ಕೆಜಿಎಫ್: ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೆಬಲ್ ಮಂಜು, ಮರಳು ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕನೊಬ್ಬರ ಬಳಿ ಹಣಕ್ಕೆ ಒತ್ತಾಯಿಸುತ್ತಿರುವ ದೃಶ್ಯ ಶುಕ್ರವಾರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ವಾಹನದಲ್ಲಿ ಕುಳಿತು ಟ್ರ್ಯಾಕ್ಟರ್ ಚಾಲಕರ ಜೊತೆ ಮಾತನಾಡುತ್ತಿರುವ ದೃಶ್ಯ ಜಾಲತಾಣದಲ್ಲಿ ಹರಿದಾಡುತ್ತಿದೆ. ₹ 2.5 ಸಾವಿರ ಹಣ ನೀಡುವಂತೆ ಬಲವಂತ ಮಾಡುತ್ತಿರುವುದು ಸಂಭಾಷಣೆಯಲ್ಲಿ ಸ್ಪಷ್ಟವಾಗಿ ಕೇಳುತ್ತದೆ.
ಜಿಲ್ಲಾ ಪೊಲೀಸ್ ಕೇಂದ್ರದಲ್ಲಿ ವಾಹನ ಚಾಲಕನಾಗಿ ಮಂಜು ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಾನು ಡಿಸಿಐಬಿ, ಡಿಸಿಬಿ ಸ್ಕ್ವಾಡ್ಗಳಿಗೆ ಮಾಮೂಲಿ ಕೊಡಬೇಕು. ಎರಡೂವರೆ ಸಾವಿರ ಕೊಡು’ ಈತ ಒತ್ತಾಯಿಸುತ್ತಿದ್ದಾನೆ.