ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಾಧವ ರಾಜೀನಾಮೆ ಅಂಗೀಕರಿಸಿಲ್ಲ’

Last Updated 18 ಮಾರ್ಚ್ 2019, 17:30 IST
ಅಕ್ಷರ ಗಾತ್ರ

ಕೋಲಾರ: ‘ಕಲಬುರ್ಗಿ ಜಿಲ್ಲೆ ಚಿಂಚೋಳಿ ಶಾಸಕ ಉಮೇಶ್‌ ಜಾಧವ ಅವರ ರಾಜೀನಾಮೆ ಸಂಬಂಧ ಕೆಲ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿದ್ದೇನೆ. ಆದರೆ, ಅವರು ಪ್ರಮಾಣಪತ್ರ ಸಲ್ಲಿಸದ ಕಾರಣ ರಾಜೀನಾಮೆ ಅಂಗೀಕರಿಸಿಲ್ಲ’ ಎಂದು ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ಸ್ಪಷ್ಟಪಡಿಸಿದರು.

ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್‌ ಗ್ರಾಮದಲ್ಲಿ ಮಾತನಾಡಿ, ‘ಜಾಧವ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಹಾಗೂ ನನಗೆ ರಾಜೀನಾಮೆ ಪತ್ರದ ಜತೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸಾಮ್ಯತೆಯಿಲ್ಲ. ಹೀಗಾಗಿ ಅವರಿಂದ ಸ್ಪಷ್ಟನೆ ಕೇಳಿದ್ದೇನೆ’ ಎಂದರು.

‘ಜಾಧವ ಅವರು ಸ್ಪಷ್ಟನೆಯೊಂದಿಗೆ ಪ್ರಮಾಣಪತ್ರ ಸಲ್ಲಿಸಿದ ನಂತರ ರಾಜೀನಾಮೆ ಅಂಗೀಕರಿಸುವ ಬಗ್ಗೆ ಪರಿಶೀಲನೆ ಮಾಡುತ್ತೇನೆ’ ಎಂದರು.

ಆಗ್ರಹ: ಜಾಧವ ಅವರ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಮಾಜಿ ಸಚಿವ ವೈಜನಾಥ ಪಾಟೀಲ್‌ ಪತ್ರ ಬರೆದು ಆಗ್ರಹಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT