<p><strong>ಕೋಲಾರ: </strong>ಜಿಲ್ಲೆಯ ಅಂಗವಿಕಲರ ಸ್ಥಿತಿಗತಿಯ ಸಮಗ್ರ ಅಧ್ಯಯನ ಅಗತ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸ್ವಯಂ ಸೇವಕರ ಮೂಲಕ ಸಮೀಕ್ಷೆ ನಡೆಸಬೇಕು ಎಂದು ಅಂಗವಿಕಲರ ಕಲ್ಯಾಣ ಇಲಾಖೆ ಆಯುಕ್ತ ಕೆ.ವಿ.ರಾಜಣ್ಣ ಸೂಚಿಸಿದರು.<br /> <br /> ಅಂಗವಿಕಲರಿಗೆ ಮೀಸಲಾಗಿರುವ ಶೇ.3ರ ಅನುದಾನ ಬಳಕೆ ಸಂಬಂಧ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಸೂಚನೆ ನೀಡಿದರು. <br /> <br /> ಗ್ರಾಮೀಣ ಅಭಿವೃದ್ಧಿ ಯೋಜನೆಯಡಿ ಅಂಗವಿಕಲರಿಗೆ ನಿಗದಿಪಡಿಸಿರುವ ಆಯವ್ಯಯದ ಶೇ.3ರಷ್ಟು ಹಣವನ್ನು ಅವರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ವೈದ್ಯಕೀಯ ಪುನರ್ವಸತಿ ಕಾರ್ಯಗಳಿಗೆ ಮೀಸಲಿಟ್ಟು ಮುಖ್ಯವಾಹಿನಿಗೆ ತರಬೇಕಾಗಿದೆ. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಅಂಗವಿಕಲರ ಸಮೀಕ್ಷೆ ನಡೆಸಬೇಕು ಎಂದರು.<br /> <br /> ಅಂಗವಿಕಲರ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದಕ್ಕೆ ಅಧಿಕಾರಿಗಳೇ ಕಾರಣ. ಈ ನಿಟ್ಟಿನಲ್ಲಿ ಇನ್ನು ಮುಂದೆ ಕಾಳಜಿ ವಹಿಸಬೇಕು. ಉಲ್ಲಂಘನೆ ಪ್ರಕರಣ ಕಂಡು ಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.<br /> <br /> ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಅನುಷ್ಠಾನಗೊಳ್ಳುವ ಯೋಜನೆ ಅಡಿಯಲ್ಲಿ ಅಂಗವಿಕಲರಿಗೆ ರೂ.56 ಲಕ್ಷ ಮೀಸಲಿಡಲಾಗಿದೆ. ಅದನ್ನು ಸ್ವಯಂಸೇವಕರಿಗೆ ಗೌರವಧನ ನೀಡಲು ಬಳಸಬಹುದು. ಒಟ್ಟಾರೆ ಅಂಗವಿಕಲರ ಕಲ್ಯಾಣಕ್ಕೆ ಸದ್ವಿನಿಯೋಗ ಮಾಡಬೇಕು ಎಂದರು.<br /> <br /> ಪಿಂಚಣಿಗಾಗಿ ಅಂಗವಿಕಲ ಪಲಾನುಭವಿಗಳನ್ನು ಗುರುತಿಸಲು ನಿಯೋಜನೆಗೊಂಡಿರುವ ಸ್ವಯಂಸೇವಕರಿಗೆ ನೀಡಲಾಗುತ್ತಿರುವ ಗೌರವ ಧನ ರೂ.1.5 ಸಾವಿರ ಸಾಕಾಗುತ್ತಿಲ್ಲ ಎಂಬ ಬೇಡಿಕೆ ಕೇಳಿಬಂದಿರುವ ಹಿನ್ನೆಲೆಯಲ್ಲಿ, 2 ಸಾವಿರಕ್ಕೆ ಹೆಚ್ಚಿಸಿ ಕ್ರಮ ಕೈಗೊಳ್ಳಿ ಎಂದು ಅವರು ತಾಲ್ಲೂಕು ಪಂಚಾಯಿತಿ ಇಒಗೆ ಸೂಚಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸಿಇಒ ಎನ್.ಶಾಂತಪ್ಪ, ಮುಖ್ಯ ಲೆಕ್ಕಾಧಿಕಾರಿ ಗಂಗಣ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ಬಾಬಣ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ವಿಮಲಾ, ಅಂಗವಿಕಲರ-ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಅಧಿಕಾರಿ ನಾಗಮಣಿ, ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ಜಯಪ್ರಕಾಶ ಸಮುದ್ರೆ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಜಿಲ್ಲೆಯ ಅಂಗವಿಕಲರ ಸ್ಥಿತಿಗತಿಯ ಸಮಗ್ರ ಅಧ್ಯಯನ ಅಗತ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸ್ವಯಂ ಸೇವಕರ ಮೂಲಕ ಸಮೀಕ್ಷೆ ನಡೆಸಬೇಕು ಎಂದು ಅಂಗವಿಕಲರ ಕಲ್ಯಾಣ ಇಲಾಖೆ ಆಯುಕ್ತ ಕೆ.