ಎಂದು ಕೇಳಿದರು.</p>.<p>‘ಕಣ್ಣೊರೆಸಲು ಎಸ್ಐಟಿ ತನಿಖೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಗಮನಕ್ಕೆ ಬಾರದೆ ಹಗರಣ ನಡೆದಿಲ್ಲ. ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಮಿಕ್ಕಿದ ಹಣ ವಸೂಲಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 14 ತಿಂಗಳಾಗಿದ್ದು, ಕಮಿಷನ್ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಎಸ್ಟಿ ಸಮುದಾಯಕ್ಕೆ ಒಂದು ಕೊಳವೆ ಬಾವಿ ಕೊರೆಸಿ ಕೊಟ್ಟಿಲ್ಲ. ಆ ಸಮುದಾಯದ ನಾಯಕರು ಏಕೆ ಸುಮ್ಮನಿದ್ದಾರೆಯೋ ಗೊತ್ತಿಲ್ಲ’ ಎಂದರು.</p>.<p>ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್, ಮಾಧ್ಯಮ ಪ್ರಮುಖ್ ಪ್ರವೀಣ್ ಗೌಡ, ಸಹ ಪ್ರಮುಖ್ ಕೆಂಬೋಡಿ, ಮಾಗೇರಿ ನಾರಾಯಣಸ್ವಾಮಿ, ತಿಮ್ಮರಾಯಪ್ಪ, ಮಾಲೂರು ವೇಮಣ್ಣ, ಶಿಳ್ಳಂಗೆರೆ ಮಹೇಶ್, ರಾಜೇಶ್ ಸಿಂಗ್, ಓಹಿಲೇಶ್ ಇದ್ದರು.</p>.<p>Highlights - ಮೈಸೂರು ಜಿಲ್ಲಾಧಿಕಾರಿ ವರ್ಗಾಯಿಸಿದ್ದು ಏಕೆ? ಬೈರತಿ ಸುರೇಶ್ ಹೆಲಿಕಾಪ್ಟರ್ನಲ್ಲಿ ಕಡತ ತೆಗೆದುಕೊಂಡು ಹೋಗಿದ್ಯಾಕೆ? ಸಿದ್ದರಾಮಯ್ಯ ಗಮನಕ್ಕೆ ಬಾರದೆ ಹಗರಣ ನಡೆದಿಲ್ಲ–ಮಾಜಿ ಎಂಎಲ್ಸಿ</p>.<p>Quote - ವಾಲ್ಮೀಕಿ ನಿಗಮ ಹಗರಣದಲ್ಲಿ ದುಡ್ಡು ತಿಂದವರು ಕುಷ್ಠ ರೋಗದಿಂದ ಸಾಯಲಿ ಎಂದಿರುವ ಶಾಸಕ ಕೊತ್ತೂರು ಮಂಜುನಾಥ್ ಅವರನ್ನು ಅಭಿನಂದಿಸುತ್ತಾನೆ. ಸಿ.ಎಂ ರಾಜೀನಾಮೆಗೂ ಅವರು ಆಗ್ರಹಿಸಲಿ ವೈ.ಎ.ನಾರಾಯಣಸ್ವಾಮಿ ವಿಧಾನ ಪರಿಷತ್ ಮಾಜಿ ಸಚೇತಕ </p>.<p>Cut-off box - ‘ಮೋಜು ಮಸ್ತಿಗೆ ಹಾಲಿನ ಹಣ’ ‘ಕೋಲಾರ ಹಾಲು ಒಕ್ಕೂಟದವರು ಹಾಲಿನ ಖರೀದಿ ದರ ಕಡಿಮೆ ಮಾಡಿ ರೈತರ ಮೇಲೆ ಚಪ್ಪಡಿ ಕಲ್ಲು ಎಳೆದಿದ್ದಾರೆ. ಹಾಲು ಕುಡಿಯುವವರಿಗೆ ₹ 2 ಹೆಚ್ಚು ಹಾಲು ಕರೆಯುವರಿಗೆ ₹ 2 ಕಡಿಮೆ. ಇದ್ಯಾವ ನ್ಯಾಯ? ಇದರಿಂದ ಒಕ್ಕೂಟಕ್ಕೆ ₹ 48 ಲಕ್ಷ ಲಾಭ ಬರುತ್ತದೆ. ಮೋಜು ಮಸ್ತಿ ಮಾಡಲು ಈ ಹಣ ಬಳಸುತ್ತಿದ್ದಾರೆಯೇ’ ಎಂದು ವೈ.ಎ.ನಾರಾಯಣಸ್ವಾಮಿ ಪ್ರಶ್ನಿಸಿದರು. ‘ತಕ್ಷಣ ದರ ಕಡಿತ ಹಿಂಪಡೆಯಬೇಕು. ಇಲ್ಲದಿದ್ದರೆ ದೊಡ್ಡ ಹೋರಾಟ ನಡೆಸುತ್ತೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>