<p><strong>ಕೋಲಾರ</strong>: ಜಿಲ್ಲೆಯ ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮತ್ತು ಡಿಪಿಆರ್ ಸಿದ್ಧಪಡಿಸುವ ಕೆಲಸಗಳನ್ನು ಚುರುಕುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣದಲ್ಲಿ ಶನಿವಾರ ನಡೆದ ಕೋಲಾರ ಜಿಲ್ಲೆಗೆ ಸಂಬಂಧಿಸಿದ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕೋಲಾರ ತಾಲ್ಲೂಕಿನ ನರಸಾಪುರ, ವೇಮಗಲ್ ಮತ್ತು ವಕ್ಕಲೇರಿ ಹೋಬಳಿಗಳ ವ್ಯಾಪ್ತಿಯಲ್ಲಿನ ಭೂಸ್ವಾಧೀನ ಪ್ರಕ್ರಿಯೆಯ ಬಗ್ಗೆ ಮಾಹಿತಿ ಪಡೆದ ಅವರು, ಬಾಕಿ ಇರುವ ಭೂಮಿಗೆ ಸಂಬಂಧಿಸಿದಂತೆ ಕೂಡಲೇ ಗೆಜೆಟ್ ಅಧಿಸೂಚನೆ ಹೊರಡಿಸಲು ಮತ್ತು ಆಕ್ಷೇಪಣೆಗಳ ವಿಚಾರಣೆಯನ್ನು ತ್ವರಿತವಾಗಿ ಮುಗಿಸಲು ಎಸ್ಎಲ್ಒಗೆ ಸೂಚಿಸಿದರು.</p>.<p>ಭೂಸ್ವಾಧೀನ ಕಾಯ್ದೆಯನ್ವಯ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಮೂರು ತಿಂಗಳೊಳಗೆ ಶೇ 50 ರಷ್ಟು ಹಣವನ್ನು ಭೂಮಾಲೀಕರಿಗೆ ಪಾವತಿಸಬೇಕು. ಈ ನಿಟ್ಟಿನಲ್ಲಿ ಅನುದಾನದ ಲಭ್ಯತೆ ಮತ್ತು ವಿತರಣೆಯಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಲು ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಭೂ ದಾಖಲೆಗಳಲ್ಲಿನ ಪೋಡಿ ಮತ್ತು ಹಿಸ್ಸಾ ಸಂಖ್ಯೆಗಳ ವ್ಯತ್ಯಾಸದಿಂದಾಗಿ ಭೂಸ್ವಾಧೀನಕ್ಕೆ ಅಡ್ಡಿಯಾಗದಂತೆ, ಕಂದಾಯ ಇಲಾಖೆಯ ಸಹಯೋಗದೊಂದಿಗೆ ಭೌತಿಕ ಪರಿಶೀಲನೆ ಮತ್ತು ರೀ-ಸರ್ವೆ ಕಾರ್ಯವನ್ನು 10 ದಿನಗಳ ಒಳಗೆ ಪೂರ್ಣಗೊಳಿಸಬೇಕು ಎಂದು ಆದೇಶಿಸಿದರು.</p>.<p>ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವುದಷ್ಟೇ ಅಲ್ಲದೆ; ಪ್ರತಿ ಮನೆಗೂ ಕುಡಿಯುವ ನೀರು ತಲುಪಿಸುವ 'ಜಲಜೀವನ್ ಮಿಷನ್'ನೊಂದಿಗೆ ಈ ಯೋಜನೆಯನ್ನು ಜೋಡಿಸುವ ಬಗ್ಗೆ ಚರ್ಚಿಸಲಾಯಿತು</p>.<p>ಪ್ರತಿ ತಾಲ್ಲೂಕಿಗೂ ಪ್ರತ್ಯೇಕವಾದ ನೀರು ವಿತರಣಾ ಜಾಲದ ಡಿಪಿಆರ್ ಸಿದ್ಧಪಡಿಸಬೇಕು. ಇದರಲ್ಲಿ ಗ್ರಾಮೀಣ ಪ್ರದೇಶದ ಜೊತೆಗೆ ಪಟ್ಟಣ ಪ್ರದೇಶಗಳನ್ನೂ ಒಳಗೊಳ್ಳುವಂತೆ ಹಾಗೂ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ತಾಂತ್ರಿಕ ಯೋಜನೆಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಶ್ರೀನಿವಾಸಪುರ ತಾಲ್ಲೂಕಿನ 28 ಗ್ರಾಮಗಳ ವ್ಯಾಪ್ತಿಯ 51 ಎಕರೆ 30 ಗುಂಟೆ ಹಾಗೂ ಮುಳಬಾಗಿಲಿನ 8 ಗುಂಟೆ ಭೂಮಿಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಗಡುವು ನೀಡಿದರು.</p>.<p>ಸಭೆಗೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ (ಇಇ) ಗೈರುಹಾಜರಾಗಿರುವುದಕ್ಕೆ ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಯೋಜನೆಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಪ್ರತಿಯೊಬ್ಬ ಜವಾಬ್ದಾರಿಯುತ ಅಧಿಕಾರಿಯೂ ಸಭೆಯಲ್ಲಿ ಹಾಜರಿರಬೇಕು ಎಂದು ಎಚ್ಚರಿಸಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ ಮಂಗಳಾ, ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿಗಳು, ವಿಶೇಷ ಭೂಸ್ವಾಧೀನಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಜಿಲ್ಲೆಯ ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮತ್ತು ಡಿಪಿಆರ್ ಸಿದ್ಧಪಡಿಸುವ ಕೆಲಸಗಳನ್ನು ಚುರುಕುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣದಲ್ಲಿ ಶನಿವಾರ ನಡೆದ ಕೋಲಾರ ಜಿಲ್ಲೆಗೆ ಸಂಬಂಧಿಸಿದ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕೋಲಾರ ತಾಲ್ಲೂಕಿನ ನರಸಾಪುರ, ವೇಮಗಲ್ ಮತ್ತು ವಕ್ಕಲೇರಿ ಹೋಬಳಿಗಳ ವ್ಯಾಪ್ತಿಯಲ್ಲಿನ ಭೂಸ್ವಾಧೀನ ಪ್ರಕ್ರಿಯೆಯ ಬಗ್ಗೆ ಮಾಹಿತಿ ಪಡೆದ ಅವರು, ಬಾಕಿ ಇರುವ ಭೂಮಿಗೆ ಸಂಬಂಧಿಸಿದಂತೆ ಕೂಡಲೇ ಗೆಜೆಟ್ ಅಧಿಸೂಚನೆ ಹೊರಡಿಸಲು ಮತ್ತು ಆಕ್ಷೇಪಣೆಗಳ ವಿಚಾರಣೆಯನ್ನು ತ್ವರಿತವಾಗಿ ಮುಗಿಸಲು ಎಸ್ಎಲ್ಒಗೆ ಸೂಚಿಸಿದರು.</p>.<p>ಭೂಸ್ವಾಧೀನ ಕಾಯ್ದೆಯನ್ವಯ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಮೂರು ತಿಂಗಳೊಳಗೆ ಶೇ 50 ರಷ್ಟು ಹಣವನ್ನು ಭೂಮಾಲೀಕರಿಗೆ ಪಾವತಿಸಬೇಕು. ಈ ನಿಟ್ಟಿನಲ್ಲಿ ಅನುದಾನದ ಲಭ್ಯತೆ ಮತ್ತು ವಿತರಣೆಯಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಲು ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಭೂ ದಾಖಲೆಗಳಲ್ಲಿನ ಪೋಡಿ ಮತ್ತು ಹಿಸ್ಸಾ ಸಂಖ್ಯೆಗಳ ವ್ಯತ್ಯಾಸದಿಂದಾಗಿ ಭೂಸ್ವಾಧೀನಕ್ಕೆ ಅಡ್ಡಿಯಾಗದಂತೆ, ಕಂದಾಯ ಇಲಾಖೆಯ ಸಹಯೋಗದೊಂದಿಗೆ ಭೌತಿಕ ಪರಿಶೀಲನೆ ಮತ್ತು ರೀ-ಸರ್ವೆ ಕಾರ್ಯವನ್ನು 10 ದಿನಗಳ ಒಳಗೆ ಪೂರ್ಣಗೊಳಿಸಬೇಕು ಎಂದು ಆದೇಶಿಸಿದರು.</p>.<p>ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವುದಷ್ಟೇ ಅಲ್ಲದೆ; ಪ್ರತಿ ಮನೆಗೂ ಕುಡಿಯುವ ನೀರು ತಲುಪಿಸುವ 'ಜಲಜೀವನ್ ಮಿಷನ್'ನೊಂದಿಗೆ ಈ ಯೋಜನೆಯನ್ನು ಜೋಡಿಸುವ ಬಗ್ಗೆ ಚರ್ಚಿಸಲಾಯಿತು</p>.<p>ಪ್ರತಿ ತಾಲ್ಲೂಕಿಗೂ ಪ್ರತ್ಯೇಕವಾದ ನೀರು ವಿತರಣಾ ಜಾಲದ ಡಿಪಿಆರ್ ಸಿದ್ಧಪಡಿಸಬೇಕು. ಇದರಲ್ಲಿ ಗ್ರಾಮೀಣ ಪ್ರದೇಶದ ಜೊತೆಗೆ ಪಟ್ಟಣ ಪ್ರದೇಶಗಳನ್ನೂ ಒಳಗೊಳ್ಳುವಂತೆ ಹಾಗೂ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ತಾಂತ್ರಿಕ ಯೋಜನೆಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಶ್ರೀನಿವಾಸಪುರ ತಾಲ್ಲೂಕಿನ 28 ಗ್ರಾಮಗಳ ವ್ಯಾಪ್ತಿಯ 51 ಎಕರೆ 30 ಗುಂಟೆ ಹಾಗೂ ಮುಳಬಾಗಿಲಿನ 8 ಗುಂಟೆ ಭೂಮಿಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಗಡುವು ನೀಡಿದರು.</p>.<p>ಸಭೆಗೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ (ಇಇ) ಗೈರುಹಾಜರಾಗಿರುವುದಕ್ಕೆ ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಯೋಜನೆಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಪ್ರತಿಯೊಬ್ಬ ಜವಾಬ್ದಾರಿಯುತ ಅಧಿಕಾರಿಯೂ ಸಭೆಯಲ್ಲಿ ಹಾಜರಿರಬೇಕು ಎಂದು ಎಚ್ಚರಿಸಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ ಮಂಗಳಾ, ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿಗಳು, ವಿಶೇಷ ಭೂಸ್ವಾಧೀನಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>