<p><strong>ಕೋಲಾರ: </strong>ಆಸ್ತಿ ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವಿನ ಜಗಳ ತಾರಕಕ್ಕೇರಿ ಪರಸ್ಪರ ಹಲ್ಲೆ ನಡೆಸಿದ ಘಟನೆ ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದಿದೆ. <br /> <br /> ತಾಲ್ಲೂಕಿನ ವೇಮಗಲ್ ಹೋಬಳಿಯ ಸಾಹುಕಾರ್ ಶೆಟ್ಟಿಹಳ್ಳಿಯ ಶ್ರೀನಿವಾಸಗೌಡ ಮತ್ತು ಹೊದಲವಾಡಿಯ ಪಾಪೇಗೌಡ ಎಂಬುವವರ ನಡುವೆ ಹಲವು ದಿನಗಳಿಂದ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಜಗಳ ನಡೆಯುತ್ತಿತ್ತು. ಪ್ರಕರಣವು ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದು, ತೀರ್ಪು ಶ್ರೀನಿವಾಸಗೌಡರ ಪರವಾಗಿ ಹೊರಬಂದಿತ್ತು. <br /> <br /> ನಂತರ ಅವರು ಜಮೀನನ್ನು ಮಾರಾಟ ಮಾಡಿ ನೋಂದಣಿ ಸಲುವಾಗಿ ನಗರದ ಉಪನೋಂದಣಾಧಿಕಾರಿ ಕಚೇರಿಗೆ ಬಂದಾಗ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡೂ ಕಡೆಯವರು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿದರು ಎಂದು ಸ್ಥಳೀಯರು ತಿಳಿಸಿದ್ದಾರೆ.<br /> <br /> ಆಸ್ತಿ ನೋಂದಣಿಗೆ ಅಡ್ಡಿಪಡಿಸಿದ ಪಾಪೇಗೌಡ, ಶ್ರೀನಿವಾಸಗೌಡರ ಹೆಣ್ಣುಮಕ್ಕಳ ಮೇಲೆ ಹಲ್ಲೆ ಮಾಡಿದರು. ಅದನ್ನು ವಿರೋಧಿಸಿ ಶ್ರೀನಿವಾಸಗೌಡರ ಕಡೆಯವರು ಅವರ ಮೇಲೆ ಪ್ರತಿಯಾಗಿ ಹಲ್ಲೆ ನಡೆಸಿದರು. ಈ ಸಂದರ್ಭದಲ್ಲಿ ನೂಕಾಟ, ತಳ್ಳಾಟವೂ ನಡೆದು, ಸ್ಥಳದಲ್ಲಿದ್ದ ಸಾರ್ವಜನಿಕರೂ ಗೊಂದಲಕ್ಕೀಡಾದರು. ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯವರ ಜಗಳ ಬಿಡಿಸಿ ಸನ್ನಿವೇಶ ನಿಯಂತ್ರಿಸಿದರು. ಪಾಪೇಗೌಡರನ್ನು ಪೊಲೀಸ್ ಠಾಣೆಗೆ ಕರೆದೊಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಆಸ್ತಿ ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವಿನ ಜಗಳ ತಾರಕಕ್ಕೇರಿ ಪರಸ್ಪರ ಹಲ್ಲೆ ನಡೆಸಿದ ಘಟನೆ ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದಿದೆ. <br /> <br /> ತಾಲ್ಲೂಕಿನ ವೇಮಗಲ್ ಹೋಬಳಿಯ ಸಾಹುಕಾರ್ ಶೆಟ್ಟಿಹಳ್ಳಿಯ ಶ್ರೀನಿವಾಸಗೌಡ ಮತ್ತು ಹೊದಲವಾಡಿಯ ಪಾಪೇಗೌಡ ಎಂಬುವವರ ನಡುವೆ ಹಲವು ದಿನಗಳಿಂದ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಜಗಳ ನಡೆಯುತ್ತಿತ್ತು. ಪ್ರಕರಣವು ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದು, ತೀರ್ಪು ಶ್ರೀನಿವಾಸಗೌಡರ ಪರವಾಗಿ ಹೊರಬಂದಿತ್ತು. <br /> <br /> ನಂತರ ಅವರು ಜಮೀನನ್ನು ಮಾರಾಟ ಮಾಡಿ ನೋಂದಣಿ ಸಲುವಾಗಿ ನಗರದ ಉಪನೋಂದಣಾಧಿಕಾರಿ ಕಚೇರಿಗೆ ಬಂದಾಗ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡೂ ಕಡೆಯವರು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿದರು ಎಂದು ಸ್ಥಳೀಯರು ತಿಳಿಸಿದ್ದಾರೆ.<br /> <br /> ಆಸ್ತಿ ನೋಂದಣಿಗೆ ಅಡ್ಡಿಪಡಿಸಿದ ಪಾಪೇಗೌಡ, ಶ್ರೀನಿವಾಸಗೌಡರ ಹೆಣ್ಣುಮಕ್ಕಳ ಮೇಲೆ ಹಲ್ಲೆ ಮಾಡಿದರು. ಅದನ್ನು ವಿರೋಧಿಸಿ ಶ್ರೀನಿವಾಸಗೌಡರ ಕಡೆಯವರು ಅವರ ಮೇಲೆ ಪ್ರತಿಯಾಗಿ ಹಲ್ಲೆ ನಡೆಸಿದರು. ಈ ಸಂದರ್ಭದಲ್ಲಿ ನೂಕಾಟ, ತಳ್ಳಾಟವೂ ನಡೆದು, ಸ್ಥಳದಲ್ಲಿದ್ದ ಸಾರ್ವಜನಿಕರೂ ಗೊಂದಲಕ್ಕೀಡಾದರು. ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯವರ ಜಗಳ ಬಿಡಿಸಿ ಸನ್ನಿವೇಶ ನಿಯಂತ್ರಿಸಿದರು. ಪಾಪೇಗೌಡರನ್ನು ಪೊಲೀಸ್ ಠಾಣೆಗೆ ಕರೆದೊಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>