<p><strong>ಬಂಗಾರಪೇಟೆ (ಅರಳು ಮಲ್ಲಿಗೆ ಗಂಗಾಧರ ವೇದಿಕೆ):</strong> ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸುವುದನ್ನೇ ಪ್ರತಿಭೆ ಮತ್ತು ಅರ್ಹತೆಯ ಮಾನದಂಡವಾಗಿ ಪರಿಗಣಿಸುವುದು ಸರಿಯಲ್ಲ ಎಂದು ಮಂಜುಳಾಪ್ರಸಾದ್ ಅಭಿಪ್ರಾಯಪಟ್ಟರು.<br /> <br /> ಪಟ್ಟಣದ ಬಾಲಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ಆರಂಭವಾದ ತಾಲ್ಲೂಕು ಮಟ್ಟದ 3ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಏರ್ಪಡಿಸಿದ್ದ `ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ' ಕುರಿತ ಗೋಷ್ಠಿಯಲ್ಲಿ `ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ'ಕುರಿತು ಮಾತನಾಡಿದರು.<br /> <br /> ಶಿಕ್ಷಕರು ಮತ್ತು ಪೋಷಕರ ಪಾಲ್ಗೊಳ್ಳುವಿಕೆ ಇಲ್ಲದೆ ಗುಣಮಟ್ಟದ ಶಿಕ್ಷಣ ರೂಪುಗೊಳ್ಳುವುದಿಲ್ಲ. ಶಿಕ್ಷಣದಲ್ಲಿ ನಿಜವಾದ ಗುಣಮಟ್ಟವನ್ನು ಕಾಪಾಡುವ ವಾತಾವರಣ ಮೂಡಬೇಕಾಗಿದೆ ಎಂದರು.<br /> <br /> ಉತ್ತಮ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಣ ಸಂಸ್ಥೆಗಳ ಉತ್ತಮ ಕಟ್ಟಡಗಳು, ಅಲ್ಲಿನ ವಿದ್ಯಾರ್ಥಿಗಳು ಗಳಿಸಿದ ಅಂಕಗಳಷ್ಟೇ ಮಾನದಂಡವಾಗಬಾರದು ಎಂದು ಪ್ರತಿಪಾದಿಸಿದರು.<br /> <br /> ಉತ್ತಮ ಶಾಲಾ ಕಟ್ಟಡಗಳು, ಪಾಠೋಪಕರಣ, ಪೀಠೋಪಕರಣಗಳು ಇದ್ದರಷ್ಟೇ ಸಾಲದು. ಗುಣಮಟ್ಟ ಶಿಕ್ಷಣದ ಜೀವ ದ್ರವ್ಯವೇ ಆಗಿರುವ ಸೃಜನಶೀಲ ಶಿಕ್ಷಕರಿರಬೇಕು. ವಿದ್ಯಾರ್ಥಿಗಳಲ್ಲಿ ಕೇವಲ ವಿಷಯ ಜ್ಞಾನತುಂಬಿದರಷ್ಟೇ ಸಾಲದು. ಸಾಮಾನ್ಯ ಜ್ಞಾನ, ಲೋಕದೃಷ್ಟಿ, ಮಾನವೀಯ, ನೈತಿಕ ಮೌಲ್ಯಗಳನ್ನು ರೂಢಿಸಬೇಕು ಎಂದರು.<br /> <br /> ಅಂಕಗಳಿಕೆಯೇ ಮಹತ್ವದ್ದು ಎಂಬ ನಂಬಿಕೆಯನ್ನು ಪೋಷಿಸುವ ಶಿಕ್ಷಕರುಮತ್ತು ಪೋಷಕರು ಹೇರುತ್ತಿರುವ ಅನಗತ್ಯ ಒತ್ತಡವು ಮಕ್ಕಳ ಮನಸ್ಸಿನ ಮೇಲೆ ಮಾರಕ ಪರಿಣಾಮಗಳನ್ನು ಬೀರುತ್ತಿದೆ. ಮಕ್ಕಳಲ್ಲಿ ವಿಮರ್ಶಾತ್ಮಕ ಚಿಂತನೆಮತ್ತು ಉತ್ತಮ ವ್ಯಕ್ತಿತ್ವ ನಿರ್ಮಾಣವಾಗಬೇಕಾದರೆ ಸಮಗ್ರ ಶಿಕ್ಷಣ ದೊರಕಬೇಕು ಎಂದರು.<br /> <br /> ಮಕ್ಕಳ ಶಿಕ್ಷಣದ ಹಕ್ಕು ಕಾಯಿದೆಯ ಸಾಧಕ-ಬಾಧಕಗಳ ಕುರಿತು ಎಸ್.ಮಾದಮಂಗಳ ಪ್ರೌಢ ಶಾಲೆಯ ಶಿಕ್ಷಕ ಎಲ್.ರಾಜಪ್ಪ ಮಾತನಾಡಿದರು. ಡಯಟ್ ಹಿರಿಯ ಉಪನ್ಯಾಸಕ ಜಿ.ವೆಂಕಟರಾಮರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನಾಧ್ಯಕ್ಷ ಕೋಗಿಲಹಳ್ಳಿ ಕೃಷ್ಣಪ್ಪ, ಶಿಕ್ಷಕಿ ನಿರ್ಮಲಾ ಉಪಸ್ಥಿತರಿದ್ದರು. ನಂತರ ನ್ಯೂ ಇಂಡಿಯನ್ ಡಾನ್ಸ್ ಇನ್ಸ್ಟುಟಿಟ್ಯೂಟ್ನ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ (ಅರಳು ಮಲ್ಲಿಗೆ ಗಂಗಾಧರ ವೇದಿಕೆ):</strong> ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸುವುದನ್ನೇ ಪ್ರತಿಭೆ ಮತ್ತು ಅರ್ಹತೆಯ ಮಾನದಂಡವಾಗಿ ಪರಿಗಣಿಸುವುದು ಸರಿಯಲ್ಲ ಎಂದು ಮಂಜುಳಾಪ್ರಸಾದ್ ಅಭಿಪ್ರಾಯಪಟ್ಟರು.