ವಿ.ರಾಜಣ್ಣ ಸೂಚಿಸಿದರು.<br /> <br /> ಅಂಗವಿಕಲರಿಗೆ ಮೀಸಲಾಗಿರುವ ಶೇ.3ರ ಅನುದಾನ ಬಳಕೆ ಸಂಬಂಧ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಸೂಚನೆ ನೀಡಿದರು. <br /> <br /> ಗ್ರಾಮೀಣ ಅಭಿವೃದ್ಧಿ ಯೋಜನೆಯಡಿ ಅಂಗವಿಕಲರಿಗೆ ನಿಗದಿಪಡಿಸಿರುವ ಆಯವ್ಯಯದ ಶೇ.3ರಷ್ಟು ಹಣವನ್ನು ಅವರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ವೈದ್ಯಕೀಯ ಪುನರ್ವಸತಿ ಕಾರ್ಯಗಳಿಗೆ ಮೀಸಲಿಟ್ಟು ಮುಖ್ಯವಾಹಿನಿಗೆ ತರಬೇಕಾಗಿದೆ. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಅಂಗವಿಕಲರ ಸಮೀಕ್ಷೆ ನಡೆಸಬೇಕು ಎಂದರು.<br /> <br /> ಅಂಗವಿಕಲರ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದಕ್ಕೆ ಅಧಿಕಾರಿಗಳೇ ಕಾರಣ. ಈ ನಿಟ್ಟಿನಲ್ಲಿ ಇನ್ನು ಮುಂದೆ ಕಾಳಜಿ ವಹಿಸಬೇಕು. ಉಲ್ಲಂಘನೆ ಪ್ರಕರಣ ಕಂಡು ಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.<br /> <br /> ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಅನುಷ್ಠಾನಗೊಳ್ಳುವ ಯೋಜನೆ ಅಡಿಯಲ್ಲಿ ಅಂಗವಿಕಲರಿಗೆ ರೂ.56 ಲಕ್ಷ ಮೀಸಲಿಡಲಾಗಿದೆ. ಅದನ್ನು ಸ್ವಯಂಸೇವಕರಿಗೆ ಗೌರವಧನ ನೀಡಲು ಬಳಸಬಹುದು. ಒಟ್ಟಾರೆ ಅಂಗವಿಕಲರ ಕಲ್ಯಾಣಕ್ಕೆ ಸದ್ವಿನಿಯೋಗ ಮಾಡಬೇಕು ಎಂದರು.<br /> <br /> ಪಿಂಚಣಿಗಾಗಿ ಅಂಗವಿಕಲ ಪಲಾನುಭವಿಗಳನ್ನು ಗುರುತಿಸಲು ನಿಯೋಜನೆಗೊಂಡಿರುವ ಸ್ವಯಂಸೇವಕರಿಗೆ ನೀಡಲಾಗುತ್ತಿರುವ ಗೌರವ ಧನ ರೂ.1.5 ಸಾವಿರ ಸಾಕಾಗುತ್ತಿಲ್ಲ ಎಂಬ ಬೇಡಿಕೆ ಕೇಳಿಬಂದಿರುವ ಹಿನ್ನೆಲೆಯಲ್ಲಿ, 2 ಸಾವಿರಕ್ಕೆ ಹೆಚ್ಚಿಸಿ ಕ್ರಮ ಕೈಗೊಳ್ಳಿ ಎಂದು ಅವರು ತಾಲ್ಲೂಕು ಪಂಚಾಯಿತಿ ಇಒಗೆ ಸೂಚಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸಿಇಒ ಎನ್.ಶಾಂತಪ್ಪ, ಮುಖ್ಯ ಲೆಕ್ಕಾಧಿಕಾರಿ ಗಂಗಣ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ಬಾಬಣ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ವಿಮಲಾ, ಅಂಗವಿಕಲರ-ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಅಧಿಕಾರಿ ನಾಗಮಣಿ, ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ಜಯಪ್ರಕಾಶ ಸಮುದ್ರೆ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>