ಕೈಗಡ ಸಾಲ ಜೊತೆಗೆ ಶ್ರೀರಾಮನಗರದ ಸಿಂಡಿಕೇಟ್ ಬ್ಯಾಂಕ್ ಮತ್ತು ಕೆಎಂಎಫ್ ಸಹಕಾರಿ ಬ್ಯಾಂಕ್ನಲ್ಲಿ ಸಾಲ ಸೇರಿ ಒಟ್ಟು ₹ 3ಲಕ್ಷ ಸಾಲ ತೀರಿಸಬೇಕಿತ್ತು. ಇದರಿಂದ ನೊಂದು ಜಮೀನಿನಲ್ಲೇ ಕ್ರಿಮಿನಾಶಕ ಸೇವಿಸಿದರು. ಅಸ್ವಸ್ಥಗೊಂಡ ಅವರನ್ನು ಗಂಗಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮಧ್ಯಾಹ್ನ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.