ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಮಾತನಾಡಿ ‘ಜಿಲ್ಲೆಯಲ್ಲಿ ಈ ವರ್ಷದ ಜೂನ್ನಿಂದ ಸೆಪ್ಟೆಂಬರ್ ಅವಧಿಯಲ್ಲಿ ವಾಡಿಕೆ 38.3 ಸೆಂ.ಮೀ. ಮಳೆಯಿದ್ದು, 44.8ಸೆಂ.ಮೀ. ಆಗಿದೆ. ಮಳೆಯಿಂದ ಭಾಗಶಃ 841 ಮನೆಗಳು ಹಾನಿಯಾಗಿದ್ದು, ಈ ಪೈಕಿ 833 ಮನೆಗಳಿಗೆ ₹4.50 ಕೋಟಿ ಪರಿಹಾರ ನೀಡಲಾಗಿದೆ. ಬಾಕಿ ಉಳಿದ ಮನೆಗಳಿಗೆ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಕಳೆದ ಮೂರು ದಿನಗಳಿಂದ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಸುಮಾರು ₹200 ಮನೆಗಳು ಹಾನಿಯಾಗಿದ್ದು, ಸದರಿ ಹಾನಿಯಾದ ಮನೆಗಳಿಗೆ ಶೀಘ್ರವಾಗಿ ಪರಿಹಾರ ವಿತರಿಸಲಾಗುವುದು’ ಎಂದರು.