ಕೆಜಿಎಫ್: ನಗರದ ಸುತ್ತಮುತ್ತ ಗುರುವಾರ ಬಿದ್ದ ಭಾರಿ ಮಳೆಯಿಂದಾಗಿ ಅನೇಕ ಕೆರೆಗಳು ಕೋಡಿ ಹೋಗಿದ್ದು, ಬೇತಮಂಗಲ ಜಲಾಶಯ ಭರ್ತಿಯಾಗುವ ಎಲ್ಲ ಸೂಚನೆಗಳು ಕಾಣುತ್ತಿವೆ. ಕೆಜಿಎಫ್ ನಗರ, ಬೆಮಲ್ ಮತ್ತು ಬೇತಮಂಗಲಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಬೇತಮಂಗಲ ಜಲಾಶಯ ಬತ್ತಿ ಹೋಗಿದ್ದರಿಂದ ಇತ್ತೀಚಿನ ವರ್ಷಗಳಲ್ಲಿ ನಗರದಲ್ಲಿ ನೀರಿನ ಹಾಹಾಕಾರ ಉಂಟಾಗಿತ್ತು. ಸಿಹಿ ನೀರಿಗೆ ಹೆಸರಾದ ಜಲಾಶಯದ ನೀರು ನಗರಕ್ಕೆ ಮುಂದಿನ ಇಪ್ಪತ್ತು ದಿನಗಳಲ್ಲಿ ಸಿಗಲಿದೆ.