ಒತ್ತುವರಿ ದೃಢಪಟ್ಟಿತ್ತು: ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ‘ವಾಲ್ಮೀಕಿ ಭವನಕ್ಕೆ ಮೀಸಲಿದ್ದ ಜಾಗ ಒತ್ತುವರಿಯಾಗಿರುವ ಸಂಗತಿಯನ್ನು ಸಮುದಾಯದ ಮುಖಂಡರು ಗಮನಕ್ಕೆ ತಂದು ತೆರವುಗೊಳಿಸುವಂತೆ ಮನವಿ ಮಾಡಿದ್ದರು. ಆ ಜಾಗ ಸರ್ವೆ ಮಾಡಿದಾಗ ಒತ್ತುವರಿ ಆಗಿರುವುದು ದೃಢಪಟ್ಟಿತ್ತು. ಹೀಗಾಗಿ ಒತ್ತುವರಿ ತೆರವುಗೊಳಿಸಲಾಗಿದೆ’ ಎಂದು ತಿಳಿಸಿದರು.