<p>ಕೆಜಿಎಫ್: ಬರದ ಬವಣೆಯಲ್ಲಿ ಜೀವನ ಸಾಗಿಸುತ್ತಿರುವ ರೈತರಿಗೆ ಬದುಕುವ ದಾರಿ ತೋರುವ ಕೆಲಸ ತಕ್ಷಣ ಆಗಬೇಕು ಎಂದು ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಜೆ.ಸಿ.ಬಯ್ಯಾರೆಡ್ಡಿ ಆಗ್ರಹಿಸಿದರು.</p>.<p>ಬೆಮಲ್ನಗರದಲ್ಲಿ ಸೋಮವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಂತ್ಯ ರೈತ ಸಂಘದ ಕಾರ್ಯಕರ್ತರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.<br /> <br /> ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಬೇಕು. ವ್ಯವಸಾಯಕ್ಕೆ ಉತ್ತಮ ವಾತಾವರಣವನ್ನು ನಿರ್ಮಿಸಿಕೊಡಬೇಕು. ಗ್ರಾಮಗಳಲ್ಲಿ ಬಡವರಿಗೆ ಮನೆ ನಿವೇಶನಗಳನ್ನು ಹಂಚಬೇಕು ಮತ್ತು ಬ್ಯಾಂಕ್ಗಳಲ್ಲಿ ಐವತ್ತು ಸಾವಿರ ರೂಪಾಯಿಗಳವರೆಗೂ ಸಾಲ ಸುಲಭವಾಗಿ ಸಿಗಬೇಕು ಎಂದು ಒತ್ತಾಯಿಸಿದರು.<br /> <br /> ಇದೇ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಸೌಕರ್ಯಕ್ಕೆ ಒತ್ತಾಯಿಸಿ ಸುಮಾರು ಹದಿನೈದು ನಿಮಿಷಗಳ ಕಾಲ ರಸ್ತೆ ತಡೆ ಕೂಡ ನಡೆಸಲಾಯಿತು.<br /> <br /> ದೊಡ್ಡೂರು ಕರಪನಹಳ್ಳಿ–ಕಾರಹಳ್ಳಿ– ಬಂಗಾರಪೇಟೆ ಮಾರ್ಗ, ಬೇತಮಂಗಲ–ಸುಂದರಪಾಳ್ಯ–ಮಹದೇವಪುರ ಮಾರ್ಗ, ಆಲಿಕಲ್ಲು ಮೂಲಕ ರಾಬರ್ಟಸನ್ಪೇಟೆ ಮಾರ್ಗದಲ್ಲಿ ಬಸ್ ಸಂಪರ್ಕ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಲಾಯಿತು. <br /> <br /> ಸಿಐಟಿಯು ಮುಖಂಡ ಅರ್ಜುನನ್, ಸಂಘಟನಾ ಕಾರ್ಯದರ್ಶಿ ಪಿ.ಶ್ರೀನಿವಾಸ್ , ಡಿವೈಎಫ್ಐ ಮುಖಂಡ ತಂಗರಾಜ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ಬರದ ಬವಣೆಯಲ್ಲಿ ಜೀವನ ಸಾಗಿಸುತ್ತಿರುವ ರೈತರಿಗೆ ಬದುಕುವ ದಾರಿ ತೋರುವ ಕೆಲಸ ತಕ್ಷಣ ಆಗಬೇಕು ಎಂದು ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಜೆ.ಸಿ.ಬಯ್ಯಾರೆಡ್ಡಿ ಆಗ್ರಹಿಸಿದರು.</p>.<p>ಬೆಮಲ್ನಗರದಲ್ಲಿ ಸೋಮವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಂತ್ಯ ರೈತ ಸಂಘದ ಕಾರ್ಯಕರ್ತರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.<br /> <br /> ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಬೇಕು. ವ್ಯವಸಾಯಕ್ಕೆ ಉತ್ತಮ ವಾತಾವರಣವನ್ನು ನಿರ್ಮಿಸಿಕೊಡಬೇಕು. ಗ್ರಾಮಗಳಲ್ಲಿ ಬಡವರಿಗೆ ಮನೆ ನಿವೇಶನಗಳನ್ನು ಹಂಚಬೇಕು ಮತ್ತು ಬ್ಯಾಂಕ್ಗಳಲ್ಲಿ ಐವತ್ತು ಸಾವಿರ ರೂಪಾಯಿಗಳವರೆಗೂ ಸಾಲ ಸುಲಭವಾಗಿ ಸಿಗಬೇಕು ಎಂದು ಒತ್ತಾಯಿಸಿದರು.<br /> <br /> ಇದೇ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಸೌಕರ್ಯಕ್ಕೆ ಒತ್ತಾಯಿಸಿ ಸುಮಾರು ಹದಿನೈದು ನಿಮಿಷಗಳ ಕಾಲ ರಸ್ತೆ ತಡೆ ಕೂಡ ನಡೆಸಲಾಯಿತು.<br /> <br /> ದೊಡ್ಡೂರು ಕರಪನಹಳ್ಳಿ–ಕಾರಹಳ್ಳಿ– ಬಂಗಾರಪೇಟೆ ಮಾರ್ಗ, ಬೇತಮಂಗಲ–ಸುಂದರಪಾಳ್ಯ–ಮಹದೇವಪುರ ಮಾರ್ಗ, ಆಲಿಕಲ್ಲು ಮೂಲಕ ರಾಬರ್ಟಸನ್ಪೇಟೆ ಮಾರ್ಗದಲ್ಲಿ ಬಸ್ ಸಂಪರ್ಕ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಲಾಯಿತು. <br /> <br /> ಸಿಐಟಿಯು ಮುಖಂಡ ಅರ್ಜುನನ್, ಸಂಘಟನಾ ಕಾರ್ಯದರ್ಶಿ ಪಿ.ಶ್ರೀನಿವಾಸ್ , ಡಿವೈಎಫ್ಐ ಮುಖಂಡ ತಂಗರಾಜ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>