‘ನಮ್ಮ ಪಕ್ಷದ ಕೆಲ ಶಾಸಕರು ಸಚಿವ ಸ್ಥಾನ ಬೇಕೆಂದು ಆಗ್ರಹಿಸಿರುವುದು ನಿಜ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ಹೈಕಮಾಂಡ್ ಇನ್ನೂ ಸೂಚನೆ ನೀಡಿಲ್ಲ. ಇದೀಗ ರಾಜ್ಯಸಭೆ ಹಾಗೂ ವಿಧಾನ ಪರಿಷತ್ಗೆ ಚುನಾವಣೆ ಘೋಷಣೆಯಾಗಿದ್ದು, ತಮ್ಮ ಸಹೋದರನಿಗೆ ಟಿಕೆಟ್ ಕೊಡುವಂತೆ ಉಮೇಶ್ ಕತ್ತಿ ಬೇಡಿಕೆ ಇಟ್ಟಿದ್ದಾರೆ. ಜತೆಗೆ ಅವರ ಕ್ಷೇತ್ರಕ್ಕೆ ಸೌಕರ್ಯ ಕೇಳಿದ್ದಾರೆ’ ಎಂದು ಸ್ಪಷ್ಟಪಡಿಸಿದರು.