<p><strong>ಕೋಲಾರ:</strong> ‘ಶಾಸಕ ವರ್ತೂರು ಪ್ರಕಾಶ್ ದುರಾಡಳಿತದಿಂದ ಬೇಸತ್ತು ರಾಜಕೀಯ ಬದಲಾವಣೆ ಬಯಸಿರುವ ಕ್ಷೇತ್ರದ ಜನ ಜೆಡಿಯು ಅಭ್ಯರ್ಥಿ ಸುಧಾಕರ್ಗೌಡ ಅವರನ್ನು ಬೆಂಬಲಿಸಬೇಕು’ ಎಂದು ಕೋಚಿಮುಲ್ ನಿರ್ದೇಶಕ ಆರ್.ರಾಮಕೃಷ್ಣೇಗೌಡ ಮನವಿ ಮಾಡಿದರು.</p>.<p>ನಗರದ ರಹಮತ್ ನಗರದಲ್ಲಿ ಸುಧಾಕರ್ಗೌಡ ಪರ ಗುರುವಾರ ಪ್ರಚಾರ ನಡೆಸಿ ಮಾತನಾಡಿ, ‘ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ವರ್ತೂರು ಪ್ರಕಾಶ್ ನಗರ ಸೇರಿದಂತೆ ಗ್ರಾಮೀಣ ಪ್ರದೇಶಕ್ಕೆ ಮೂಲಸೌಕರ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.</p>.<p>‘ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಜನ ಟ್ಯಾಂಕರ್ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಸಮಸ್ಯೆ ಬಗೆಹರಿಸಲು ಶಾಸಕರಿಗೆ 10 ವರ್ಷದ ಅಧಿಕಾರಾವಧಿ ಸಾಕಾಗಿಲ್ಲ. ಈಗ ಚುನಾವಣೆ ಹೊಸ್ತಿಲಲ್ಲಿ ಅಭಿವೃದ್ಧಿಯ ಜಪ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ವರ್ತೂರು ಪ್ರಕಾಶ್ ಅವರಿಗಿಂತ ಮೊದಲು ಕ್ಷೇತ್ರದಿಂದ ಆಯ್ಕೆಯಾಗಿ ಸಚಿವರಾಗಿದ್ದ ಶ್ರೀನಿವಾಸಗೌಡ ಸಹ ಕ್ಷೇತ್ರಕ್ಕೆ ಯಾವುದೇ ಕೊಡುಗೆ ಕೊಟ್ಟಿಲ್ಲ. ಅವರು ಸಭೆ ಸಮಾರಂಭಗಳಲ್ಲಿ ವೇದಿಕೆ ಮೇಲೆ ನಿಂತು ಉದ್ದುದ್ದ ಭಾಷಣ ಮಾಡುವುದಕ್ಕಷ್ಟೇ ಸೀಮಿತರಾಗಿದ್ದಾರೆ. ಜನ ಅವರ ಭಾಷಣ ಕೇಳಿ ಮರುಳಾಗಬಾರದು’ ಎಂದರು.</p>.<p><strong>ಕಾಲ ಕೂಡಿ ಬಂದಿದೆ:</strong> ‘ಪಕ್ಷಕ್ಕೆ ಸೈದ್ಧಾಂತಿಕ ನೆಲೆಯಿದೆ. ಕ್ಷೇತ್ರದಲ್ಲಿ ಆಗಿರುವ ದೌರ್ಜನ್ಯ, ದಬ್ಬಾಳಿಕೆ ತಡೆಯಲು ಸಮರ್ಥ ಜನಪ್ರತಿನಿಧಿಯನ್ನು ಆಯ್ಕೆ ಮಾಡುವುದು ಮತದಾರರ ಜವಾಬ್ದಾರಿ. ಆ ಜವಾಬ್ದಾರಿಯ ನಿರ್ವಹಣೆಗೆ ಈಗ ಕಾಲ ಕೂಡಿ ಬಂದಿದೆ. ಜನರ ಯೋಚಿಸಿ ಮತ ಚಲಾಯಿಸಬೇಕು’ ಎಂದು ಜೆಡಿಯು ಜಿಲ್ಲಾ ಘಟಕದ ಅಧ್ಯಕ್ಷ ಶ್ರೀರಾಮರೆಡ್ಡಿ ಹೇಳಿದರು.</p>.<p>ತಾಲ್ಲೂಕಿನ ಮೂರಾಂಡಹಳ್ಳಿ, ಕಳ್ಳೀಪುರ, ಹಸಾಳ, ವಕ್ಕಲೇರಿ, ನಗರದ ವೀರಾಂಜನೇಯ ನಗರ, ರಹಮತ್ ನಗರದಲ್ಲಿ ಚುನಾವಣಾ ಪ್ರಚಾರ ನಡೆಯಿತು. ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಮು, ಎಪಿಎಂಸಿ ಮಾಜಿ ನಿರ್ದೇಶಕ<br /> ಈರಣ್ಣ, ಶಿವಕುಮಾರ್ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಶಾಸಕ ವರ್ತೂರು ಪ್ರಕಾಶ್ ದುರಾಡಳಿತದಿಂದ ಬೇಸತ್ತು ರಾಜಕೀಯ ಬದಲಾವಣೆ ಬಯಸಿರುವ ಕ್ಷೇತ್ರದ ಜನ ಜೆಡಿಯು ಅಭ್ಯರ್ಥಿ ಸುಧಾಕರ್ಗೌಡ ಅವರನ್ನು ಬೆಂಬಲಿಸಬೇಕು’ ಎಂದು ಕೋಚಿಮುಲ್ ನಿರ್ದೇಶಕ ಆರ್.ರಾಮಕೃಷ್ಣೇಗೌಡ ಮನವಿ ಮಾಡಿದರು.</p>.<p>ನಗರದ ರಹಮತ್ ನಗರದಲ್ಲಿ ಸುಧಾಕರ್ಗೌಡ ಪರ ಗುರುವಾರ ಪ್ರಚಾರ ನಡೆಸಿ ಮಾತನಾಡಿ, ‘ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ವರ್ತೂರು ಪ್ರಕಾಶ್ ನಗರ ಸೇರಿದಂತೆ ಗ್ರಾಮೀಣ ಪ್ರದೇಶಕ್ಕೆ ಮೂಲಸೌಕರ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.</p>.<p>‘ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಜನ ಟ್ಯಾಂಕರ್ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಸಮಸ್ಯೆ ಬಗೆಹರಿಸಲು ಶಾಸಕರಿಗೆ 10 ವರ್ಷದ ಅಧಿಕಾರಾವಧಿ ಸಾಕಾಗಿಲ್ಲ. ಈಗ ಚುನಾವಣೆ ಹೊಸ್ತಿಲಲ್ಲಿ ಅಭಿವೃದ್ಧಿಯ ಜಪ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ವರ್ತೂರು ಪ್ರಕಾಶ್ ಅವರಿಗಿಂತ ಮೊದಲು ಕ್ಷೇತ್ರದಿಂದ ಆಯ್ಕೆಯಾಗಿ ಸಚಿವರಾಗಿದ್ದ ಶ್ರೀನಿವಾಸಗೌಡ ಸಹ ಕ್ಷೇತ್ರಕ್ಕೆ ಯಾವುದೇ ಕೊಡುಗೆ ಕೊಟ್ಟಿಲ್ಲ. ಅವರು ಸಭೆ ಸಮಾರಂಭಗಳಲ್ಲಿ ವೇದಿಕೆ ಮೇಲೆ ನಿಂತು ಉದ್ದುದ್ದ ಭಾಷಣ ಮಾಡುವುದಕ್ಕಷ್ಟೇ ಸೀಮಿತರಾಗಿದ್ದಾರೆ. ಜನ ಅವರ ಭಾಷಣ ಕೇಳಿ ಮರುಳಾಗಬಾರದು’ ಎಂದರು.</p>.<p><strong>ಕಾಲ ಕೂಡಿ ಬಂದಿದೆ:</strong> ‘ಪಕ್ಷಕ್ಕೆ ಸೈದ್ಧಾಂತಿಕ ನೆಲೆಯಿದೆ. ಕ್ಷೇತ್ರದಲ್ಲಿ ಆಗಿರುವ ದೌರ್ಜನ್ಯ, ದಬ್ಬಾಳಿಕೆ ತಡೆಯಲು ಸಮರ್ಥ ಜನಪ್ರತಿನಿಧಿಯನ್ನು ಆಯ್ಕೆ ಮಾಡುವುದು ಮತದಾರರ ಜವಾಬ್ದಾರಿ. ಆ ಜವಾಬ್ದಾರಿಯ ನಿರ್ವಹಣೆಗೆ ಈಗ ಕಾಲ ಕೂಡಿ ಬಂದಿದೆ. ಜನರ ಯೋಚಿಸಿ ಮತ ಚಲಾಯಿಸಬೇಕು’ ಎಂದು ಜೆಡಿಯು ಜಿಲ್ಲಾ ಘಟಕದ ಅಧ್ಯಕ್ಷ ಶ್ರೀರಾಮರೆಡ್ಡಿ ಹೇಳಿದರು.</p>.<p>ತಾಲ್ಲೂಕಿನ ಮೂರಾಂಡಹಳ್ಳಿ, ಕಳ್ಳೀಪುರ, ಹಸಾಳ, ವಕ್ಕಲೇರಿ, ನಗರದ ವೀರಾಂಜನೇಯ ನಗರ, ರಹಮತ್ ನಗರದಲ್ಲಿ ಚುನಾವಣಾ ಪ್ರಚಾರ ನಡೆಯಿತು. ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಮು, ಎಪಿಎಂಸಿ ಮಾಜಿ ನಿರ್ದೇಶಕ<br /> ಈರಣ್ಣ, ಶಿವಕುಮಾರ್ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>