ಆದರೆ, ಇವು ಇಂದಿಗೂ ಇತಿಹಾಸಕಾರರ ಗಮನಕ್ಕೆ ಬಂದಿಲ್ಲ. ಇತಿಹಾಸದ ಮೇಲೆ ಆಸಕ್ತಿ ಇರುವವರು ತಾವರೆಕೆರೆ ಗ್ರಾಮದಯಜ್ಞ ಗುಡ್ಡಗಳ ಬಗ್ಗೆ ಸಂಶೋಧನೆ ನಡೆಸಿದರೆ ಹಲವಾರು ಹೊಸ ವಿಷಯಗಳು ಬೆಳಕಿಗೆ ಬರಬಹುದು ಎನ್ನುತ್ತಾರೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಪುರಾತನ ದೇವಾಲಯಗಳ ಕುರಿತು ಸಂಶೋಧನೆಗಳನ್ನು ನಡೆಸಿರುವ ಪ್ರೊ.ಕೆ.ಆರ್.ನರಸಿಂಹನ್.