<p><strong>ಮುಳಬಾಗಲು: </strong>ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಿಪಿಐ ಹಾಗೂ ಕಿಸಾನ್ ಸಭಾ ಕಾರ್ಯಕರ್ತರು ಬುಧವಾರ ಪಟ್ಟಣದ ಕೆಇಬಿ ವೃತ್ತದಲ್ಲಿ ಮಾನವ ಸರಪಳಿ ನಡೆಸಿ ಪ್ರತಿಭಟಿಸಿದರು. <br /> <br /> ರಾಜ್ಯ ಕಿಸಾನ್ ಸಭಾ ಪ್ರಧಾನ ಕಾರ್ಯದರ್ಶಿ ಎಂ.ಗೋಪಾಲ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಾಲ್ಲೂಕಿನಲ್ಲಿ ವಿದ್ಯುತ್ ಕಡಿತ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.<br /> <br /> ಸಾವಿರಾರು ಎಕರೆ ಪ್ರದೇಶದಲ್ಲಿ ನೆಲಗಡಲೆ ಬೆಳೆ ಬೆಳೆದಿದ್ದು ಅದಕ್ಕೆ ತುಕ್ಕು ರೋಗ ಹಿಡಿದಿರುವುದರಿಂದ ಬೆಳೆ ನಷ್ಟವಾಗಿದೆ. ರೈತ ಸಮುದಾಯ ಬ್ಯಾಂಕ್ ಹಾಗೂ ಇತರೆಡೆಯಿಂದ ಪಡೆದ ಸಾಲ ತೀರಿಸಲಾಗದೆ ಕಂಗಾಲಾಗಿದ್ದಾರೆ. ಕೂಡಲೇ ಪರಿಹಾರ ನೀಡಬೇಕು. ಜಿಲ್ಲೆಗೆ ಅಗತ್ಯವುಳ್ಳ ವಿದ್ಯುತ್ ವಿತರಿಸಬೇಕು ಎಂದು ಆಗ್ರಹಿಸಿದರು. <br /> <br /> ನಂತರ ಉಪ ತಹಶೀಲ್ದಾರ್ ಎಂ.ಕೆ.ರಮೇಶ್ ಮತ್ತು ಬೆಸ್ಕಾಂ ಅಧಿಕಾರಿ ಸತೀಶ್ಗೆ ಮನವಿ ಪತ್ರ ಸಲ್ಲಿಸಿದರು. ಕೋಲಾರ ಸಿಪಿಐ ಕಾರ್ಯದರ್ಶಿ ಸಂಗಸಂದ್ರ ರಾಮಚಂದ್ರ, ತಾಲ್ಲೂಕು ಕಾರ್ಯದರ್ಶಿ ರಾಧಾಕೃಷ್ಣ, ತಾಲ್ಲೂಕು ಅಂಗನ ವಾಡಿ ಕಾರ್ಯಕರ್ತೆಯರ ಅಧ್ಯಕ್ಷೆ ಸಕ್ಕುಭಾಯಿ, ಎಸ್ಎಫ್ಐನ ಗುಜ್ಜಮಾರಂಡಹಳ್ಳಿ ಮುನಿರಾಜು ಮುಂತಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಲು: </strong>ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಿಪಿಐ ಹಾಗೂ ಕಿಸಾನ್ ಸಭಾ ಕಾರ್ಯಕರ್ತರು ಬುಧವಾರ ಪಟ್ಟಣದ ಕೆಇಬಿ ವೃತ್ತದಲ್ಲಿ ಮಾನವ ಸರಪಳಿ ನಡೆಸಿ ಪ್ರತಿಭಟಿಸಿದರು. <br /> <br /> ರಾಜ್ಯ ಕಿಸಾನ್ ಸಭಾ ಪ್ರಧಾನ ಕಾರ್ಯದರ್ಶಿ ಎಂ.ಗೋಪಾಲ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಾಲ್ಲೂಕಿನಲ್ಲಿ ವಿದ್ಯುತ್ ಕಡಿತ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.<br /> <br /> ಸಾವಿರಾರು ಎಕರೆ ಪ್ರದೇಶದಲ್ಲಿ ನೆಲಗಡಲೆ ಬೆಳೆ ಬೆಳೆದಿದ್ದು ಅದಕ್ಕೆ ತುಕ್ಕು ರೋಗ ಹಿಡಿದಿರುವುದರಿಂದ ಬೆಳೆ ನಷ್ಟವಾಗಿದೆ. ರೈತ ಸಮುದಾಯ ಬ್ಯಾಂಕ್ ಹಾಗೂ ಇತರೆಡೆಯಿಂದ ಪಡೆದ ಸಾಲ ತೀರಿಸಲಾಗದೆ ಕಂಗಾಲಾಗಿದ್ದಾರೆ. ಕೂಡಲೇ ಪರಿಹಾರ ನೀಡಬೇಕು. ಜಿಲ್ಲೆಗೆ ಅಗತ್ಯವುಳ್ಳ ವಿದ್ಯುತ್ ವಿತರಿಸಬೇಕು ಎಂದು ಆಗ್ರಹಿಸಿದರು. <br /> <br /> ನಂತರ ಉಪ ತಹಶೀಲ್ದಾರ್ ಎಂ.ಕೆ.ರಮೇಶ್ ಮತ್ತು ಬೆಸ್ಕಾಂ ಅಧಿಕಾರಿ ಸತೀಶ್ಗೆ ಮನವಿ ಪತ್ರ ಸಲ್ಲಿಸಿದರು. ಕೋಲಾರ ಸಿಪಿಐ ಕಾರ್ಯದರ್ಶಿ ಸಂಗಸಂದ್ರ ರಾಮಚಂದ್ರ, ತಾಲ್ಲೂಕು ಕಾರ್ಯದರ್ಶಿ ರಾಧಾಕೃಷ್ಣ, ತಾಲ್ಲೂಕು ಅಂಗನ ವಾಡಿ ಕಾರ್ಯಕರ್ತೆಯರ ಅಧ್ಯಕ್ಷೆ ಸಕ್ಕುಭಾಯಿ, ಎಸ್ಎಫ್ಐನ ಗುಜ್ಜಮಾರಂಡಹಳ್ಳಿ ಮುನಿರಾಜು ಮುಂತಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>