<p><strong>ಕೋಲಾರ</strong>: ಸಾವಿರಾರು ಯುವಜನತೆ, ಸರ್ಕಾರಿ ನೌಕರರು, ವಿವಿಧ ಕಂಪನಿಗಳ ಕಾರ್ಮಿಕರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾನುವಾರ ಇಲ್ಲಿ ರಕ್ತದಾನ ಮಾಡಿದರು. ನೂರಾರು ಮಂದಿ ಅಂಗಾಂಗ ದಾನ ಮಾಡಲು ತಮ್ಮ ಹೆಸರು ನೋಂದಾಯಿಸಿಕೊಂಡರು.</p>.<p>ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾಡಳಿತದಿಂದ ಮೋದಿ @ 2022 ಅಭಿಯಾನದಡಿ ನಗರದ ಒಳಾಂಗಣ ಕ್ರೀಡಾಂಗಣ ಹಾಗೂ ಜೂನಿಯರ್ ಕಾಲೇಜು ಆವರಣದಲ್ಲಿನ ಕೊಠಡಿಗಳಲ್ಲಿ ರಕ್ತದಾನ ಬೃಹತ್ ಶಿಬಿರದ ಜೊತೆಗೆ ಅಂಗಾಂಗ ದಾನ ನೋಂದಣಿ ಹಮ್ಮಿಕೊಳ್ಳಲಾಗಿತ್ತು.ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮ ಆರಂಭಗೊಂಡು ಸಂಜೆ 6ಕ್ಕೆ ಮುಕ್ತಾಯಗೊಂಡಿತು.</p>.<p>ಜಿಲ್ಲೆಯ ಮಟ್ಟಿಗೆ ಹೊಸ ದಾಖಲೆ ನಿರ್ಮಾಣವಾಗಿದ್ದು, ಸುಮಾರು 2,500 ಯುನಿಟ್ ರಕ್ತ ಸಂಗ್ರಹವಾಗಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.</p>.<p>‘15 ಸಾವಿರ ಜನರಿಂದ ರಕ್ತದಾನ ಮಾಡಿಸುವ ಗುರಿ ಹೊಂದಲಾಗಿತ್ತು. ಆದರೆ, ರಕ್ತದ ದಾಸ್ತಾನಿಗೆ ತೊಂದರೆ ಆಗಲಿದೆ ಎಂದು ರಕ್ತ ಸಂಗ್ರಹ ಕೇಂದ್ರದ ಪ್ರತಿನಿಧಿಗಳು ಹೇಳಿದ್ದರಿಂದ 10 ಸಾವಿರಕ್ಕೆ ನಿರ್ಬಂಧಿಸಲಾಯಿತು’ ಎಂದರು.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಂಸದ ತೇಜಸ್ವಿ ಸೂರ್ಯ ಶಿಬಿರ ವೀಕ್ಷಿಸಿದರು. ಅಲ್ಲದೇ, ರಕ್ತದಾನಿಗಳಿಗೆ ಶುಭಾಶಯ ಕೋರಿ, ಪ್ರಮಾಣಪತ್ರ ವಿತರಿಸಿದರು. ರಕ್ತದಾನ ಮಾಡಿದ ಎಲ್ಲರಿಗೂ ಜ್ಯೂಸ್, ಸೇಬು, ಬಾಳೆಹಣ್ಣು ವ್ಯವಸ್ಥೆ ಮಾಡಲಾಗಿತ್ತು. ಹೊರ ಆವರಣದಲ್ಲಿ ನೋಂದಣಿ ಕೌಂಟರ್ ತೆರೆಯಲಾಗಿತ್ತು.</p>.<p>ಜಿಲ್ಲಾಡಳಿತ ವಿವಿಧ ಇಲಾಖೆಗಳಿಂದ ವಸ್ತುಪ್ರದರ್ಶನ, ಮಾಹಿತಿ ಮಳಿಗೆ ಹಾಕಲಾಗಿತ್ತು. ಸರ್ಕಾರದಿಂದ ಸಾರ್ವಜನಿಕರಿಗೆ ಸಿಗಬಹುದಾದ ವಿವಿಧ ಇಲಾಖೆಗಳ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಖಾದಿ ಮಳಿಗೆಗಳೂ ಇದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಸಾವಿರಾರು