ಜ್ಞಾನ ವೃದ್ಧಿ: ‘ಕಂಪ್ಯೂಟರ್ ತರಬೇತಿಯಿಂದ ವಿದ್ಯಾರ್ಥಿಗಳ ಜ್ಞಾನ ವೃದ್ಧಿಯಾಗುತ್ತದೆ. ಈಗ ಪ್ರತಿ ಕ್ಷೇತ್ರದಲ್ಲೂ ಆನ್ಲೈನ್ ವ್ಯವಸ್ಥೆ ಜಾರಿಯಾಗಿದ್ದು, ಕೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಕಂಪ್ಯೂಟರ್ ಜ್ಞಾನ ಇದೆಯೇ ಎಂದು ಕೇಳುತ್ತಾರೆ. ಆದ ಕಾರಣ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಕಂಪ್ಯೂಟರ್ ತರಬೇತಿ ಪಡೆಯಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸೆಪಟ್ ಸಲಹೆ ನೀಡಿದರು.