<p>ಕೋಲಾರ: ಕಳಪೆ ಆಹಾರ ಪೂರೈಸಲಾಗುತ್ತಿದೆ ಎಂದು ಆರೋಪಿಸಿ ನಗರದ ನಚಿಕೇತ ವಿದ್ಯಾರ್ಥಿ ನಿಲಯದ ಕಾನೂನು ಕಾಲೇಜು ವಿದ್ಯಾರ್ಥಿಗಳು ತರಕಾರಿ, ಧಾನ್ಯ ಪ್ರದರ್ಶಿಸಿ ಶುಕ್ರವಾರ ಸಂಜೆ ನಿಲಯದ ಆವರಣದಲ್ಲಿ ಧರಣಿ ನಡೆಸಿ ಪ್ರತಿಭಟಿಸಿದರು.<br /> <br /> ವಿದ್ಯಾರ್ಥಿಗಳಿಗೆ ಸರ್ಕಾರ ಲಕ್ಷಾಂತರ ರೂಪಾಯಿ ವಿನಿಯೋಗಿಸಿದರೂ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಆಹಾರ ಪೂರೈಸುತ್ತಿಲ್ಲ. ಸರಿಯಾದ ಸಮಯಕ್ಕೆ ಆಹಾರ ನೀಡುವುದಿಲ್ಲ. ಹಲವು ಬಾರಿ ಈ ಬಗ್ಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಸ್ಥಳಕ್ಕೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಬರಲೇಬೇಕು ಎಂದು ಆಗ್ರಹಿಸಿದರು. <br /> <br /> ಹಲವು ಬಾರಿ ಪ್ರತಿಭಟನೆ ನಡೆಸಿ ಸಮಸ್ಯೆಗಳ ಬಗ್ಗೆ ಗಮನ ಸೆಳೆದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ರಸ್ತೆಗಿಳಿದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಆಸಮಾಧಾನ ವ್ಯಕ್ತಪಡಿಸಿದರು.<br /> <br /> ಕೋಲಾರ- ಬಂಗಾರಪೇಟೆ ರಸ್ತೆಯ್ಲ್ಲಲಿರುವ ನಿಲಯದ ಮುಖ್ಯ ಗೇಟಿನ ಮುಂದೆಯೇ ವಿದ್ಯಾರ್ಥಿಗಳು ಧರಣಿ ನಡೆಸಿದ್ದರಿಂದ ದಾರಿಹೋಕರಿಗೆ ಇದು ಕುತೂಹಲದ ವಿಷಯವಾಗಿತ್ತು. ಸಂಜೆ 5 ಗಂಟೆಯ ವೇಳೆಗೆ ಧರಣಿ ಆರಂಭಿಸಿದ ವಿದ್ಯಾರ್ಥಿಗಳು ರಾತ್ರಿ 8 ಗಂಟೆಯಾದರೂ ಧರಣಿ ಮುಂದುವರಿಸಿದ್ದರು. <br /> <br /> ಆವರ ಆಹವಾಲು ಕೇಳಲು ಸಮಾಜ ಕಲ್ಯಾಣ ಇಲಾಖೆಯ ಯಾವ ಆಧಿಕಾರಿಯೂ ಬಂದಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಕಳಪೆ ಆಹಾರ ಪೂರೈಸಲಾಗುತ್ತಿದೆ ಎಂದು ಆರೋಪಿಸಿ ನಗರದ ನಚಿಕೇತ ವಿದ್ಯಾರ್ಥಿ ನಿಲಯದ ಕಾನೂನು ಕಾಲೇಜು ವಿದ್ಯಾರ್ಥಿಗಳು ತರಕಾರಿ, ಧಾನ್ಯ ಪ್ರದರ್ಶಿಸಿ ಶುಕ್ರವಾರ ಸಂಜೆ ನಿಲಯದ ಆವರಣದಲ್ಲಿ ಧರಣಿ ನಡೆಸಿ ಪ್ರತಿಭಟಿಸಿದರು.<br /> <br /> ವಿದ್ಯಾರ್ಥಿಗಳಿಗೆ ಸರ್ಕಾರ ಲಕ್ಷಾಂತರ ರೂಪಾಯಿ ವಿನಿಯೋಗಿಸಿದರೂ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಆಹಾರ ಪೂರೈಸುತ್ತಿಲ್ಲ. ಸರಿಯಾದ ಸಮಯಕ್ಕೆ ಆಹಾರ ನೀಡುವುದಿಲ್ಲ. ಹಲವು ಬಾರಿ ಈ ಬಗ್ಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಸ್ಥಳಕ್ಕೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಬರಲೇಬೇಕು ಎಂದು ಆಗ್ರಹಿಸಿದರು. <br /> <br /> ಹಲವು ಬಾರಿ ಪ್ರತಿಭಟನೆ ನಡೆಸಿ ಸಮಸ್ಯೆಗಳ ಬಗ್ಗೆ ಗಮನ ಸೆಳೆದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ರಸ್ತೆಗಿಳಿದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಆಸಮಾಧಾನ ವ್ಯಕ್ತಪಡಿಸಿದರು.<br /> <br /> ಕೋಲಾರ- ಬಂಗಾರಪೇಟೆ ರಸ್ತೆಯ್ಲ್ಲಲಿರುವ ನಿಲಯದ ಮುಖ್ಯ ಗೇಟಿನ ಮುಂದೆಯೇ ವಿದ್ಯಾರ್ಥಿಗಳು ಧರಣಿ ನಡೆಸಿದ್ದರಿಂದ ದಾರಿಹೋಕರಿಗೆ ಇದು ಕುತೂಹಲದ ವಿಷಯವಾಗಿತ್ತು. ಸಂಜೆ 5 ಗಂಟೆಯ ವೇಳೆಗೆ ಧರಣಿ ಆರಂಭಿಸಿದ ವಿದ್ಯಾರ್ಥಿಗಳು ರಾತ್ರಿ 8 ಗಂಟೆಯಾದರೂ ಧರಣಿ ಮುಂದುವರಿಸಿದ್ದರು. <br /> <br /> ಆವರ ಆಹವಾಲು ಕೇಳಲು ಸಮಾಜ ಕಲ್ಯಾಣ ಇಲಾಖೆಯ ಯಾವ ಆಧಿಕಾರಿಯೂ ಬಂದಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>