ಭಕ್ತರಿಗಾಗಿ ಬೆಟ್ಟದ ಮೇಲೆ ಹಾಗೂ ಕೆಳ ಭಾಗದಲ್ಲಿ ಪ್ರಸಾದ ವಿನಿಯೋಗ ಮಾಡಲಾಯಿತು. ಬಜರಂಗದಳ, ವಿಶ್ವ ಹಿಂದೂ ಪರಿಷತ್, ಕಿಲಾರಿಪೇಟೆಯ ಗೋಕುಲ ಮಿತ್ರ ಬಳಗ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಪ್ರತಿ ವರ್ಷದಂತೆ ಈ ಬಾರಿಯೂ ಅನ್ನದಾನ ನಡೆಸಿದರು. ಭಕ್ತರ ಬಾಯಾರಿಕೆ ತಣಿಸಲು ಕುಡಿಯುವ ನೀರಿನ ಪ್ಯಾಕೆಟ್ ಉಚಿತವಾಗಿ ವಿತರಿಸಲಾಯಿತು. ‘ನಮ್ಮ ಗೆಳೆಯರ ಬಳಗ’ದ ಸದಸ್ಯರು ಭಕ್ತರಿಗೆ ಸಸಿ ವಿತರಿಸಿದರು.