<br /> <br /> ಪಟ್ಟಣದ ಬಾಲಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ಆರಂಭವಾದ ತಾಲ್ಲೂಕು ಮಟ್ಟದ 3ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಏರ್ಪಡಿಸಿದ್ದ `ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ' ಕುರಿತ ಗೋಷ್ಠಿಯಲ್ಲಿ `ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ'ಕುರಿತು ಮಾತನಾಡಿದರು.<br /> <br /> ಶಿಕ್ಷಕರು ಮತ್ತು ಪೋಷಕರ ಪಾಲ್ಗೊಳ್ಳುವಿಕೆ ಇಲ್ಲದೆ ಗುಣಮಟ್ಟದ ಶಿಕ್ಷಣ ರೂಪುಗೊಳ್ಳುವುದಿಲ್ಲ. ಶಿಕ್ಷಣದಲ್ಲಿ ನಿಜವಾದ ಗುಣಮಟ್ಟವನ್ನು ಕಾಪಾಡುವ ವಾತಾವರಣ ಮೂಡಬೇಕಾಗಿದೆ ಎಂದರು.<br /> <br /> ಉತ್ತಮ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಣ ಸಂಸ್ಥೆಗಳ ಉತ್ತಮ ಕಟ್ಟಡಗಳು, ಅಲ್ಲಿನ ವಿದ್ಯಾರ್ಥಿಗಳು ಗಳಿಸಿದ ಅಂಕಗಳಷ್ಟೇ ಮಾನದಂಡವಾಗಬಾರದು ಎಂದು ಪ್ರತಿಪಾದಿಸಿದರು.<br /> <br /> ಉತ್ತಮ ಶಾಲಾ ಕಟ್ಟಡಗಳು, ಪಾಠೋಪಕರಣ, ಪೀಠೋಪಕರಣಗಳು ಇದ್ದರಷ್ಟೇ ಸಾಲದು. ಗುಣಮಟ್ಟ ಶಿಕ್ಷಣದ ಜೀವ ದ್ರವ್ಯವೇ ಆಗಿರುವ ಸೃಜನಶೀಲ ಶಿಕ್ಷಕರಿರಬೇಕು. ವಿದ್ಯಾರ್ಥಿಗಳಲ್ಲಿ ಕೇವಲ ವಿಷಯ ಜ್ಞಾನತುಂಬಿದರಷ್ಟೇ ಸಾಲದು. ಸಾಮಾನ್ಯ ಜ್ಞಾನ, ಲೋಕದೃಷ್ಟಿ, ಮಾನವೀಯ, ನೈತಿಕ ಮೌಲ್ಯಗಳನ್ನು ರೂಢಿಸಬೇಕು ಎಂದರು.<br /> <br /> ಅಂಕಗಳಿಕೆಯೇ ಮಹತ್ವದ್ದು ಎಂಬ ನಂಬಿಕೆಯನ್ನು ಪೋಷಿಸುವ ಶಿಕ್ಷಕರುಮತ್ತು ಪೋಷಕರು ಹೇರುತ್ತಿರುವ ಅನಗತ್ಯ ಒತ್ತಡವು ಮಕ್ಕಳ ಮನಸ್ಸಿನ ಮೇಲೆ ಮಾರಕ ಪರಿಣಾಮಗಳನ್ನು ಬೀರುತ್ತಿದೆ. ಮಕ್ಕಳಲ್ಲಿ ವಿಮರ್ಶಾತ್ಮಕ ಚಿಂತನೆಮತ್ತು ಉತ್ತಮ ವ್ಯಕ್ತಿತ್ವ ನಿರ್ಮಾಣವಾಗಬೇಕಾದರೆ ಸಮಗ್ರ ಶಿಕ್ಷಣ ದೊರಕಬೇಕು ಎಂದರು.<br /> <br /> ಮಕ್ಕಳ ಶಿಕ್ಷಣದ ಹಕ್ಕು ಕಾಯಿದೆಯ ಸಾಧಕ-ಬಾಧಕಗಳ ಕುರಿತು ಎಸ್.ಮಾದಮಂಗಳ ಪ್ರೌಢ ಶಾಲೆಯ ಶಿಕ್ಷಕ ಎಲ್.ರಾಜಪ್ಪ ಮಾತನಾಡಿದರು. ಡಯಟ್ ಹಿರಿಯ ಉಪನ್ಯಾಸಕ ಜಿ.ವೆಂಕಟರಾಮರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನಾಧ್ಯಕ್ಷ ಕೋಗಿಲಹಳ್ಳಿ ಕೃಷ್ಣಪ್ಪ, ಶಿಕ್ಷಕಿ ನಿರ್ಮಲಾ ಉಪಸ್ಥಿತರಿದ್ದರು. ನಂತರ ನ್ಯೂ ಇಂಡಿಯನ್ ಡಾನ್ಸ್ ಇನ್ಸ್ಟುಟಿಟ್ಯೂಟ್ನ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>