350 ವರ್ಷಗಳ ಹಿಂದೆ ವಿಜಯನಗರ ಸಾಮ್ರಾಜ್ಯದಲ್ಲಿ ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಆಯಾ ಸ್ಥಳಗಳಲ್ಲಿ 11 ಅಣೆಕಟ್ಟೆಗಳನ್ನು ಹಾಗೂ 16 ಕಾಲುವೆಗಳ ಜಾಲ ನಿರ್ಮಿಸಲಾಗಿದೆ. ಒಟ್ಟು ಕಾಲುವೆಗಳ ಉದ್ದ 215 ಕಿ.ಮೀ ಇದ್ದು, ಅಣೆಕಟ್ಟೆ ಪ್ರದೇಶವು 11,154 ಹೆಕ್ಟೇರ್ ಇದೆ. ಜಿಲ್ಲೆಯಲ್ಲಿ ಹುಲಿಗಿ, ಶಿವಪುರ, ಆನೆಗೊಂದಿ, ಗಂಗಾವತಿಯ ಅಪ್ಪರ್ ಮತ್ತು ಲೋವರ್ ಎಡದಂಡೆ ಕಾಲುವೆಗಳು ಹಾಗೂ ಅಣೆಕಟ್ಟೆ ಪ್ರದೇಶವು ಒಟ್ಟು 2,899 ಹೆಕ್ಟೇರ್ ಇದೆ ಎಂದರು.