ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ| ಗಿಣಿಗೇರಾ-ರಾಯಚೂರು ರೈಲು ಮಾರ್ಗಕ್ಕೆ ₹300 ಕೋಟಿ

Last Updated 5 ಫೆಬ್ರುವರಿ 2023, 6:03 IST
ಅಕ್ಷರ ಗಾತ್ರ

ಕೊಪ್ಪಳ: ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಗಿಣಿಗೇರಾ-ರಾಯಚೂರು (ಮುನಿರಾಬಾದ್-ಮಹಿಬೂಬನಗರ) ರೈಲ್ವೆ ಕಾಮಗಾರಿಗೆ ₹300 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಸಂಸದ ಸಂಗಣ್ಣ ಕರಡಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ‘ಗದಗ (ತಳಕಲ್)- ವಾಡಿ ಕಾಮಗಾರಿಗೆ ₹350 ಕೋಟಿ, ಕೊಪ್ಪಳ ಮತ್ತು ಹುಲಗಿ ರೈಲು ನಿಲ್ದಾಣಗಳ ಅಭಿವೃದ್ಧಿಗೆ ಅಮೃತ ಭಾರತ ಯೋಜನೆಯಡಿ ಕಾಮಗಾರಿ ನಡೆಸಲಾಗುತ್ತದೆ’ ಎಂದು ಹೇಳಿದ್ದಾರೆ.

‘ಗೇಟ್‌ ಸಂಖ್ಯೆ 66ರ ಕುಷ್ಟಗಿ ಗೇಟ್‌ ಬಳಿ ಮೇಲ್ಸೇತುವೆ ಕಾಮಗಾರಿಗೆ ₹5 ಕೋಟಿ, ಗಿಣಗೇರಾ ಗೇಟ್‌ ಬಳಿ ಮೇಲ್ಸೇತುವೆಗೆ ₹4 ಕೋಟಿ ಮತ್ತು ಹುಲಗಿ ಗೇಟ್‌ ಮೇಲ್ಸೇತುವೆಗೆ ₹3 ಕೋಟಿ ನೀಡಲಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT