ಒಂದು ತಿಂಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ ಐಸಿಸಿ ಸಲಹಾ ಸಮಿತಿಯ ತುರ್ತು ಸಭೆಯಲ್ಲಿ ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನ.10ರ ವರೆಗೆ 1,000 ಕ್ಯೂಸೆಕ್ನಂತೆ ಅಥವಾ ಜಲಾಶಯದ ನೀರಿನ ಮಟ್ಟ 1,600 ಅಡಿ ತಲುಪುವವರೆಗೆ ಲಭ್ಯತೆ ಅನುಸಾರ ಮುಂಬರುವ ಒಳಹರಿವಿನ ಪರಿಗಣಿಸಿ ನೀರು ಹರಿಸಲು ನಿರ್ಧರಿಸಲಾಗಿತ್ತು. ಅದರಂತೆ ಇದೇ 10ರಂದು ನೀರು ನಿಲುಗಡೆಯಾಗಲಿದೆ. ಆದರೆ, ಆ ಭಾಗದ ರೈತರು ನ. 15ರ ತನಕ ನೀರು ಹರಿಸುವಂತೆ ಆಗ್ರಹಿಸುತ್ತಿದ್ದಾರೆ.