<p><strong>ಕೋಲಾರ:</strong> ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿ ದಿನ ಸಮರ್ಪಕವಾಗಿ ಐದು ಗಂಟೆ ಕಾಲ ವಿದ್ಯುತ್ ಸರಬರಾಜು ಮಾಡಬೇಕು. ಯಾವುದೇ ಕಾರಣಕ್ಕೂ ಸರಬರಾಜಿನಲ್ಲಿ ವ್ಯತ್ಯಯವಾಗಬಾರದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ.ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆ ಮತ್ತು ಬೆಸ್ಕಾಂ ಕಾರ್ಯ ನಿರ್ವಹಣೆ ಕುರಿತು ಪರಿಶೀಲಿಸುವ ಸಲುವಾಗಿ ನಗರಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಡನೆ ಚರ್ಚಿಸಿದರು. <br /> ಬೆಸ್ಕಾಂ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಜಿಲ್ಲಾ ಪಂಚಾಯಿತಿಯಲ್ಲಿ ಜನ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಭೆ ನಡೆಸಿದರು. <br /> <br /> ಸಾರ್ವಜನಿಕ ಕುಡಿಯುವ ನೀರು ಯೋಜನೆಗಾಗಿ ಕೊರೆಸಿರುವ ಕೊಳವೆಬಾವಿಗಳಲ್ಲಿ ನೀರು ಲಭ್ಯವಾಗಿದೆ ಎಂಬ ಮಾಹಿತಿ ಬಂದ ತಕ್ಷಣವೇ ವಿದ್ಯುತ್ ಸಂಪರ್ಕ ನೀಡಬೇಕು. ನಂತರ ಅದಕ್ಕೆ ಸಂಬಂಧಿಸಿದ ನಿಯಮಾವಳಿ ಪ್ರಕ್ರಿಯೆ ಪಾಲಿಸಬೇಕು ಎಂದು ಸೂಚಿಸಿದರು.<br /> <br /> ಶ್ರೀನಿವಾಸಪುರ ತಾಲ್ಲೂಕಿನ ಗೌನಪಲ್ಲಿ, ಕೋಲಾರ ತಾಲ್ಲೂಕಿನ ಹುತ್ತೂರು ಹಾಗೂ ದೋಣಿ ಮಡಗು ಗ್ರಾಮದಲ್ಲಿನ ಕೇಂದ್ರಗಳ 22 ಕೆವಿ ವಿದ್ಯುತ್ ಸಾಮರ್ಥ್ಯವನ್ನು 46ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಬೆಸ್ಕಾಂನಲ್ಲಿ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರದಲ್ಲೇ 1 ಸಾವಿರ ಲೈನ್ಮ್ಯೋನ್ಗಳ ನೇಮಕವಾಗಲಿದೆ ಎಂದರು.<br /> <br /> ಹುತ್ತೂರು ಹೋಬಳಿ ಕೇಂದ್ರದಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪಿಸಬೇಕು ಎಂದು ಇದೇ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಮನವಿ ಮಾಡಿದರು. ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಮ್ಮ ಕ್ಷೇತ್ರದಲ್ಲಿರುವ ವಿದ್ಯುತ್ ಸಮಸ್ಯೆ ಕುರಿತು ವಿವರಿಸಿದರು.<br /> <br /> ಜಿಲ್ಲಾಧಿಕಾರಿ ಮನೋಜ್ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಶಾಂತಪ್ಪ ಮತ್ತು ಉಪಾಧ್ಯಕ್ಷ ಜಿ.ಸೋಮಶೇಖರ್, ಬೆಸ್ಕಾಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉದಯ್ಕುಮಾರ್ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿ ದಿನ ಸಮರ್ಪಕವಾಗಿ ಐದು ಗಂಟೆ ಕಾಲ ವಿದ್ಯುತ್ ಸರಬರಾಜು ಮಾಡಬೇಕು. ಯಾವುದೇ ಕಾರಣಕ್ಕೂ ಸರಬರಾಜಿನಲ್ಲಿ ವ್ಯತ್ಯಯವಾಗಬಾರದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ.ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆ ಮತ್ತು ಬೆಸ್ಕಾಂ ಕಾರ್ಯ ನಿರ್ವಹಣೆ ಕುರಿತು ಪರಿಶೀಲಿಸುವ ಸಲುವಾಗಿ ನಗರಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಡನೆ ಚರ್ಚಿಸಿದರು. <br /> ಬೆಸ್ಕಾಂ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಜಿಲ್ಲಾ ಪಂಚಾಯಿತಿಯಲ್ಲಿ ಜನ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಭೆ ನಡೆಸಿದರು. <br /> <br /> ಸಾರ್ವಜನಿಕ ಕುಡಿಯುವ ನೀರು ಯೋಜನೆಗಾಗಿ ಕೊರೆಸಿರುವ ಕೊಳವೆಬಾವಿಗಳಲ್ಲಿ ನೀರು ಲಭ್ಯವಾಗಿದೆ ಎಂಬ ಮಾಹಿತಿ ಬಂದ ತಕ್ಷಣವೇ ವಿದ್ಯುತ್ ಸಂಪರ್ಕ ನೀಡಬೇಕು. ನಂತರ ಅದಕ್ಕೆ ಸಂಬಂಧಿಸಿದ ನಿಯಮಾವಳಿ ಪ್ರಕ್ರಿಯೆ ಪಾಲಿಸಬೇಕು ಎಂದು ಸೂಚಿಸಿದರು.<br /> <br /> ಶ್ರೀನಿವಾಸಪುರ ತಾಲ್ಲೂಕಿನ ಗೌನಪಲ್ಲಿ, ಕೋಲಾರ ತಾಲ್ಲೂಕಿನ ಹುತ್ತೂರು ಹಾಗೂ ದೋಣಿ ಮಡಗು ಗ್ರಾಮದಲ್ಲಿನ ಕೇಂದ್ರಗಳ 22 ಕೆವಿ ವಿದ್ಯುತ್ ಸಾಮರ್ಥ್ಯವನ್ನು 46ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಬೆಸ್ಕಾಂನಲ್ಲಿ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರದಲ್ಲೇ 1 ಸಾವಿರ ಲೈನ್ಮ್ಯೋನ್ಗಳ ನೇಮಕವಾಗಲಿದೆ ಎಂದರು.<br /> <br /> ಹುತ್ತೂರು ಹೋಬಳಿ ಕೇಂದ್ರದಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪಿಸಬೇಕು ಎಂದು ಇದೇ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಮನವಿ ಮಾಡಿದರು. ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಮ್ಮ ಕ್ಷೇತ್ರದಲ್ಲಿರುವ ವಿದ್ಯುತ್ ಸಮಸ್ಯೆ ಕುರಿತು ವಿವರಿಸಿದರು.<br /> <br /> ಜಿಲ್ಲಾಧಿಕಾರಿ ಮನೋಜ್ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಶಾಂತಪ್ಪ ಮತ್ತು ಉಪಾಧ್ಯಕ್ಷ ಜಿ.ಸೋಮಶೇಖರ್, ಬೆಸ್ಕಾಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉದಯ್ಕುಮಾರ್ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>