<p><strong>ಕೋಲಾರ:</strong> ‘ಕವಿ ಡಿ.ವಿ.ಗುಂಡಪ್ಪನವರ ರಚನೆಯ ಮಂಕು ತಿಮ್ಮನ ಕಗ್ಗವು ಆಧುನಿಕ ಭಗವದ್ಗೀತೆ’ ಎಂದು ಸಾಹಿತಿ ವಿಜಯ ರಾಘವನ್ ಬಣ್ಣಿಸಿದರು.</p>.<p>ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಿವಿಜಿ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ‘ಕನ್ನಡ ಸಾಹಿತ್ಯಕ್ಕೆ ಅನನ್ಯ ಕೊಡುಗೆ ನೀಡಿರುವ ಡಿವಿಜಿಯವರು ಆಧುನಿಕ ಸರ್ವಜ್ಞ’ ಎಂದು ಅಭಿಪ್ರಾಯಪಟ್ಟರು.</p>.<p>‘ಕವಿ, ಪತ್ರಕರ್ತ ಹಾಗೂ ಸಾಹಿತಿಯಾಗಿ ಹೆಸರು ಮಾಡಿದ ಡಿವಿಜಿಯವರು ಕೋಲಾರ ಜಿಲ್ಲೆಯವರು ಎಂಬುದು ಹೆಮ್ಮೆಯ ಸಂಗತಿ. ಬದುಕು ಕ್ಷಣಿಕ, ಬದುಕಿದಷ್ಟು ದಿನ ಸಾರ್ಥಕ ಸೇವೆಯ ಮೂಲಕ ನೋವು ಮರೆತು ಬದುಕು ಕಟ್ಟುವುದು ಒಳಿತು ಎಂಬ ಅವರ ಬರಹದ ತಾತ್ಪರ್ಯ ಅದ್ಭುತ’ ಎಂದು ಹೇಳಿದರು.</p>.<p>‘ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಡಿವಿಜಿ ಜನ್ಮ ದಿನ ಆಚರಿಸಬೇಕು. ಡಿವಿಜಿಯವರ ತತ್ವಾದರ್ಶವು ಜೀವನಕ್ಕೆ ದಾರಿ ದೀಪ. ಅವರ ಸಾಹಿತ್ಯದ ಒಂದೊಂದು ಸಾಲು ನುಡಿಮುತ್ತು’ ಎಂದು ಸ್ಮರಿಸಿದರು.</p>.<p>ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಪಿ.ನಾರಾಯಣಪ್ಪ, ಸಾಹಿತಿಗಳಾದ ಟಿ.ನಾರಾಯಣಸ್ವಾಮಿ, ಕೃಷ್ಣಮೂರ್ತಿ, ಸರ್ವ ಶಿಕ್ಷಣ ಅಭಿಯಾನ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸವಿತಾ, ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಕವಿ ಡಿ.ವಿ.ಗುಂಡಪ್ಪನವರ ರಚನೆಯ ಮಂಕು ತಿಮ್ಮನ ಕಗ್ಗವು ಆಧುನಿಕ ಭಗವದ್ಗೀತೆ’ ಎಂದು ಸಾಹಿತಿ ವಿಜಯ ರಾಘವನ್ ಬಣ್ಣಿಸಿದರು.</p>.<p>ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಿವಿಜಿ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ‘ಕನ್ನಡ ಸಾಹಿತ್ಯಕ್ಕೆ ಅನನ್ಯ ಕೊಡುಗೆ ನೀಡಿರುವ ಡಿವಿಜಿಯವರು ಆಧುನಿಕ ಸರ್ವಜ್ಞ’ ಎಂದು ಅಭಿಪ್ರಾಯಪಟ್ಟರು.</p>.<p>‘ಕವಿ, ಪತ್ರಕರ್ತ ಹಾಗೂ ಸಾಹಿತಿಯಾಗಿ ಹೆಸರು ಮಾಡಿದ ಡಿವಿಜಿಯವರು ಕೋಲಾರ ಜಿಲ್ಲೆಯವರು ಎಂಬುದು ಹೆಮ್ಮೆಯ ಸಂಗತಿ. ಬದುಕು ಕ್ಷಣಿಕ, ಬದುಕಿದಷ್ಟು ದಿನ ಸಾರ್ಥಕ ಸೇವೆಯ ಮೂಲಕ ನೋವು ಮರೆತು ಬದುಕು ಕಟ್ಟುವುದು ಒಳಿತು ಎಂಬ ಅವರ ಬರಹದ ತಾತ್ಪರ್ಯ ಅದ್ಭುತ’ ಎಂದು ಹೇಳಿದರು.</p>.<p>‘ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಡಿವಿಜಿ ಜನ್ಮ ದಿನ ಆಚರಿಸಬೇಕು. ಡಿವಿಜಿಯವರ ತತ್ವಾದರ್ಶವು ಜೀವನಕ್ಕೆ ದಾರಿ ದೀಪ. ಅವರ ಸಾಹಿತ್ಯದ ಒಂದೊಂದು ಸಾಲು ನುಡಿಮುತ್ತು’ ಎಂದು ಸ್ಮರಿಸಿದರು.</p>.<p>ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಪಿ.ನಾರಾಯಣಪ್ಪ, ಸಾಹಿತಿಗಳಾದ ಟಿ.ನಾರಾಯಣಸ್ವಾಮಿ, ಕೃಷ್ಣಮೂರ್ತಿ, ಸರ್ವ ಶಿಕ್ಷಣ ಅಭಿಯಾನ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸವಿತಾ, ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>