<p><strong>ಕೋಲಾರ:</strong> ಮನೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಮಾಲೂರು ತಾಲ್ಲೂಕಿನ ತೃಣಸಿ ಗ್ರಾಮ ಪಂಚಾ ಯಿತಿಯ ಪಿಚ್ಚ ಗುಂಟರ್ಲಹಳ್ಳಿಯ ಪರಿಶಿಷ್ಟ ಸಮುದಾಯದ ಜನತೆ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಧರಣಿ ನಡೆಸಿದರು.<br /> <br /> `ಹಳ್ಳಿಯಲ್ಲಿ ಸುಮಾರು 60-70 ಮನೆಗಳಿವೆ. 30-35 ಮಂದಿಗೆ ಮನೆ ಗಳಿಲ್ಲ. ಗ್ರಾಮ ಪಂಚಾಯಿತಿಯಲ್ಲಿ ನಿರ್ಣಯ ಕೈಗೊಂಡ ಬಳಿಕ ಅವರು ವಾಸವಿದ್ದ ಸರ್ಕಾರಿ ಜಮೀನಿನ ಗುಡಿಸಲುಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟರು. ಈಗ ನೆಲಿಸಬೇಕಾದ ಪರಿಸ್ಥಿತಿ ಇದೆ ಎಂದು ದೂರಿದರು.<br /> <br /> ಆದರೆ ಪೊಲೀಸರು ಮತ್ತು ಕಂದಾಯ ಅಧಿಕಾರಿಗಳು ನಮಗೆ ರಕ್ಷಣೆ ನೀಡುವ ಬದಲು ಮುನಿರಾಜು ಮತ್ತಿತರರಿಗೆ ರಕ್ಷಣೆ ನೀಡುತ್ತಿದ್ದಾರೆ. ಹಕ್ಕುಪತ್ರ ಇಲ್ಲದಿರುವುದರಿಂದಲೇ ನಮಗೆ ತೊಂದರೆಯಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು. <br /> <br /> ಡಿ.ವಿ.ಕೃಷ್ಣಮೂರ್ತಿ, ಗ್ರಾಪಂ ಸದಸ್ಯರಾದ ವೆಂಕಟರಮಣಪ್ಪ, ಮುರಳಿ, ತಾಪಂ ಸದಸ್ಯ ಚಂದ್ರಪ್ಪ, ಖಲೀಲ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಮನೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಮಾಲೂರು ತಾಲ್ಲೂಕಿನ ತೃಣಸಿ ಗ್ರಾಮ ಪಂಚಾ ಯಿತಿಯ ಪಿಚ್ಚ ಗುಂಟರ್ಲಹಳ್ಳಿಯ ಪರಿಶಿಷ್ಟ ಸಮುದಾಯದ ಜನತೆ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಧರಣಿ ನಡೆಸಿದರು.<br /> <br /> `ಹಳ್ಳಿಯಲ್ಲಿ ಸುಮಾರು 60-70 ಮನೆಗಳಿವೆ. 30-35 ಮಂದಿಗೆ ಮನೆ ಗಳಿಲ್ಲ. ಗ್ರಾಮ ಪಂಚಾಯಿತಿಯಲ್ಲಿ ನಿರ್ಣಯ ಕೈಗೊಂಡ ಬಳಿಕ ಅವರು ವಾಸವಿದ್ದ ಸರ್ಕಾರಿ ಜಮೀನಿನ ಗುಡಿಸಲುಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟರು. ಈಗ ನೆಲಿಸಬೇಕಾದ ಪರಿಸ್ಥಿತಿ ಇದೆ ಎಂದು ದೂರಿದರು.<br /> <br /> ಆದರೆ ಪೊಲೀಸರು ಮತ್ತು ಕಂದಾಯ ಅಧಿಕಾರಿಗಳು ನಮಗೆ ರಕ್ಷಣೆ ನೀಡುವ ಬದಲು ಮುನಿರಾಜು ಮತ್ತಿತರರಿಗೆ ರಕ್ಷಣೆ ನೀಡುತ್ತಿದ್ದಾರೆ. ಹಕ್ಕುಪತ್ರ ಇಲ್ಲದಿರುವುದರಿಂದಲೇ ನಮಗೆ ತೊಂದರೆಯಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು. <br /> <br /> ಡಿ.ವಿ.ಕೃಷ್ಣಮೂರ್ತಿ, ಗ್ರಾಪಂ ಸದಸ್ಯರಾದ ವೆಂಕಟರಮಣಪ್ಪ, ಮುರಳಿ, ತಾಪಂ ಸದಸ್ಯ ಚಂದ್ರಪ್ಪ, ಖಲೀಲ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>