<p><strong>ಬಂಗಾರಪೇಟೆ:</strong> ತಾಲ್ಲೂಕಿನ ಜನತೆಗೆ ಶುದ್ಧ ನೀರು ಒದಗಿಸುವ ಹಿನ್ನೆಲೆಯಲ್ಲಿ ತಾಲ್ಲೂಕಿನ ವಿವಿಧೆಡೆ ನೀರು ಶುದ್ಧೀಕರಣ ಘಟಕಗಳನ್ನು ತೆರೆಯಲಾಗುವುದು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಇಲ್ಲಿ ಹೇಳಿದರು.<br /> <br /> ಪಟ್ಟಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಮಾತನಾಡಿ, ಏಳು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಅನುದಾನ ಮಂಜೂರು ಮಾಡಿದೆ. ತೀರ ಅಗತ್ಯ ಇರುವ ಕಡೆ ಘಟಕಗಳನ್ನು ಅಳವಡಿಸಲಾಗುವುದು. ನಂತರ ಎ್ಲ್ಲಲ ಪಂಚಾಯಿತಿಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು.<br /> <br /> ತಾಲ್ಲೂಕಿನ ಮಾರ್ಕಂಡಯ್ಯ ಜಲಾಶಯ ಅಭಿವೃದ್ಧಿಗೆ 1.10 ಕೋಟಿ ಬಿಡುಗಡೆಯಾಗಿದೆ. ವಾರದಲ್ಲಿ ಕಾಮಗಾರಿ ಆರಂಭಿಸಲಾಗುವುದು.<br /> <br /> ಜಿಲ್ಲೆಯ ಹೊಳಲಿ, ಬೇತಮಂಗಲ ಕೆರೆಗಳನ್ನು ಕುಡಿಯುವ ನೀರಿಗಾಗಿ ಮೀಸಲಿಡಲಾಗಿದ್ದು, ಅವುಗಳ ಅಭಿವೃದ್ಧಿಗೆ ರೂ 4.30 ಕೋಟಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗಿದೆ.<br /> <br /> ವರ್ತೂರು ಕೆರೆ ಕೋಡಿ ನೀರನ್ನು ತಾಲ್ಲೂಕಿನ ಮಾರ್ಕಂಡಯ್ಯ, ಕಾಮಸಮುದ್ರ ಇತರೆ ಕೆರೆಗಳಿಗೆ ಹರಿಸಲಾಗುವುದು. ಆ ಮೂಲಕ ಅಂತರ್ಜಲ ವೃದ್ಧಿಗೆ ಮುಂದಿನ ಬಜೆಟ್ನಲ್ಲಿ ಹಣ ಮೀಸಲಿಡುವಂತೆ ಒತ್ತಾಯಿಸಲಾಗಿದೆ. ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಅವರು ತಿಳಿಸಿದರು.<br /> <br /> ಯರಗೋಳು ಜಲಾಶಯದಿಂದ ಭೂಮಿ ಕಳೆದುಕೊಳ್ಳುವವರಿಗೆ 10 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗಿದ್ದು, ಅಣೆಕಟ್ಟು ಕಟ್ಟಲು ಇರುವ ತೊಡಕುಗಳನ್ನು ನಿವಾರಿಸಿ 20 ದಿನದಲ್ಲಿ ಕಾಮಗಾರಿ ಆರಂಭಿಸಲಾಗುವುದು.<br /> <br /> ಪಟ್ಟಣದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರೂ.35 ಕೋಟಿ ಪ್ರಸ್ತಾವನೆ ಸರ್ಕಾರಕ್ಕೆ ಕಳುಹಿಸಲಾಗಿದೆ. ಮಿನಿ ವಿಧಾನಸೌದ ಕಾಮಗಾರಿ ಕೊನೆ ಹಂತದಲ್ಲಿದ್ದು, 1.75 ಕೋಟಿ ವೆಚ್ಚದಲ್ಲಿ ಸುತ್ತುಗೋಡೆ ನಿರ್ಮಿಸಿ ಸೆಪ್ಟಂಬರ್ ಅಂತ್ಯದೊಳಗೆ ಸಾರ್ವಜನಿಕರ ಸೇವೆಗೆ ಅರ್ಪಿಸಲಾಗುವುದು ಎಂದು ತಿಳಿಸಿದರು.<br /> <br /> ರಸ್ತೆ ಅಭಿವೃದ್ಧಿಗೆ 12 ಕೋಟಿ ಮಂಜೂರಾಗಿದ್ದು ನಾಲ್ಕು ದಿನದಲ್ಲಿ ಕಾಮಗಾರಿ ಶುರುವಾಗಲಿದೆ. ಕದರಿನೆತ್ತ ರಸ್ತೆ, ಮೂತನೂರಿನಿಂದ ತಮಿಳು ನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಿಂದ ಕಾಮಗಾರಿ ಆರಂಭಿಸಲಾಗುವುದು. ವಸತಿ ಯೋಜನೆಯಡಿ ಎಂಟು ಸಾವಿರ ಮನೆ ನೀಡಲು ಪ್ರಯತ್ನ ನಡೆಸಲಾಗಿದೆ ಎಂದರು. <br /> <br /> ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅ.ಮು.ಲಕ್ಷ್ಮಿನಾರಾಯಣ, ನಾರಾಯಣರೆಡ್ಡಿ, ಮುಖಂಡ ರಾಧಾಕೃಷ್ಣ ರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷರಾದ ಶಂಶುದ್ದೀನ್ ಬಾಬು, ಕೆ.ಚಂದ್ರಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ತಾಲ್ಲೂಕಿನ ಜನತೆಗೆ ಶುದ್ಧ ನೀರು ಒದಗಿಸುವ ಹಿನ್ನೆಲೆಯಲ್ಲಿ ತಾಲ್ಲೂಕಿನ ವಿವಿಧೆಡೆ ನೀರು ಶುದ್ಧೀಕರಣ ಘಟಕಗಳನ್ನು ತೆರೆಯಲಾಗುವುದು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಇಲ್ಲಿ ಹೇಳಿದರು.<br /> <br /> ಪಟ್ಟಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಮಾತನಾಡಿ, ಏಳು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಅನುದಾನ ಮಂಜೂರು ಮಾಡಿದೆ. ತೀರ ಅಗತ್ಯ ಇರುವ ಕಡೆ ಘಟಕಗಳನ್ನು ಅಳವಡಿಸಲಾಗುವುದು. ನಂತರ ಎ್ಲ್ಲಲ ಪಂಚಾಯಿತಿಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದರು.<br /> <br /> ತಾಲ್ಲೂಕಿನ ಮಾರ್ಕಂಡಯ್ಯ ಜಲಾಶಯ ಅಭಿವೃದ್ಧಿಗೆ 1.10 ಕೋಟಿ ಬಿಡುಗಡೆಯಾಗಿದೆ. ವಾರದಲ್ಲಿ ಕಾಮಗಾರಿ ಆರಂಭಿಸಲಾಗುವುದು.<br /> <br /> ಜಿಲ್ಲೆಯ ಹೊಳಲಿ, ಬೇತಮಂಗಲ ಕೆರೆಗಳನ್ನು ಕುಡಿಯುವ ನೀರಿಗಾಗಿ ಮೀಸಲಿಡಲಾಗಿದ್ದು, ಅವುಗಳ ಅಭಿವೃದ್ಧಿಗೆ ರೂ 4.30 ಕೋಟಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗಿದೆ.<br /> <br /> ವರ್ತೂರು ಕೆರೆ ಕೋಡಿ ನೀರನ್ನು ತಾಲ್ಲೂಕಿನ ಮಾರ್ಕಂಡಯ್ಯ, ಕಾಮಸಮುದ್ರ ಇತರೆ ಕೆರೆಗಳಿಗೆ ಹರಿಸಲಾಗುವುದು. ಆ ಮೂಲಕ ಅಂತರ್ಜಲ ವೃದ್ಧಿಗೆ ಮುಂದಿನ ಬಜೆಟ್ನಲ್ಲಿ ಹಣ ಮೀಸಲಿಡುವಂತೆ ಒತ್ತಾಯಿಸಲಾಗಿದೆ. ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಅವರು ತಿಳಿಸಿದರು.<br /> <br /> ಯರಗೋಳು ಜಲಾಶಯದಿಂದ ಭೂಮಿ ಕಳೆದುಕೊಳ್ಳುವವರಿಗೆ 10 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗಿದ್ದು, ಅಣೆಕಟ್ಟು ಕಟ್ಟಲು ಇರುವ ತೊಡಕುಗಳನ್ನು ನಿವಾರಿಸಿ 20 ದಿನದಲ್ಲಿ ಕಾಮಗಾರಿ ಆರಂಭಿಸಲಾಗುವುದು.<br /> <br /> ಪಟ್ಟಣದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರೂ.35 ಕೋಟಿ ಪ್ರಸ್ತಾವನೆ ಸರ್ಕಾರಕ್ಕೆ ಕಳುಹಿಸಲಾಗಿದೆ. ಮಿನಿ ವಿಧಾನಸೌದ ಕಾಮಗಾರಿ ಕೊನೆ ಹಂತದಲ್ಲಿದ್ದು, 1.75 ಕೋಟಿ ವೆಚ್ಚದಲ್ಲಿ ಸುತ್ತುಗೋಡೆ ನಿರ್ಮಿಸಿ ಸೆಪ್ಟಂಬರ್ ಅಂತ್ಯದೊಳಗೆ ಸಾರ್ವಜನಿಕರ ಸೇವೆಗೆ ಅರ್ಪಿಸಲಾಗುವುದು ಎಂದು ತಿಳಿಸಿದರು.<br /> <br /> ರಸ್ತೆ ಅಭಿವೃದ್ಧಿಗೆ 12 ಕೋಟಿ ಮಂಜೂರಾಗಿದ್ದು ನಾಲ್ಕು ದಿನದಲ್ಲಿ ಕಾಮಗಾರಿ ಶುರುವಾಗಲಿದೆ. ಕದರಿನೆತ್ತ ರಸ್ತೆ, ಮೂತನೂರಿನಿಂದ ತಮಿಳು ನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಿಂದ ಕಾಮಗಾರಿ ಆರಂಭಿಸಲಾಗುವುದು. ವಸತಿ ಯೋಜನೆಯಡಿ ಎಂಟು ಸಾವಿರ ಮನೆ ನೀಡಲು ಪ್ರಯತ್ನ ನಡೆಸಲಾಗಿದೆ ಎಂದರು. <br /> <br /> ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅ.ಮು.ಲಕ್ಷ್ಮಿನಾರಾಯಣ, ನಾರಾಯಣರೆಡ್ಡಿ, ಮುಖಂಡ ರಾಧಾಕೃಷ್ಣ ರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷರಾದ ಶಂಶುದ್ದೀನ್ ಬಾಬು, ಕೆ.ಚಂದ್ರಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>