ಶ್ರೀನಿವಾಸಪುರ: ತಾಲ್ಲೂಕಿನ ಸಿ.ಬೈರೇಗೌಡ ತಾಂತ್ರಿಕ ಮಹಾ ವಿದ್ಯಾಲಯದ ಕಾರ್ಯದರ್ಶಿ ಕೃಷ್ಣಾರೆಡ್ಡಿ ಸಿ.ಹೊಸೂರು ಗ್ರಾಮದ ಜನ, ಜಾನುವಾರುಗಳಿಗೆ ಅಗತ್ಯವಾದ ಕುಡಿಯುವ ನೀರನ್ನು ಉಚಿತವಾಗಿ ಪೂರೈಸುತ್ತಿದ್ದು ಮೆಚ್ಚುಗೆ ಗಳಿಸಿದ್ದಾರೆ.
ಗ್ರಾಮದಲ್ಲಿನ ತಮ್ಮ ಮನೆಯ ಮುಂಭಾಗ ಸಿಸ್ಟಿನ್ ಹಾಗೂ ತೊಟ್ಟಿ ನಿರ್ಮಿಸಿ ದಾಹ ನೀಗಿಸುತ್ತಿದ್ದಾರೆ. ಗ್ರಾಮದ ಸುತ್ತ ಮುತ್ತ ಯಾವುದೇ ಕೆರೆ ಅಥವಾ ಕುಂಟೆಯಲ್ಲಿ ನೀರು ಇಲ್ಲ. ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗಿತ್ತು.