ಯುವಜನತೆ, ಸರ್ಕಾರಿ ನೌಕರರು, ವಿವಿಧ ಕಂಪನಿಗಳ ಕಾರ್ಮಿಕರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾನುವಾರ ಇಲ್ಲಿ ರಕ್ತದಾನ ಮಾಡಿದರು. ನೂರಾರು ಮಂದಿ ಅಂಗಾಂಗ ದಾನ ಮಾಡಲು ತಮ್ಮ ಹೆಸರು ನೋಂದಾಯಿಸಿಕೊಂಡರು.</p>.<p>ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾಡಳಿತದಿಂದ ಮೋದಿ @ 2022 ಅಭಿಯಾನದಡಿ ನಗರದ ಒಳಾಂಗಣ ಕ್ರೀಡಾಂಗಣ ಹಾಗೂ ಜೂನಿಯರ್ ಕಾಲೇಜು ಆವರಣದಲ್ಲಿನ ಕೊಠಡಿಗಳಲ್ಲಿ ರಕ್ತದಾನ ಬೃಹತ್ ಶಿಬಿರದ ಜೊತೆಗೆ ಅಂಗಾಂಗ ದಾನ ನೋಂದಣಿ ಹಮ್ಮಿಕೊಳ್ಳಲಾಗಿತ್ತು.ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮ ಆರಂಭಗೊಂಡು ಸಂಜೆ 6ಕ್ಕೆ ಮುಕ್ತಾಯಗೊಂಡಿತು.</p>.<p>ಜಿಲ್ಲೆಯ ಮಟ್ಟಿಗೆ ಹೊಸ ದಾಖಲೆ ನಿರ್ಮಾಣವಾಗಿದ್ದು, ಸುಮಾರು 2,500 ಯುನಿಟ್ ರಕ್ತ ಸಂಗ್ರಹವಾಗಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.</p>.<p>‘15 ಸಾವಿರ ಜನರಿಂದ ರಕ್ತದಾನ ಮಾಡಿಸುವ ಗುರಿ ಹೊಂದಲಾಗಿತ್ತು. ಆದರೆ, ರಕ್ತದ ದಾಸ್ತಾನಿಗೆ ತೊಂದರೆ ಆಗಲಿದೆ ಎಂದು ರಕ್ತ ಸಂಗ್ರಹ ಕೇಂದ್ರದ ಪ್ರತಿನಿಧಿಗಳು ಹೇಳಿದ್ದರಿಂದ 10 ಸಾವಿರಕ್ಕೆ ನಿರ್ಬಂಧಿಸಲಾಯಿತು’ ಎಂದರು.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಂಸದ ತೇಜಸ್ವಿ ಸೂರ್ಯ ಶಿಬಿರ ವೀಕ್ಷಿಸಿದರು. ಅಲ್ಲದೇ, ರಕ್ತದಾನಿಗಳಿಗೆ ಶುಭಾಶಯ ಕೋರಿ, ಪ್ರಮಾಣಪತ್ರ ವಿತರಿಸಿದರು. ರಕ್ತದಾನ ಮಾಡಿದ ಎಲ್ಲರಿಗೂ ಜ್ಯೂಸ್, ಸೇಬು, ಬಾಳೆಹಣ್ಣು ವ್ಯವಸ್ಥೆ ಮಾಡಲಾಗಿತ್ತು. ಹೊರ ಆವರಣದಲ್ಲಿ ನೋಂದಣಿ ಕೌಂಟರ್ ತೆರೆಯಲಾಗಿತ್ತು.</p>.<p>ಜಿಲ್ಲಾಡಳಿತ ವಿವಿಧ ಇಲಾಖೆಗಳಿಂದ ವಸ್ತುಪ್ರದರ್ಶನ, ಮಾಹಿತಿ ಮಳಿಗೆ ಹಾಕಲಾಗಿತ್ತು. ಸರ್ಕಾರದಿಂದ ಸಾರ್ವಜನಿಕರಿಗೆ ಸಿಗಬಹುದಾದ ವಿವಿಧ ಇಲಾಖೆಗಳ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಖಾದಿ ಮಳಿಗೆಗಳೂ ಇದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>