ವಯೋವೃದ್ಧ ಭಿಕ್ಷುಕ ಬ್ರಾಹ್ಮಣರ ಬೀದಿ ಬದಿಯಲ್ಲಿ ಮಧ್ಯಾಹ್ನ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಸಾರ್ವಜನಿಕರು ಈ ಬಗ್ಗೆ ಆಂಬುಲೆನ್ಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ವಿಷಯ ತಿಳಿಸಿದರು. ಆದರೆ, ನಿಯಂತ್ರಣ ಕೊಠಡಿ ಸಿಬ್ಬಂದಿ ಆಂಬುಲೆನ್ಸ್ ಕಳುಹಿಸಲಿಲ್ಲ. ಸಾರ್ವಜನಿಕರು ಮೂರ್ನಾಲ್ಕು ಬಾರಿ ಕರೆ ಮಾಡಿದರೂ ಸಿಬ್ಬಂದಿ ಶೀಘ್ರವೇ ಆಂಬುಲೆನ್ಸ್ ಕಳುಹಿಸುತ್ತೇವೆ ಎಂದು ಹೇಳಿ ನಿರ್ಲಕ್ಷ್ಯ ತೋರಿದ್ದಾರೆ.