<p><strong>ಕೋಲಾರ: </strong>ದಲಿತ ಸಮುದಾಯದವರೊಬ್ಬರ ದೂರನ್ನು ಸ್ವೀಕರಿಸದೆ ಅವಮಾನಿಸಿದ ಪಿಎಸ್ಐ ಕೆ.ಕೆ.ರಘು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ವೇಮಗಲ್ ಗ್ರಾಮಸ್ಥರು ವೇಮಗಲ್ ಠಾಣೆ ಆವರಣದಲ್ಲಿ ಸೋಮವಾರ ಧರಣಿ ನಡೆಸಿದರು.<br /> <br /> ದಲಿತ ಸಮುದಾಯದ ಕೃಷ್ಣಪ್ಪ ಎಂಬುವರ ಜಮೀನನ್ನು ಲಪಟಾಯಿಸಲು ಹಲವರು ಸಂಚು ರೂಪಿಸಿ ಹಲ್ಲೆ ನಡೆಸಿದ್ದಾರೆ. ಆ ಬಗ್ಗೆ ದೂರು ನೀಡಲು ಠಾಣೆಗೆ ಬಂದ ಕೃಷ್ಣಪ್ಪನ ಜೊತೆಗೆ ಪಿಎಸೈ ರಘು ಅಮಾನವೀಯವಾಗಿ ವರ್ತಿಸಿ, ಅವರ ವಿರುದ್ಧವೇ ದೂರು ದಾಖಲಿಸಿ ದಲಿತ ವಿರೋಧಿ ಧೋರಣೆಯನ್ನು ತೋರಿದ್ದಾರೆ ಎಂದು ಧರಣಿ ನಿರತರು ಆರೋಪಿಸಿದರು.<br /> <br /> ಕುರಿ, ಮೇಕೆ ಹಾಗೂ ಮನೆ ಬಳಕೆಯ ವಸ್ತುಗಳನ್ನು ಠಾಣೆ ಮುಂದೆ ಪ್ರದರ್ಶಿಸಿ ಮೂರು ಗಂಟೆ ಕಾಲ ಧರಣಿ ನಡೆಸಿದ ಪ್ರತಿಭಟನಾನಿರತರು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬರಬೇಕು ಎಂದು ಪಟ್ಟು ಹಿಡಿದರು.<br /> <br /> ಡಿವೈಎಸ್ಪಿ ಶ್ರೀಹರಿ ಬರಗೂರು ಸ್ಥಳಕ್ಕೆ ಬಂದು ಧರಣಿನಿರತರ ಅಹವಾಲುಗಳನ್ನು ಆಲಿಸಿದರು. ಕೃಷ್ಣಪ್ಪನ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ ನಂತರ ಧರಣಿಯನ್ನು ಕೊನೆಗೊಳಿಸಲಾಯಿತು.<br /> <br /> ಮುಖಂಡರಾದ ವಿಜಯಕುಮಾರ್, ಪಂಡಿತ್ ಮುನಿವೆಂಕಟಪ್ಪ, ವೆಂಕಟೇಶ್, ಮುನಿಆಂಜಿನಯ್ಯ, ಕೃಷ್ಣ, ವೆಂಕಟೇಶ್, ಮುನಿಸ್ವಾಮಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ದಲಿತ ಸಮುದಾಯದವರೊಬ್ಬರ ದೂರನ್ನು ಸ್ವೀಕರಿಸದೆ ಅವಮಾನಿಸಿದ ಪಿಎಸ್ಐ ಕೆ.ಕೆ.ರಘು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ವೇಮಗಲ್ ಗ್ರಾಮಸ್ಥರು ವೇಮಗಲ್ ಠಾಣೆ ಆವರಣದಲ್ಲಿ ಸೋಮವಾರ ಧರಣಿ ನಡೆಸಿದರು.<br /> <br /> ದಲಿತ ಸಮುದಾಯದ ಕೃಷ್ಣಪ್ಪ ಎಂಬುವರ ಜಮೀನನ್ನು ಲಪಟಾಯಿಸಲು ಹಲವರು ಸಂಚು ರೂಪಿಸಿ ಹಲ್ಲೆ ನಡೆಸಿದ್ದಾರೆ. ಆ ಬಗ್ಗೆ ದೂರು ನೀಡಲು ಠಾಣೆಗೆ ಬಂದ ಕೃಷ್ಣಪ್ಪನ ಜೊತೆಗೆ ಪಿಎಸೈ ರಘು ಅಮಾನವೀಯವಾಗಿ ವರ್ತಿಸಿ, ಅವರ ವಿರುದ್ಧವೇ ದೂರು ದಾಖಲಿಸಿ ದಲಿತ ವಿರೋಧಿ ಧೋರಣೆಯನ್ನು ತೋರಿದ್ದಾರೆ ಎಂದು ಧರಣಿ ನಿರತರು ಆರೋಪಿಸಿದರು.<br /> <br /> ಕುರಿ, ಮೇಕೆ ಹಾಗೂ ಮನೆ ಬಳಕೆಯ ವಸ್ತುಗಳನ್ನು ಠಾಣೆ ಮುಂದೆ ಪ್ರದರ್ಶಿಸಿ ಮೂರು ಗಂಟೆ ಕಾಲ ಧರಣಿ ನಡೆಸಿದ ಪ್ರತಿಭಟನಾನಿರತರು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬರಬೇಕು ಎಂದು ಪಟ್ಟು ಹಿಡಿದರು.<br /> <br /> ಡಿವೈಎಸ್ಪಿ ಶ್ರೀಹರಿ ಬರಗೂರು ಸ್ಥಳಕ್ಕೆ ಬಂದು ಧರಣಿನಿರತರ ಅಹವಾಲುಗಳನ್ನು ಆಲಿಸಿದರು. ಕೃಷ್ಣಪ್ಪನ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ ನಂತರ ಧರಣಿಯನ್ನು ಕೊನೆಗೊಳಿಸಲಾಯಿತು.<br /> <br /> ಮುಖಂಡರಾದ ವಿಜಯಕುಮಾರ್, ಪಂಡಿತ್ ಮುನಿವೆಂಕಟಪ್ಪ, ವೆಂಕಟೇಶ್, ಮುನಿಆಂಜಿನಯ್ಯ, ಕೃಷ್ಣ, ವೆಂಕಟೇಶ್, ಮುನಿಸ್ವಾಮಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>