<p><strong>ಮಾಲೂರು: </strong>ಮಳೆ ನೀರು ಸಂಗ್ರಹಿಸಿರುವುದರಿಂದ ನಮ್ಮ ಸುತ್ತಲಿನ ಉಷ್ಣಾಂಶವನ್ನು ಕಡಿಮೆ ಮಾಡಬಹುದು ಎಂದು ಜಿಲ್ಲಾ ಅರಣ್ಯಾಧಿಕಾರಿ ಮುನೇಗೌಡ ಸಲಹೆ ನೀಡಿದರು.<br /> <br /> ಪಟ್ಟಣದಲ್ಲಿ ಬುಧವಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಅರಣ್ಯ ಹಾಗೂ ವಿಶ್ವ ಜಲ ದಿನ ಅಂಗವಾಗಿ `ಮಳೆ ನೀರು ಕೊಯ್ಲು~ ಕುರಿತು ಕೈಗಾರಿಕಾ ಉದ್ದಿಮೆದಾರರಿಗೆ ತರಬೇತಿ ಕಾರ್ಯಾ ಗಾರದಲ್ಲಿ ಮಾತನಾಡಿದರು.<br /> <br /> ಗ್ರಾಮೀಣ ಪ್ರದೇಶದ್ಲ್ಲಲೂ ಬಿಸಿಲಿನ ಬೆಗೆ ಹೆಚ್ಚಾಗುತ್ತಿದೆ. ಅರಣ್ಯ ನಾಶ ಹಾಗೂ ಕಾರ್ಖಾನೆಗಳಿಂದ ಬಿಡುಗಡೆಯಾಗುವ ಮಾಲಿನ್ಯದಿಂದ ಪರಿಸರ ಸಂಪೂರ್ಣವಾಗಿ ಹದಗೆಡಲು ಕಾರಣವಾಗಿದೆ ಎಂದು ವಿವರಿಸಿದರು.<br /> <br /> ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಅಧಿಕಾರಿ ಬಿ.ಎನ್. ರಮೇಶ್ ಕುಮಾರ್ ಮಾತನಾಡಿ, ಬೇಸಿಗೆಯ ಅವಧಿಯಲ್ಲಿ ನೀರನ್ನು ಮಿತವಾಗಿ ಬಳಸಬೇಕು. ಪ್ರತಿಯೊಂದು ಕುಟುಂಬ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಾಗ ಮಾತ್ರ ನೀರಿನ ಸಮಸ್ಯೆ ಬಗೆ ಹರಿಯಲು ಸಾಧ್ಯ ಎಂದು ಹೇಳಿದರು.<br /> <br /> ಮಳೆ ನೀರು ಸಂಗ್ರಹ ತಜ್ಞ ಅಯ್ಯಪ್ಪ ಮಸಗಿ, ಜಿಲ್ಲಾ ಪರಿಸರ ಅಧಿಕಾರಿ ವಿಜಿ ಕಾರ್ತೀಕೇಯನ್, ಕ್ಲೋರೈಡ್ ಅಲಾಯ್ಸನ ಸಿಇಒ ಸರೇಂದ್ರ ಜೋಸೆಫ್, ಕರ್ನಾಟಕ ಕೈಗಾರಿಕ ಅಭಿವೃದ್ಧಿ ಮಂಡಳಿ ಅಧಿಕಾರಿ ರಾಮಕೃಷ್ಣ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು: </strong>ಮಳೆ ನೀರು ಸಂಗ್ರಹಿಸಿರುವುದರಿಂದ ನಮ್ಮ ಸುತ್ತಲಿನ ಉಷ್ಣಾಂಶವನ್ನು ಕಡಿಮೆ ಮಾಡಬಹುದು ಎಂದು ಜಿಲ್ಲಾ ಅರಣ್ಯಾಧಿಕಾರಿ ಮುನೇಗೌಡ ಸಲಹೆ ನೀಡಿದರು.<br /> <br /> ಪಟ್ಟಣದಲ್ಲಿ ಬುಧವಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಅರಣ್ಯ ಹಾಗೂ ವಿಶ್ವ ಜಲ ದಿನ ಅಂಗವಾಗಿ `ಮಳೆ ನೀರು ಕೊಯ್ಲು~ ಕುರಿತು ಕೈಗಾರಿಕಾ ಉದ್ದಿಮೆದಾರರಿಗೆ ತರಬೇತಿ ಕಾರ್ಯಾ ಗಾರದಲ್ಲಿ ಮಾತನಾಡಿದರು.<br /> <br /> ಗ್ರಾಮೀಣ ಪ್ರದೇಶದ್ಲ್ಲಲೂ ಬಿಸಿಲಿನ ಬೆಗೆ ಹೆಚ್ಚಾಗುತ್ತಿದೆ. ಅರಣ್ಯ ನಾಶ ಹಾಗೂ ಕಾರ್ಖಾನೆಗಳಿಂದ ಬಿಡುಗಡೆಯಾಗುವ ಮಾಲಿನ್ಯದಿಂದ ಪರಿಸರ ಸಂಪೂರ್ಣವಾಗಿ ಹದಗೆಡಲು ಕಾರಣವಾಗಿದೆ ಎಂದು ವಿವರಿಸಿದರು.<br /> <br /> ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಅಧಿಕಾರಿ ಬಿ.ಎನ್. ರಮೇಶ್ ಕುಮಾರ್ ಮಾತನಾಡಿ, ಬೇಸಿಗೆಯ ಅವಧಿಯಲ್ಲಿ ನೀರನ್ನು ಮಿತವಾಗಿ ಬಳಸಬೇಕು. ಪ್ರತಿಯೊಂದು ಕುಟುಂಬ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಾಗ ಮಾತ್ರ ನೀರಿನ ಸಮಸ್ಯೆ ಬಗೆ ಹರಿಯಲು ಸಾಧ್ಯ ಎಂದು ಹೇಳಿದರು.<br /> <br /> ಮಳೆ ನೀರು ಸಂಗ್ರಹ ತಜ್ಞ ಅಯ್ಯಪ್ಪ ಮಸಗಿ, ಜಿಲ್ಲಾ ಪರಿಸರ ಅಧಿಕಾರಿ ವಿಜಿ ಕಾರ್ತೀಕೇಯನ್, ಕ್ಲೋರೈಡ್ ಅಲಾಯ್ಸನ ಸಿಇಒ ಸರೇಂದ್ರ ಜೋಸೆಫ್, ಕರ್ನಾಟಕ ಕೈಗಾರಿಕ ಅಭಿವೃದ್ಧಿ ಮಂಡಳಿ ಅಧಿಕಾರಿ ರಾಮಕೃಷ್ಣ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>