<p>ಕೋಲಾರ: ಅಡುಗೆ ಅನಿಲ ಸಿಲಿಂಡರ್ ಪೂರೈಸಬೇಕು ಎಂದು ಆಗ್ರಹಿಸಿ ನಗರದ ಬಂಗಾರಪೇಟೆ ವೃತ್ತದಲ್ಲಿ ಸೋಮವಾರ ಗ್ರಾಹಕರು ಸಿಲಿಂಡರ್ಗಳನ್ನು ಅಡ್ಡ ಇಟ್ಟು ರಸ್ತೆ ತಡೆ ನಡೆಸಿದರು.<br /> <br /> ಹಲವು ದಿನಗಳಿಂದ ಸಿಲಿಂಡರ್ ಪೂರೈಸದಿರುವುದರಿಂದ ಪರದಾಡುವಂತಾಗಿದೆ. ನಿತ್ಯವೂ ಬೆಳಕಾಗುವ ಮುನ್ನವೇ ಬಂದು ಸಾಲಿನಲ್ಲಿ ನಿಂತರೂ ಸಿಲಿಂಡರ್ ದೊರಕುತ್ತಿಲ್ಲ. ಕೂಡಲೇ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ ಗ್ರಾಹಕರು ಕೇದಾರ್ ಗ್ಯಾಸ್ ಏಜೆನ್ಸಿ ಮುಂದಿನ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. <br /> <br /> ರಸ್ತೆಗೆ ಅಡ್ಡವಾಗಿ ಸಿಲಿಂಡರ್ ಜೋಡಿಸಿದ ಗ್ರಾಹಕರು ಅಧಿಕಾರಿ ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟುಹಿಡಿದರು.<br /> <br /> ನಂತರ ಸ್ಥಳಕ್ಕೆ ಬಂದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಕೆ.ಶ್ರೀನಿವಾಸ್ ಪ್ರತಿಭಟನೆಕಾರರ ಅಹವಾಲು ಆಲಿಸಿದರು. ಸಿಲಿಂಡರ್ ಸಾಗಣೆ ವಾಹನಗಳ ಮುಷ್ಕರದಿಂದ ಸಮಸ್ಯೆ ಏರ್ಪಟ್ಟಿದೆ. <br /> <br /> ಮುಷ್ಕರ ಕೊನೆಗೊಂಡಿರುವುದರಿಂದ ಕೆಲವೇ ದಿನದಲ್ಲಿ ಸಮಸ್ಯೆ ಬಗೆಹರಿಸಯಲಿದೆ. ಸಮಸ್ಯೆ ಶೀಘ್ರ ಪರಿಹಾರವಾಗುವ ನಿಟ್ಟಿನಲ್ಲಿ ಇಲಾಖೆಯೂ ಕ್ರಮ ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು. ನಂತರ ಗ್ರಾಹಕರು ಪ್ರತಿಭಟನೆ ನಿಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಅಡುಗೆ ಅನಿಲ ಸಿಲಿಂಡರ್ ಪೂರೈಸಬೇಕು ಎಂದು ಆಗ್ರಹಿಸಿ ನಗರದ ಬಂಗಾರಪೇಟೆ ವೃತ್ತದಲ್ಲಿ ಸೋಮವಾರ ಗ್ರಾಹಕರು ಸಿಲಿಂಡರ್ಗಳನ್ನು ಅಡ್ಡ ಇಟ್ಟು ರಸ್ತೆ ತಡೆ ನಡೆಸಿದರು.<br /> <br /> ಹಲವು ದಿನಗಳಿಂದ ಸಿಲಿಂಡರ್ ಪೂರೈಸದಿರುವುದರಿಂದ ಪರದಾಡುವಂತಾಗಿದೆ. ನಿತ್ಯವೂ ಬೆಳಕಾಗುವ ಮುನ್ನವೇ ಬಂದು ಸಾಲಿನಲ್ಲಿ ನಿಂತರೂ ಸಿಲಿಂಡರ್ ದೊರಕುತ್ತಿಲ್ಲ. ಕೂಡಲೇ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ ಗ್ರಾಹಕರು ಕೇದಾರ್ ಗ್ಯಾಸ್ ಏಜೆನ್ಸಿ ಮುಂದಿನ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. <br /> <br /> ರಸ್ತೆಗೆ ಅಡ್ಡವಾಗಿ ಸಿಲಿಂಡರ್ ಜೋಡಿಸಿದ ಗ್ರಾಹಕರು ಅಧಿಕಾರಿ ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟುಹಿಡಿದರು.<br /> <br /> ನಂತರ ಸ್ಥಳಕ್ಕೆ ಬಂದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಕೆ.ಶ್ರೀನಿವಾಸ್ ಪ್ರತಿಭಟನೆಕಾರರ ಅಹವಾಲು ಆಲಿಸಿದರು. ಸಿಲಿಂಡರ್ ಸಾಗಣೆ ವಾಹನಗಳ ಮುಷ್ಕರದಿಂದ ಸಮಸ್ಯೆ ಏರ್ಪಟ್ಟಿದೆ. <br /> <br /> ಮುಷ್ಕರ ಕೊನೆಗೊಂಡಿರುವುದರಿಂದ ಕೆಲವೇ ದಿನದಲ್ಲಿ ಸಮಸ್ಯೆ ಬಗೆಹರಿಸಯಲಿದೆ. ಸಮಸ್ಯೆ ಶೀಘ್ರ ಪರಿಹಾರವಾಗುವ ನಿಟ್ಟಿನಲ್ಲಿ ಇಲಾಖೆಯೂ ಕ್ರಮ ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು. ನಂತರ ಗ್ರಾಹಕರು ಪ್ರತಿಭಟನೆ ನಿಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>