<p><strong>ಮಾಲೂರು: </strong>ಜಿಲ್ಲೆಯಲ್ಲಿ ಬರಗಾಲ ತೀವ್ರವಾಗಿರುವ ಹಿನ್ನೆಲೆಯಲ್ಲಿ ಜನರ ಸಮಸ್ಯೆ ಪರಿಹರಿಸಲು ಗ್ರಾಮಮಟ್ಟದ ಅಧಿಕಾರಿಗಳು ಜನರಿಗೆ ಸದಾ ಲಭ್ಯವಿರಬೇಕು ಎಂದು ಸಚಿವ ಎಸ್.ಸುರೇಶ್ಕುಮಾರ್ ಸೂಚನೆ ನೀಡಿದರು.<br /> <br /> ಬರ ಪರಿಸ್ಥಿತಿ ಅಧ್ಯಯನ ಮಾಡುವ ಸಲುವಾಗಿ ಜಿಲ್ಲೆಗೆ ಸಚಿವರ ತಂಡದೊಡನೆ ಮಂಗಳವಾರ ಭೇಟಿ ನೀಡಿದ ಅವರು ಬೆಳಿಗ್ಗೆಯಿಂದ ಸಂಜೆವರೆಗೂ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಬಳಿಕ ಮಾಲೂರು ತಾಲ್ಲೂಕಿನ ಕಡತ್ತೂರಿನಲ್ಲಿ ರಾತ್ರಿ 7ರ ವೇಳೆಗೆ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.<br /> <br /> ಹಳ್ಳಿಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವೆಡೆ ಮೇವು ಪೂರೈಕೆಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಯಾವ ಗ್ರಾಮಕ್ಕೂ ವಿಳಂಬ ಮಾಡಬಾರದು. ಜನರು ಸಂಪರ್ಕಿಸಿ ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿ ಸಮಸ್ಯೆ ಪರಿಹಾರಕ್ಕೆ ಯತ್ನಿಸಬೇಕು ಎಂದು ಸೂಚಿಸಿದರು.<br /> <br /> <strong>ಭರವಸೆ: </strong>ಸಭೆಯಲ್ಲಿ ಜಿಲ್ಲೆಯ ಶಾಸಕರು ಹೊಸ ಕೊಳವೆಬಾವಿ ಅಗತ್ಯ ಒತ್ತಿ ಹೇಳಿದರು. ಆ ಹಿನ್ನೆಲೆಯಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಮನೋಜ್ಕುಮಾರ್ ಮೀನಾ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.<br /> <br /> ಎರಡು ತಿಂಗಳು ಎಲ್ಲ ಅಧಿಕಾರಿಗಳೂ ಚುರುಕಾಗಿರಬೇಕು. ಮೇವು ಪೂರೈಸಲು ಕ್ರಮ ಕೈಗೊಳ್ಳಬೇಕು. ಪಂಚಾಯಿತಿ ಮಟ್ಟದಲ್ಲಿ ಬಾಕಿ ಇರುವ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಹಣವನ್ನು ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ ಎಂದು ಮೀನಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು: </strong>ಜಿಲ್ಲೆಯಲ್ಲಿ ಬರಗಾಲ ತೀವ್ರವಾಗಿರುವ ಹಿನ್ನೆಲೆಯಲ್ಲಿ ಜನರ ಸಮಸ್ಯೆ ಪರಿಹರಿಸಲು ಗ್ರಾಮಮಟ್ಟದ ಅಧಿಕಾರಿಗಳು ಜನರಿಗೆ ಸದಾ ಲಭ್ಯವಿರಬೇಕು ಎಂದು ಸಚಿವ ಎಸ್.ಸುರೇಶ್ಕುಮಾರ್ ಸೂಚನೆ ನೀಡಿದರು.<br /> <br /> ಬರ ಪರಿಸ್ಥಿತಿ ಅಧ್ಯಯನ ಮಾಡುವ ಸಲುವಾಗಿ ಜಿಲ್ಲೆಗೆ ಸಚಿವರ ತಂಡದೊಡನೆ ಮಂಗಳವಾರ ಭೇಟಿ ನೀಡಿದ ಅವರು ಬೆಳಿಗ್ಗೆಯಿಂದ ಸಂಜೆವರೆಗೂ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಬಳಿಕ ಮಾಲೂರು ತಾಲ್ಲೂಕಿನ ಕಡತ್ತೂರಿನಲ್ಲಿ ರಾತ್ರಿ 7ರ ವೇಳೆಗೆ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.<br /> <br /> ಹಳ್ಳಿಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವೆಡೆ ಮೇವು ಪೂರೈಕೆಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಯಾವ ಗ್ರಾಮಕ್ಕೂ ವಿಳಂಬ ಮಾಡಬಾರದು. ಜನರು ಸಂಪರ್ಕಿಸಿ ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿ ಸಮಸ್ಯೆ ಪರಿಹಾರಕ್ಕೆ ಯತ್ನಿಸಬೇಕು ಎಂದು ಸೂಚಿಸಿದರು.<br /> <br /> <strong>ಭರವಸೆ: </strong>ಸಭೆಯಲ್ಲಿ ಜಿಲ್ಲೆಯ ಶಾಸಕರು ಹೊಸ ಕೊಳವೆಬಾವಿ ಅಗತ್ಯ ಒತ್ತಿ ಹೇಳಿದರು. ಆ ಹಿನ್ನೆಲೆಯಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಮನೋಜ್ಕುಮಾರ್ ಮೀನಾ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.<br /> <br /> ಎರಡು ತಿಂಗಳು ಎಲ್ಲ ಅಧಿಕಾರಿಗಳೂ ಚುರುಕಾಗಿರಬೇಕು. ಮೇವು ಪೂರೈಸಲು ಕ್ರಮ ಕೈಗೊಳ್ಳಬೇಕು. ಪಂಚಾಯಿತಿ ಮಟ್ಟದಲ್ಲಿ ಬಾಕಿ ಇರುವ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಹಣವನ್ನು ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ ಎಂದು ಮೀನಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>