<p><strong>ಬಂಗಾರಪೇಟೆ:</strong> ಮರಗಿಡ ಬೆಳೆಸಿ, ಪರಿಸರ ಉಳಿಸಿ, ಸ್ವಚ್ಛತೆ ಕಾಪಾಡಿ ಉತ್ತಮ ಆರೋಗ್ಯ ಹೊಂದಿರಿ...<br /> ಇಂಥ ಹಲವು ಘೋಷಣೆ ಫಲಕಗಳನ್ನು ಹೊತ್ತ ಜಾಗೃತಿ ಮೆರವಣಿಗೆ ಪಟ್ಟಣದಲ್ಲಿ ಶುಕ್ರವಾರ ಸಾರ್ವಜನಿಕರ ಗಮನ ಸೆಳೆಯಿತು. ಸ್ವಚ್ಛತೆ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ಬಗ್ಗೆ ಫಲಕಗಳನ್ನು ಪ್ರದರ್ಶಿಸಿದರು.<br /> <br /> ಪಟ್ಟಣದ ಗೌತಮ್ ನಗರದ ವಸತಿ ಶಾಲೆಯಿಂದ ಪ್ರಾರಂಭವಾದ ಮೆರವಣಿಗೆ ನಂದಿ ಮೆಡಿಕಲ್ಸ್, ಬಜಾರ್ ರಸ್ತೆ ಮೂಲಕ ಬಸ್ ನಿಲ್ದಾಣಕ್ಕೆ ತಲುಪಿತು. ನಂತರ ಪರಿಸರ ಸಂರಕ್ಷಣೆ ಕುರಿತು ಪುರಸಭೆ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಕಚೇರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. <br /> <br /> ಆತ್ಮ ವಿಶ್ವಾಸ ವೇದಿಕೆ, ಗೌತಮ್ ನಗರದ ವಸತಿ ಶಾಲೆ ಹಾಗೂ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳ ವತಿಯಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು. <br /> <br /> ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎಂ.ಎನ್.ಭಾರದ್ವಾಜ್, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲ ಸುಮಾರಾಣಿ, ಶಿಕ್ಷಕ ಮುದುಗುಳಿ ಕುಮಾರ್, ವಾರ್ಡನ್ ವರಲಕ್ಷ್ಮಮ್ಮ, ರಾಮಕೃಷ್ಣಪ್ಪ, ದೈಹಿಕ ಶಿಕ್ಷಣ ಶಿಕ್ಷಕ ಮರ್ದಾನ ಅಲಿ ಬಳಿಗಾರ, ಕಂಪ್ಯೂಟರ್ ತರಬೇತಿ ಶಿಕ್ಷಕ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಮರಗಿಡ ಬೆಳೆಸಿ, ಪರಿಸರ ಉಳಿಸಿ, ಸ್ವಚ್ಛತೆ ಕಾಪಾಡಿ ಉತ್ತಮ ಆರೋಗ್ಯ ಹೊಂದಿರಿ...<br /> ಇಂಥ ಹಲವು ಘೋಷಣೆ ಫಲಕಗಳನ್ನು ಹೊತ್ತ ಜಾಗೃತಿ ಮೆರವಣಿಗೆ ಪಟ್ಟಣದಲ್ಲಿ ಶುಕ್ರವಾರ ಸಾರ್ವಜನಿಕರ ಗಮನ ಸೆಳೆಯಿತು. ಸ್ವಚ್ಛತೆ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ಬಗ್ಗೆ ಫಲಕಗಳನ್ನು ಪ್ರದರ್ಶಿಸಿದರು.<br /> <br /> ಪಟ್ಟಣದ ಗೌತಮ್ ನಗರದ ವಸತಿ ಶಾಲೆಯಿಂದ ಪ್ರಾರಂಭವಾದ ಮೆರವಣಿಗೆ ನಂದಿ ಮೆಡಿಕಲ್ಸ್, ಬಜಾರ್ ರಸ್ತೆ ಮೂಲಕ ಬಸ್ ನಿಲ್ದಾಣಕ್ಕೆ ತಲುಪಿತು. ನಂತರ ಪರಿಸರ ಸಂರಕ್ಷಣೆ ಕುರಿತು ಪುರಸಭೆ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಕಚೇರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. <br /> <br /> ಆತ್ಮ ವಿಶ್ವಾಸ ವೇದಿಕೆ, ಗೌತಮ್ ನಗರದ ವಸತಿ ಶಾಲೆ ಹಾಗೂ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳ ವತಿಯಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು. <br /> <br /> ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎಂ.ಎನ್.ಭಾರದ್ವಾಜ್, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲ ಸುಮಾರಾಣಿ, ಶಿಕ್ಷಕ ಮುದುಗುಳಿ ಕುಮಾರ್, ವಾರ್ಡನ್ ವರಲಕ್ಷ್ಮಮ್ಮ, ರಾಮಕೃಷ್ಣಪ್ಪ, ದೈಹಿಕ ಶಿಕ್ಷಣ ಶಿಕ್ಷಕ ಮರ್ದಾನ ಅಲಿ ಬಳಿಗಾರ, ಕಂಪ್ಯೂಟರ್ ತರಬೇತಿ ಶಿಕ್ಷಕ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>